ಇಸ್ಲಾಮಾಬಾದ್: ಆರ್ಥಿಕ ಬಿಕ್ಕಟ್ಟಿನಿಂದ ಒದ್ದಾಡುತ್ತಿರುವ ನೆರೆಯ ಪಾಕಿಸ್ತಾನ ತನ್ನ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸಲು ಒದ್ದಾಡುತ್ತಿದೆ. ಈ ಹಿನ್ನೆಲೆ ಪಾಕಿಸ್ತಾನದ ಸರ್ಕಾರ ಇಂಧನ ಉಳಿಸಲು ಮಾರುಕಟ್ಟೆ, ಮಾಲ್, ಮದುವೆ ಹಾಲ್ಗಳನ್ನು ಶೀಘ್ರವೇ ಮುಚ್ಚುವುದಾಗಿ ಘೋಷಿಸಿದೆ.
ಇಂಧನ ಉಳಿಸಲು ಹಾಗೂ ಇತರ ದೇಶಗಳಿಂದ ತೈಲವನ್ನು ಆಮದು ಮಾಡಿಕೊಳ್ಳುವುದನ್ನು ಕಡಿಮೆ ಮಾಡಲು ಈ ನಿರ್ಧಾರವನ್ನು ಮಾಡಲಾಗಿದೆ. ಈ ಕ್ರಮಕ್ಕೆ ಪಾಕಿಸ್ತಾನದ ಕ್ಯಾಬಿನೆಟ್ ಸಚಿವರು ಅನುಮೋದನೆ ನೀಡಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್, ಮಾರುಕಟ್ಟೆ ಹಾಗೂ ಮಾಲ್ಗಳನ್ನು ಈಗ ರಾತ್ರಿ 8:30ಕ್ಕೆ ಮುಚ್ಚಲಾಗುತ್ತದೆ. ಮದುವೆ ಮಂಟಪಗಳನ್ನು ರಾತ್ರಿ 10:00 ಗಂಟೆಗೆ ಮುಚ್ಚಲಾಗುತ್ತದೆ. ಈ ಕ್ರಮದಿಂದ ನಮಗೆ 60 ಶತಕೋಟಿ ರೂ. ಉಳಿತಾಯವಾಗುತ್ತದೆ ಎಂದು ತಿಳಿಸಿದ್ದಾರೆ.
ದೇಶದ ಪರಿಸ್ಥಿತಿಯನ್ನು ನಿಭಾಯಿಸಲು ಪಾಕ್ ಇನ್ನೂ ಹಲವು ಕ್ರಮಗಳನ್ನು ಕೈಗೊಂಡಿದೆ. ಪ್ರಕಾಶಮಾನವಾದ ಬಲ್ಬ್ ಉತ್ಪಾದನೆಯನ್ನು ಫೆಬ್ರವರಿ 1 ರಿಂದ ಸ್ಥಗಿತಗೊಳಿಸಲು ಸೂಚಿಸಲಾಗಿದ್ದು, ಜುಲೈ ತಿಂಗಳಿನಿಂದ ಅಸಮರ್ಥ ಫ್ಯಾನ್ಗಳ ಉತ್ಪಾದನೆಯನ್ನು ನಿಲ್ಲಿಸಲಾಗುವುದು ಎನ್ನಲಾಗಿದೆ. ಈ ಕ್ರಮದಿಂದ 22 ಶತಕೋಟಿ ರೂ. ಉಳಿತಾಯವಾಗುತ್ತದೆ ಎಂದು ಆಸಿಫ್ ತಿಳಿಸಿದ್ದಾರೆ.
ಪಾಕ್ ಸರ್ಕಾರ 1 ವರ್ಷದೊಳಗೆ ಕಡಿಮೆ ವಿದ್ಯುತ್ ಬಳಸುವ ಗೀಸರ್ಗಳನ್ನು ಬಳಸಲು ಹಾಗೂ ಹಳೆಯದನ್ನು ಅಥವಾ ಹೆಚ್ಚು ವಿದ್ಯುತ್ ಉಪಯೋಗಿಸುವ ಗೀಸರ್ಗಳನ್ನು ಬದಲಿಲು ಜನರಿಗೆ ಕಡ್ಡಾಯವಾದ ಸೂಚನೆ ನೀಡಿದೆ. ಇದರಿಂದ 92 ಶತಕೋಟಿ ರೂ. ಉಳಿತಾಯವಾಗುತ್ತದೆ. ಬೀದಿ ದೀಪಗಳ ಬದಲು ಪರ್ಯಾಯ ದೀಪ ಬಳಕೆಯಿಂದ 4 ಶತಕೋಟಿ ರೂ. ಉಳಿಸಬಹುದು ಎಂದಿದೆ.
ಎಲ್ಲಾ ಸರ್ಕಾರಿ ಕಟ್ಟಡಗಳು ಹಾಗೂ ಕಚೇರಿಗಳಲ್ಲಿ ಇಂಧನ ಬಳಕೆಯನ್ನು ಕಡಿಮೆ ಮಾಡಲಾಗುತ್ತಿದ್ದು, ಆದಷ್ಟು ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…