ಇಸ್ಲಾಮಾಬಾದ್: ಆರ್ಥಿಕ ಬಿಕ್ಕಟ್ಟಿನಿಂದ ಒದ್ದಾಡುತ್ತಿರುವ ನೆರೆಯ ಪಾಕಿಸ್ತಾನ ತನ್ನ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸಲು ಒದ್ದಾಡುತ್ತಿದೆ. ಈ ಹಿನ್ನೆಲೆ ಪಾಕಿಸ್ತಾನದ ಸರ್ಕಾರ ಇಂಧನ ಉಳಿಸಲು ಮಾರುಕಟ್ಟೆ, ಮಾಲ್, ಮದುವೆ ಹಾಲ್ಗಳನ್ನು ಶೀಘ್ರವೇ ಮುಚ್ಚುವುದಾಗಿ ಘೋಷಿಸಿದೆ.
ಇಂಧನ ಉಳಿಸಲು ಹಾಗೂ ಇತರ ದೇಶಗಳಿಂದ ತೈಲವನ್ನು ಆಮದು ಮಾಡಿಕೊಳ್ಳುವುದನ್ನು ಕಡಿಮೆ ಮಾಡಲು ಈ ನಿರ್ಧಾರವನ್ನು ಮಾಡಲಾಗಿದೆ. ಈ ಕ್ರಮಕ್ಕೆ ಪಾಕಿಸ್ತಾನದ ಕ್ಯಾಬಿನೆಟ್ ಸಚಿವರು ಅನುಮೋದನೆ ನೀಡಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್, ಮಾರುಕಟ್ಟೆ ಹಾಗೂ ಮಾಲ್ಗಳನ್ನು ಈಗ ರಾತ್ರಿ 8:30ಕ್ಕೆ ಮುಚ್ಚಲಾಗುತ್ತದೆ. ಮದುವೆ ಮಂಟಪಗಳನ್ನು ರಾತ್ರಿ 10:00 ಗಂಟೆಗೆ ಮುಚ್ಚಲಾಗುತ್ತದೆ. ಈ ಕ್ರಮದಿಂದ ನಮಗೆ 60 ಶತಕೋಟಿ ರೂ. ಉಳಿತಾಯವಾಗುತ್ತದೆ ಎಂದು ತಿಳಿಸಿದ್ದಾರೆ.
ದೇಶದ ಪರಿಸ್ಥಿತಿಯನ್ನು ನಿಭಾಯಿಸಲು ಪಾಕ್ ಇನ್ನೂ ಹಲವು ಕ್ರಮಗಳನ್ನು ಕೈಗೊಂಡಿದೆ. ಪ್ರಕಾಶಮಾನವಾದ ಬಲ್ಬ್ ಉತ್ಪಾದನೆಯನ್ನು ಫೆಬ್ರವರಿ 1 ರಿಂದ ಸ್ಥಗಿತಗೊಳಿಸಲು ಸೂಚಿಸಲಾಗಿದ್ದು, ಜುಲೈ ತಿಂಗಳಿನಿಂದ ಅಸಮರ್ಥ ಫ್ಯಾನ್ಗಳ ಉತ್ಪಾದನೆಯನ್ನು ನಿಲ್ಲಿಸಲಾಗುವುದು ಎನ್ನಲಾಗಿದೆ. ಈ ಕ್ರಮದಿಂದ 22 ಶತಕೋಟಿ ರೂ. ಉಳಿತಾಯವಾಗುತ್ತದೆ ಎಂದು ಆಸಿಫ್ ತಿಳಿಸಿದ್ದಾರೆ.
ಪಾಕ್ ಸರ್ಕಾರ 1 ವರ್ಷದೊಳಗೆ ಕಡಿಮೆ ವಿದ್ಯುತ್ ಬಳಸುವ ಗೀಸರ್ಗಳನ್ನು ಬಳಸಲು ಹಾಗೂ ಹಳೆಯದನ್ನು ಅಥವಾ ಹೆಚ್ಚು ವಿದ್ಯುತ್ ಉಪಯೋಗಿಸುವ ಗೀಸರ್ಗಳನ್ನು ಬದಲಿಲು ಜನರಿಗೆ ಕಡ್ಡಾಯವಾದ ಸೂಚನೆ ನೀಡಿದೆ. ಇದರಿಂದ 92 ಶತಕೋಟಿ ರೂ. ಉಳಿತಾಯವಾಗುತ್ತದೆ. ಬೀದಿ ದೀಪಗಳ ಬದಲು ಪರ್ಯಾಯ ದೀಪ ಬಳಕೆಯಿಂದ 4 ಶತಕೋಟಿ ರೂ. ಉಳಿಸಬಹುದು ಎಂದಿದೆ.
ಎಲ್ಲಾ ಸರ್ಕಾರಿ ಕಟ್ಟಡಗಳು ಹಾಗೂ ಕಚೇರಿಗಳಲ್ಲಿ ಇಂಧನ ಬಳಕೆಯನ್ನು ಕಡಿಮೆ ಮಾಡಲಾಗುತ್ತಿದ್ದು, ಆದಷ್ಟು ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ್ದಾರೆ.
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…