Featured

ಆರ್ಥಿಕ ಪರಿಸ್ಥಿತಿ ಹದಗೆಡಲು ಮೋದಿ ಸರ್ಕಾರದ ತಪ್ಪು ನಿರ್ವಹಣೆಯೇ ಕಾರಣ : ಕಾಂಗ್ರೆಸ್ ವಾಗ್ದಾಳಿ -Vishwanews24

ಆರ್ಥಿಕ ಪರಿಸ್ಥಿತಿ ಹದಗೆಡಲು ಮೋದಿ ಸರ್ಕಾರದ ತಪ್ಪು ನಿರ್ವಹಣೆಯೇ ಕಾರಣ : ಕಾಂಗ್ರೆಸ್ ವಾಗ್ದಾಳಿ -Vishwanews24

ನವದೆಹಲಿ: ದೇಶದ ಜನ ಆರ್ಥಿಕ ಬೆಳವಣಿಗೆ ಕುಂಠಿತ ಹಾಗೂ ಹಣದುಬ್ಬರ ಏರಿಕೆಯ ಎರಡೆರಡು ಹೊಡೆತಕ್ಕೆ ಸಿಲುಕಿದ್ದಾರೆ. ಆರ್ಥಿಕ ಸ್ಥಿತಿಯು ಈ ಮಟ್ಟಕ್ಕೆ ತಲುಪಲು ಮೋದಿ ಸರ್ಕಾರದ ತಪ್ಪು ನಿರ್ವಹಣೆಯೇ ಕಾರಣ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ತಯಾರಿಕೆ, ಕಟ್ಟಡ ನಿರ್ಮಾಣ ಮತ್ತು ಕೃಷಿ ವಲಯಗಳಲ್ಲಿ ಚೇತರಿಕೆ ಕಂಡುಬಂದ ಕಾರಣದಿಂದಾಗಿ ದೇಶದ ಅರ್ಥ ವ್ಯವಸ್ಥೆಯು ಡಿಸೆಂಬರ್‌ ತ್ರೈಮಾಸಿಕದಲ್ಲಿ ಬೆಳವಣಿಗೆಯ ಹಾದಿಗೆ ಮರಳಿದೆ. ಜಿಡಿಪಿಯು 0.4ರಷ್ಟು ಬೆಳವಣಿಗೆ ಕಂಡಿದೆ ಎಂದು ಶುಕ್ರವಾರ ವರದಿಯಾಗಿತ್ತು. ಆದರೆ, ಹಿಂದಿನ ಸತತ ಎರಡು ತ್ರೈಮಾಸಿಕಗಳಲ್ಲಿ ದೇಶದ ಅರ್ಥ ವ್ಯವಸ್ಥೆಯು ಹಿಂಜರಿತ ಅನುಭವಿಸಿತ್ತು.

ಈ ಬಾರಿ ಉತ್ತಮ ಬಜೆಟ್ ; ರಾಜ್ಯದ ಜನರು ಸಂಕಷ್ಟಗಳಿಂದ ದೂರವಾಗಿ ಉತ್ತಮ ಜೀವನ ನಡೆಸಬೇಕು ಎನ್ನುವುದು ನನ್ನ ಇಚ್ಛೆ : ಸಿಎಂ BSY -Vishwanews24

ಮೂರನೇ ತ್ರೈಮಾಸಿಕದ ಜಿಡಿಪಿ ದತ್ತಾಂಶವು ಭಾರತೀಯ ಆರ್ಥಿಕತೆಯಲ್ಲಿ ದೋಷದ ಅಂಶಗಳು ಹಿಂದೆಂದಿಗಿಂತಲೂ ಹೆಚ್ಚು ಗೋಚರಿಸುತ್ತವೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಕಾಂಗ್ರೆಸ್‌ನ ಮುಖ್ಯ ವಕ್ತಾರ ರಣದೀಪ್ ಸುರ್ಜೆವಾಲ ಹೇಳಿದ್ದಾರೆ.

2020-21ನೇ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ಆರ್ಥಿಕತೆಯು ಕೇವಲ ಶೇ 0.4 ರಷ್ಟು ಬೆಳವಣಿಗೆ ಕಂಡಿದೆ. ಇದು ಅಂದಾಜಿಸಿದ್ದಕ್ಕಿಂತಲೂ ಕಡಿಮೆಯಾಗಿದೆ ಎಂದು ಅವರು ಹೇಳಿದ್ದಾರೆ.

ಅಂತರಾಷ್ಟ್ರೀಯ ವಿಮಾನ ಸಂಚಾರ ನಿಷೇಧ ಮಾರ್ಚ್ 31ರವರೆಗೆ ವಿಸ್ತರಣೆ -Vishwanews24

‘ಇಡೀ ಹಣಕಾಸು ವರ್ಷದ ಮುಂಗಡ ಅಂದಾಜಿನ ಬಗ್ಗೆ ಕಾಳಜಿ ವಹಿಸಬೇಕಿದೆ. 2020–21ನೇ ಸಾಲಿನ ಜಿಡಿಪಿ ಬೆಳವಣಿಗೆ ದರ ಶೇ –7.7ರಷ್ಟಿರಲಿದೆ ಎಂದು ಕೇಂದ್ರ ಸಾಂಖ್ಯಿಕ ಕಚೇರಿಯು ಈ ಹಿಂದೆ ಅಂದಾಜಿಸಿತ್ತು. ಆದರೆ ಈಗ ಶೇ –8ರಷ್ಟಿರಲಿದೆ ಎಂದು ಹೇಳಿದೆ’ ಎಂದು ಅವರು ಹೇಳಿದ್ದಾರೆ.

ಮೊದಲ ತ್ರೈಮಾಸಿಕದ ಜಿಡಿಪಿ ಶೇ –23.9 ಇರಲಿದೆ ಎಂದು ಈ ಹಿಂದೆ ಅಂದಾಜಿಸಿದ್ದರೆ ಈಗ ಪರಿಷ್ಕರಣೆಗೊಳಿಸಿ ಶೇ –24.4 ಎಂದಿರುವುದೂ ಗಮನಾರ್ಹ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಯೋಧ್ಯೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ಕೇಂದ್ರ ಸರ್ಕಾರ ಸಮ್ಮತಿ -Vishwanews24

ಸರಿಯಾದ ಯೋಜನೆಯಿಲ್ಲದ ಮತ್ತು ಸಮರ್ಪಕವಲ್ಲದ ಲಾಕ್‌ಡೌನ್‌ನಿಂದಾಗಿ ಆರ್ಥಿಕತೆಯು ಹೊಡೆತ ಅನುಭವಿಸುವಂತಾಗಿದೆ. ಇದು ಈಗಾಗಲೇ ಸರಕು ಮತ್ತು ಸೇವಾ ತೆರಿಗೆಯ (ಜಿಎಸ್‌ಟಿ) ಅಸಮರ್ಪಕ ಅನುಷ್ಠಾನ, ನೋಟು ರದ್ದತಿಯಿಂದ ಆದ ಏಟಿಗೆ ಬರೆ ಎಳೆದಂತಾಗಿದೆ ಎಂದು ಸುರ್ಜೆವಾಲ ಟೀಕಿಸಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago