ನವದೆಹಲಿ: ದೇಶದ ಜನ ಆರ್ಥಿಕ ಬೆಳವಣಿಗೆ ಕುಂಠಿತ ಹಾಗೂ ಹಣದುಬ್ಬರ ಏರಿಕೆಯ ಎರಡೆರಡು ಹೊಡೆತಕ್ಕೆ ಸಿಲುಕಿದ್ದಾರೆ. ಆರ್ಥಿಕ ಸ್ಥಿತಿಯು ಈ ಮಟ್ಟಕ್ಕೆ ತಲುಪಲು ಮೋದಿ ಸರ್ಕಾರದ ತಪ್ಪು ನಿರ್ವಹಣೆಯೇ ಕಾರಣ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ತಯಾರಿಕೆ, ಕಟ್ಟಡ ನಿರ್ಮಾಣ ಮತ್ತು ಕೃಷಿ ವಲಯಗಳಲ್ಲಿ ಚೇತರಿಕೆ ಕಂಡುಬಂದ ಕಾರಣದಿಂದಾಗಿ ದೇಶದ ಅರ್ಥ ವ್ಯವಸ್ಥೆಯು ಡಿಸೆಂಬರ್ ತ್ರೈಮಾಸಿಕದಲ್ಲಿ ಬೆಳವಣಿಗೆಯ ಹಾದಿಗೆ ಮರಳಿದೆ. ಜಿಡಿಪಿಯು 0.4ರಷ್ಟು ಬೆಳವಣಿಗೆ ಕಂಡಿದೆ ಎಂದು ಶುಕ್ರವಾರ ವರದಿಯಾಗಿತ್ತು. ಆದರೆ, ಹಿಂದಿನ ಸತತ ಎರಡು ತ್ರೈಮಾಸಿಕಗಳಲ್ಲಿ ದೇಶದ ಅರ್ಥ ವ್ಯವಸ್ಥೆಯು ಹಿಂಜರಿತ ಅನುಭವಿಸಿತ್ತು.
ಮೂರನೇ ತ್ರೈಮಾಸಿಕದ ಜಿಡಿಪಿ ದತ್ತಾಂಶವು ಭಾರತೀಯ ಆರ್ಥಿಕತೆಯಲ್ಲಿ ದೋಷದ ಅಂಶಗಳು ಹಿಂದೆಂದಿಗಿಂತಲೂ ಹೆಚ್ಚು ಗೋಚರಿಸುತ್ತವೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಕಾಂಗ್ರೆಸ್ನ ಮುಖ್ಯ ವಕ್ತಾರ ರಣದೀಪ್ ಸುರ್ಜೆವಾಲ ಹೇಳಿದ್ದಾರೆ.
2020-21ನೇ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ಆರ್ಥಿಕತೆಯು ಕೇವಲ ಶೇ 0.4 ರಷ್ಟು ಬೆಳವಣಿಗೆ ಕಂಡಿದೆ. ಇದು ಅಂದಾಜಿಸಿದ್ದಕ್ಕಿಂತಲೂ ಕಡಿಮೆಯಾಗಿದೆ ಎಂದು ಅವರು ಹೇಳಿದ್ದಾರೆ.
ಅಂತರಾಷ್ಟ್ರೀಯ ವಿಮಾನ ಸಂಚಾರ ನಿಷೇಧ ಮಾರ್ಚ್ 31ರವರೆಗೆ ವಿಸ್ತರಣೆ -Vishwanews24
‘ಇಡೀ ಹಣಕಾಸು ವರ್ಷದ ಮುಂಗಡ ಅಂದಾಜಿನ ಬಗ್ಗೆ ಕಾಳಜಿ ವಹಿಸಬೇಕಿದೆ. 2020–21ನೇ ಸಾಲಿನ ಜಿಡಿಪಿ ಬೆಳವಣಿಗೆ ದರ ಶೇ –7.7ರಷ್ಟಿರಲಿದೆ ಎಂದು ಕೇಂದ್ರ ಸಾಂಖ್ಯಿಕ ಕಚೇರಿಯು ಈ ಹಿಂದೆ ಅಂದಾಜಿಸಿತ್ತು. ಆದರೆ ಈಗ ಶೇ –8ರಷ್ಟಿರಲಿದೆ ಎಂದು ಹೇಳಿದೆ’ ಎಂದು ಅವರು ಹೇಳಿದ್ದಾರೆ.
ಮೊದಲ ತ್ರೈಮಾಸಿಕದ ಜಿಡಿಪಿ ಶೇ –23.9 ಇರಲಿದೆ ಎಂದು ಈ ಹಿಂದೆ ಅಂದಾಜಿಸಿದ್ದರೆ ಈಗ ಪರಿಷ್ಕರಣೆಗೊಳಿಸಿ ಶೇ –24.4 ಎಂದಿರುವುದೂ ಗಮನಾರ್ಹ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಯೋಧ್ಯೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ಕೇಂದ್ರ ಸರ್ಕಾರ ಸಮ್ಮತಿ -Vishwanews24
ಸರಿಯಾದ ಯೋಜನೆಯಿಲ್ಲದ ಮತ್ತು ಸಮರ್ಪಕವಲ್ಲದ ಲಾಕ್ಡೌನ್ನಿಂದಾಗಿ ಆರ್ಥಿಕತೆಯು ಹೊಡೆತ ಅನುಭವಿಸುವಂತಾಗಿದೆ. ಇದು ಈಗಾಗಲೇ ಸರಕು ಮತ್ತು ಸೇವಾ ತೆರಿಗೆಯ (ಜಿಎಸ್ಟಿ) ಅಸಮರ್ಪಕ ಅನುಷ್ಠಾನ, ನೋಟು ರದ್ದತಿಯಿಂದ ಆದ ಏಟಿಗೆ ಬರೆ ಎಳೆದಂತಾಗಿದೆ ಎಂದು ಸುರ್ಜೆವಾಲ ಟೀಕಿಸಿದ್ದಾರೆ.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…