Featured

ಆರ್‌ಸಿಬಿ ತಂಡದ ಬ್ಯಾಟಿಂಗ್ ಕೋಚ್ ಹಾಗೂ ಮೆಂಟರ್ ಆಗಿ ದಿನೇಶ್ ಕಾರ್ತಿಕ್ ನೇಮಕ – vishwanews24

ಆರ್‌ಸಿಬಿ ತಂಡದ ಬ್ಯಾಟಿಂಗ್ ಕೋಚ್ ಹಾಗೂ ಮೆಂಟರ್ ಆಗಿ ದಿನೇಶ್ ಕಾರ್ತಿಕ್ ನೇಮಕ

ಬೆಂಗಳೂರು: ಮಾಜಿ ಭಾರತೀಯ ಆಟಗಾರ ದಿನೇಶ್ ಕಾರ್ತಿಕ್ ಅವರನ್ನು ಆರ್‌ಸಿಬಿ ತಂಡದ ಬ್ಯಾಟಿಂಗ್ ಕೋಚ್ ಹಾಗೂ ಮೆಂಟರ್ ಆಗಿ ನೇಮಿಸಲಾಗಿದೆ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ರಕಟಣೆಯಲ್ಲಿ ತಿಳಿಸಿದೆ.

ಈ ಕುರಿತು ಪ್ರಕಟಣೆ ಬಿಡುಗಡೆ ಮಾಡಿರುವ ಆರ್‌ಸಿಬಿ, “ಆರ್‌ಸಿಬಿ ಹೊಂದಿರುವ ಅತ್ಯುತ್ತಮ ಬ್ಯಾಟಿಂಗ್ ಕ್ರಮಾಂಕಕ್ಕೆ ದಿನೇಶ್ ಕಾರ್ತಿಕ್ ತಮ್ಮ ಅನುಭವ ಹಾಗೂ ತಂಡದ ತಾತ್ವಿಕತೆಯ ಬಗೆಗಿನ ಆಳವಾದ ತಿಳಿವಳಿಕೆಯಿಂದ ತಂಡಕ್ಕೆ ಆಸ್ತಿಯಾಗಲಿದ್ದಾರೆ” ಎಂದು ಹೇಳಿದೆ.

“ಕಾರ್ತಿಕ್ ಮೊದಲಿಗೆ 2015 ಹಾಗೂ 2016ರಲ್ಲಿ ಆರ್‌ಸಿಬಿ ತಂಡದ ಪರವಾಗಿ ಆಡಿದ್ದರು.‌ 2024ರ ಋತುವಿನ 15 ಪಂದ್ಯಗಳಲ್ಲಿ 187.36 ಸ್ಟ್ರೈಕ್ ರೇಟ್‌ನೊಂದಿಗೆ ಅವರು 326 ರನ್ ಗಳಿಸಿದ್ದರು. ಆದರೆ, ಅವರ ಪ್ರಭಾವವು ಅವರು ಗಳಿಸಿದ ರನ್‌ಗಳ ಸಂಖ್ಯೆಯನ್ನೂ ಮೀರಿದೆ” ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ತಮ್ಮ ನೇಮಕದ ಕುರಿತು ಪ್ರತಿಕ್ರಿಯಿಸಿರುವ ದಿನೇಶ್ ಕಾರ್ತಿಕ್, “ವೃತ್ತಿಪರ ಹಂತದಲ್ಲಿ ತರಬೇತಿ ನೀಡುವುದು ನನ್ನ ಪಾಲಿಗೆ ಅದ್ಭುತ ರೋಮಾಂಚನವಾಗಿದೆ. ನನ್ನ ವೃತ್ತಿಜೀವನದಲ್ಲಿ ಇದು ಹೊಸ ಅಧ್ಯಾಯವಾಗಿದೆ. ನಾನು ಈ ಪಾತ್ರದ ಬಗ್ಗೆ ನಿಜಕ್ಕೂ ಕಾತುರನಾಗಿದ್ದೇನೆ. ನನ್ನ ಅನುಭವದ ಆಳವು ತಂಡದ ಬೆಳವಣಿಗೆಗೆ ಕೊಡುಗೆ ನೀಡಿ, ಮೌಲ್ಯವರ್ಧನೆಯನ್ನು ತರಬಹುದು ಎಂದು ಆಶಿಸುತ್ತೇನೆ” ಎಂದು ಹೇಳಿದ್ದಾರೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

5 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

5 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

5 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

6 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago