ಮೈಸೂರು: ಪಡಿತರದಲ್ಲಿ 5 ಕೆಜಿ ಅಕ್ಕಿ, 5 ಕೆಜಿ ಸಿರಿಧಾನ್ಯ, ಜೊತೆಗೆ ಅರ್ಧ ಲೀಟರ್ ನಂದಿನಿ ಹಾಲು ಸೇರಿಸಿ ನಾವು ಸಂಪೂರ್ಣ ಆರೋಗ್ಯ ಕಿಟ್ ಕೊಡುತ್ತಿದ್ದೇವೆ. ಆರ್ಥಿಕ ದುರ್ಬಲರಿಗೆ ಒಳ್ಳೆಯ ಆಹಾರ ಸಿಗುವ ಸಲುವಾಗಿ ಈ ಪ್ಯಾಕೇಜ್ ಕೊಡುತ್ತಿದ್ದೀವಿ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಅವರು ಇಂದು ಮೈಸೂರಿನಲ್ಲಿ ಸಾರ್ವಜನಿಕ ರೋಡ್ ಶೋಗೂ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ರೈತರು ಬೆಳೆಯುವ ಜೋಳ, ರಾಗಿ ಸೇರಿದಂತೆ ಎಲ್ಲ ಸಿರಿಧಾನ್ಯಗಳನ್ನು ಅವರಿಂದ ಖರೀದಿ ಮಾಡಿ ಅವರಿಗೆ ಬೆಂಬಲ ನೀಡುವ ಯೋಜನೆ ನಮ್ಮದು. ಇದರಿಂದ ಪೌಷ್ಠಿಕ ಆಹಾರ ಕೂಡ ಸಿಗುತ್ತದೆ. ಹಾಲು ಕೊಡುವುದರಿಂದ ರೈತರಿಂದ ದೊಡ್ಡ ಪ್ರಮಾಣದ ಖರೀದಿ ಆಗುತ್ತದೆ ಮತ್ತು ಅವರಿಗೆ ಉತ್ಪಾದನೆ ಮಾಡಲು ಬೆಂಬಲ ಸಿಗುತ್ತದೆ. ಈ ಬಗ್ಗೆ ಸಮಗ್ರ ಚಿಂತನೆ ಮಾಡಿ ಈ ಯೋಜನೆ ಮಾಡಿದ್ದೇವೆ. ಸಿರಿಧಾನ್ಯ ಉತ್ಪಾದನೆಗೆ ಸಾಕಷ್ಟು ಪ್ರೋತ್ಸಾಹ ಸಿಗುತ್ತಿದೆ. ಬೆಲೆ ಕಡಿಮೆ ಇದ್ದ ರಾಗಿ ಪಡಿತರದಲ್ಲಿ ಕೊಟ್ಟ ಮೇಲೆ ಹೆಚ್ಚಿನ ಉತ್ಪಾದನೆ ಆಗ್ತಿದೆ ಮತ್ತು ಉತ್ತಮ ಬೆಲೆ ಕೂಡ ಸಿಗ್ತಿದೆ. ನಮ್ಮ ಪೋಷಣ್ ಅಭಿಯಾಣದಲ್ಲಿ ಇದೆಲ್ಲವೂ ಸೇರುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಕಾಂಗ್ರೆಸ್ ಘೋಷಣೆ ಮಾಡಿದ್ದ ಯೋಜನೆಗಳಲ್ಲಿ 65% ಅವರೇ ಮಾಡಿಲ್ಲ. ಮೊದಲು ಅವರು ರಿಪೋರ್ಟ್ ಕಾರ್ಡ್ ಕೊಡಲಿ. ನಮ್ಮ ಕಾಲದಲ್ಲಿ ಕೋವಿಡ್ ಬಂದಿದ್ದರಿಂದ ಸ್ವಲ್ಪ ಮಾರ್ಪಾಡು ಮಾಡಿಕೊಂಡು ಹೊಸ ಸ್ಕೀಂಗಳನ್ನು ಕೊಟ್ಟಿದ್ದೇವೆ. ಇದನ್ನು ವಿಧಾನಸಭೆಯಲ್ಲೂ ಹೇಳಿದ್ದೇನೆ. ನಾನು ಬಜೆಟ್ ನಲ್ಲೇ ವಿದ್ಯಾರ್ಥಿನಿಯರಿಗೆ ಮತ್ತು ದುಡಿಯುವ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಘೋಷಣೆ ಮಾಡಿದ್ದೆ. ಎಸ್ಸಿ ಎಸ್ಟಿ ಕುಟುಂಬಕ್ಕೆ 75 ಯೂನಿಟ್ ಉಚಿತ ವಿದ್ಯುತ್ ಎಂದು ಹೇಳಿದ್ದೆ, ಅದನ್ನೇ ಕಾಂಗ್ರೆಸ್ ಅವರು ಕಾಪಿ ಮಾಡಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…