Featured

ಆರ್ಥಿಕ ಬಿಕ್ಕಟ್ಟು : ಪಾಕಿಸ್ತಾನದಲ್ಲಿ ಇಂಧನ ಉಳಿಸಲು ಮಾಲ್, ಮಾರ್ಕೆಟ್, ಮದುವೆ ಹಾಲ್‌ಗಳು ಅವಧಿಗೆ ಮುನ್ನವೇ ಬಂದ್ – Vishwanews24

ಆರ್ಥಿಕ ಬಿಕ್ಕಟ್ಟು – ಪಾಕಿಸ್ತಾನದಲ್ಲಿ ಇಂಧನ ಉಳಿಸಲು ಮಾಲ್, ಮಾರ್ಕೆಟ್, ಮದುವೆ ಹಾಲ್‌ಗಳು ಅವಧಿಗೆ ಮುನ್ನವೇ ಬಂದ್

ಇಸ್ಲಾಮಾಬಾದ್: ಆರ್ಥಿಕ ಬಿಕ್ಕಟ್ಟಿನಿಂದ ಒದ್ದಾಡುತ್ತಿರುವ ನೆರೆಯ ಪಾಕಿಸ್ತಾನ ತನ್ನ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸಲು ಒದ್ದಾಡುತ್ತಿದೆ. ಈ ಹಿನ್ನೆಲೆ ಪಾಕಿಸ್ತಾನದ ಸರ್ಕಾರ ಇಂಧನ ಉಳಿಸಲು ಮಾರುಕಟ್ಟೆ, ಮಾಲ್, ಮದುವೆ ಹಾಲ್‌ಗಳನ್ನು ಶೀಘ್ರವೇ ಮುಚ್ಚುವುದಾಗಿ ಘೋಷಿಸಿದೆ.

ಇಂಧನ ಉಳಿಸಲು ಹಾಗೂ ಇತರ ದೇಶಗಳಿಂದ ತೈಲವನ್ನು ಆಮದು ಮಾಡಿಕೊಳ್ಳುವುದನ್ನು ಕಡಿಮೆ ಮಾಡಲು ಈ ನಿರ್ಧಾರವನ್ನು ಮಾಡಲಾಗಿದೆ. ಈ ಕ್ರಮಕ್ಕೆ ಪಾಕಿಸ್ತಾನದ ಕ್ಯಾಬಿನೆಟ್ ಸಚಿವರು ಅನುಮೋದನೆ ನೀಡಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್, ಮಾರುಕಟ್ಟೆ ಹಾಗೂ ಮಾಲ್‌ಗಳನ್ನು ಈಗ ರಾತ್ರಿ 8:30ಕ್ಕೆ ಮುಚ್ಚಲಾಗುತ್ತದೆ. ಮದುವೆ ಮಂಟಪಗಳನ್ನು ರಾತ್ರಿ 10:00 ಗಂಟೆಗೆ ಮುಚ್ಚಲಾಗುತ್ತದೆ. ಈ ಕ್ರಮದಿಂದ ನಮಗೆ 60 ಶತಕೋಟಿ ರೂ. ಉಳಿತಾಯವಾಗುತ್ತದೆ ಎಂದು ತಿಳಿಸಿದ್ದಾರೆ.

ದೇಶದ ಪರಿಸ್ಥಿತಿಯನ್ನು ನಿಭಾಯಿಸಲು ಪಾಕ್ ಇನ್ನೂ ಹಲವು ಕ್ರಮಗಳನ್ನು ಕೈಗೊಂಡಿದೆ. ಪ್ರಕಾಶಮಾನವಾದ ಬಲ್ಬ್ ಉತ್ಪಾದನೆಯನ್ನು ಫೆಬ್ರವರಿ 1 ರಿಂದ ಸ್ಥಗಿತಗೊಳಿಸಲು ಸೂಚಿಸಲಾಗಿದ್ದು, ಜುಲೈ ತಿಂಗಳಿನಿಂದ ಅಸಮರ್ಥ ಫ್ಯಾನ್‌ಗಳ ಉತ್ಪಾದನೆಯನ್ನು ನಿಲ್ಲಿಸಲಾಗುವುದು ಎನ್ನಲಾಗಿದೆ. ಈ ಕ್ರಮದಿಂದ 22 ಶತಕೋಟಿ ರೂ. ಉಳಿತಾಯವಾಗುತ್ತದೆ ಎಂದು ಆಸಿಫ್ ತಿಳಿಸಿದ್ದಾರೆ.

ಪಾಕ್ ಸರ್ಕಾರ 1 ವರ್ಷದೊಳಗೆ ಕಡಿಮೆ ವಿದ್ಯುತ್ ಬಳಸುವ ಗೀಸರ್‌ಗಳನ್ನು ಬಳಸಲು ಹಾಗೂ ಹಳೆಯದನ್ನು ಅಥವಾ ಹೆಚ್ಚು ವಿದ್ಯುತ್ ಉಪಯೋಗಿಸುವ ಗೀಸರ್‌ಗಳನ್ನು ಬದಲಿಲು ಜನರಿಗೆ ಕಡ್ಡಾಯವಾದ ಸೂಚನೆ ನೀಡಿದೆ. ಇದರಿಂದ 92 ಶತಕೋಟಿ ರೂ. ಉಳಿತಾಯವಾಗುತ್ತದೆ. ಬೀದಿ ದೀಪಗಳ ಬದಲು ಪರ್ಯಾಯ ದೀಪ ಬಳಕೆಯಿಂದ 4 ಶತಕೋಟಿ ರೂ. ಉಳಿಸಬಹುದು ಎಂದಿದೆ.

ಎಲ್ಲಾ ಸರ್ಕಾರಿ ಕಟ್ಟಡಗಳು ಹಾಗೂ ಕಚೇರಿಗಳಲ್ಲಿ ಇಂಧನ ಬಳಕೆಯನ್ನು ಕಡಿಮೆ ಮಾಡಲಾಗುತ್ತಿದ್ದು, ಆದಷ್ಟು ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ್ದಾರೆ.

 

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

1 hour ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

1 hour ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

2 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

2 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

24 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago