Featured

ಆರ್ಥಿಕ ಬಿಕ್ಕಟ್ಟು : ಪಾಕಿಸ್ತಾನದಲ್ಲಿ ಇಂಧನ ಉಳಿಸಲು ಮಾಲ್, ಮಾರ್ಕೆಟ್, ಮದುವೆ ಹಾಲ್‌ಗಳು ಅವಧಿಗೆ ಮುನ್ನವೇ ಬಂದ್ – Vishwanews24

ಆರ್ಥಿಕ ಬಿಕ್ಕಟ್ಟು – ಪಾಕಿಸ್ತಾನದಲ್ಲಿ ಇಂಧನ ಉಳಿಸಲು ಮಾಲ್, ಮಾರ್ಕೆಟ್, ಮದುವೆ ಹಾಲ್‌ಗಳು ಅವಧಿಗೆ ಮುನ್ನವೇ ಬಂದ್

ಇಸ್ಲಾಮಾಬಾದ್: ಆರ್ಥಿಕ ಬಿಕ್ಕಟ್ಟಿನಿಂದ ಒದ್ದಾಡುತ್ತಿರುವ ನೆರೆಯ ಪಾಕಿಸ್ತಾನ ತನ್ನ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸಲು ಒದ್ದಾಡುತ್ತಿದೆ. ಈ ಹಿನ್ನೆಲೆ ಪಾಕಿಸ್ತಾನದ ಸರ್ಕಾರ ಇಂಧನ ಉಳಿಸಲು ಮಾರುಕಟ್ಟೆ, ಮಾಲ್, ಮದುವೆ ಹಾಲ್‌ಗಳನ್ನು ಶೀಘ್ರವೇ ಮುಚ್ಚುವುದಾಗಿ ಘೋಷಿಸಿದೆ.

ಇಂಧನ ಉಳಿಸಲು ಹಾಗೂ ಇತರ ದೇಶಗಳಿಂದ ತೈಲವನ್ನು ಆಮದು ಮಾಡಿಕೊಳ್ಳುವುದನ್ನು ಕಡಿಮೆ ಮಾಡಲು ಈ ನಿರ್ಧಾರವನ್ನು ಮಾಡಲಾಗಿದೆ. ಈ ಕ್ರಮಕ್ಕೆ ಪಾಕಿಸ್ತಾನದ ಕ್ಯಾಬಿನೆಟ್ ಸಚಿವರು ಅನುಮೋದನೆ ನೀಡಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್, ಮಾರುಕಟ್ಟೆ ಹಾಗೂ ಮಾಲ್‌ಗಳನ್ನು ಈಗ ರಾತ್ರಿ 8:30ಕ್ಕೆ ಮುಚ್ಚಲಾಗುತ್ತದೆ. ಮದುವೆ ಮಂಟಪಗಳನ್ನು ರಾತ್ರಿ 10:00 ಗಂಟೆಗೆ ಮುಚ್ಚಲಾಗುತ್ತದೆ. ಈ ಕ್ರಮದಿಂದ ನಮಗೆ 60 ಶತಕೋಟಿ ರೂ. ಉಳಿತಾಯವಾಗುತ್ತದೆ ಎಂದು ತಿಳಿಸಿದ್ದಾರೆ.

ದೇಶದ ಪರಿಸ್ಥಿತಿಯನ್ನು ನಿಭಾಯಿಸಲು ಪಾಕ್ ಇನ್ನೂ ಹಲವು ಕ್ರಮಗಳನ್ನು ಕೈಗೊಂಡಿದೆ. ಪ್ರಕಾಶಮಾನವಾದ ಬಲ್ಬ್ ಉತ್ಪಾದನೆಯನ್ನು ಫೆಬ್ರವರಿ 1 ರಿಂದ ಸ್ಥಗಿತಗೊಳಿಸಲು ಸೂಚಿಸಲಾಗಿದ್ದು, ಜುಲೈ ತಿಂಗಳಿನಿಂದ ಅಸಮರ್ಥ ಫ್ಯಾನ್‌ಗಳ ಉತ್ಪಾದನೆಯನ್ನು ನಿಲ್ಲಿಸಲಾಗುವುದು ಎನ್ನಲಾಗಿದೆ. ಈ ಕ್ರಮದಿಂದ 22 ಶತಕೋಟಿ ರೂ. ಉಳಿತಾಯವಾಗುತ್ತದೆ ಎಂದು ಆಸಿಫ್ ತಿಳಿಸಿದ್ದಾರೆ.

ಪಾಕ್ ಸರ್ಕಾರ 1 ವರ್ಷದೊಳಗೆ ಕಡಿಮೆ ವಿದ್ಯುತ್ ಬಳಸುವ ಗೀಸರ್‌ಗಳನ್ನು ಬಳಸಲು ಹಾಗೂ ಹಳೆಯದನ್ನು ಅಥವಾ ಹೆಚ್ಚು ವಿದ್ಯುತ್ ಉಪಯೋಗಿಸುವ ಗೀಸರ್‌ಗಳನ್ನು ಬದಲಿಲು ಜನರಿಗೆ ಕಡ್ಡಾಯವಾದ ಸೂಚನೆ ನೀಡಿದೆ. ಇದರಿಂದ 92 ಶತಕೋಟಿ ರೂ. ಉಳಿತಾಯವಾಗುತ್ತದೆ. ಬೀದಿ ದೀಪಗಳ ಬದಲು ಪರ್ಯಾಯ ದೀಪ ಬಳಕೆಯಿಂದ 4 ಶತಕೋಟಿ ರೂ. ಉಳಿಸಬಹುದು ಎಂದಿದೆ.

ಎಲ್ಲಾ ಸರ್ಕಾರಿ ಕಟ್ಟಡಗಳು ಹಾಗೂ ಕಚೇರಿಗಳಲ್ಲಿ ಇಂಧನ ಬಳಕೆಯನ್ನು ಕಡಿಮೆ ಮಾಡಲಾಗುತ್ತಿದ್ದು, ಆದಷ್ಟು ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ್ದಾರೆ.

 

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

11 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

12 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

12 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

12 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

12 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

14 hours ago