ಬೆಂಗಳೂರು: ಆರ್.ಎನ್.ಎಸ್. ಶಿಕ್ಷಣ ಮತ್ತು ಉದ್ಯಮ ಸಮೂಹ ಸಂಸ್ಥೆಗಳ ಸ್ಥಾಪಕ ಆರ್.ಎನ್. ಶೆಟ್ಟಿ (92) ಗುರುವಾರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
1928ರ ಆಗಸ್ಟ್ 15ರಂದು ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ಜನಿಸಿದ ಆರ್.ಎನ್. ಶೆಟ್ಟಿ ಅವರು ಧಾರ್ಮಿಕ, ಸಾಂಸ್ಕೃತಿಕ, ಆಧ್ಯಾತ್ಮಿಕ, ವೈದ್ಯಕೀಯ, ಆತಿಥ್ಯ, ವಸತಿ, ಔದ್ಯಮಿಕ, ಔದ್ಯೋಗಿಕ, ವಾಣಿಜ್ಯ, ಶೈಕ್ಷಣಿಕ, ಮೂಲಸೌಕರ್ಯ, ವಿದ್ಯುತ್ ಹಾಗೂ ನೀರಾವರಿ ಕ್ಷೇತ್ರ ಸೇರಿದಂತೆ ಅನೇಕ ರಂಗಗಳಲ್ಲಿ ತೊಡಗಿಸಿಕೊಂಡಿದ್ದರು.
ಇನ್ನು ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕಾಗಿ ಉತ್ತರ ಹಳ್ಳಿಯ ಆರ್.ಎನ್. ಎಸ್. ತಾಂತ್ರಿಕ ವಿದ್ಯಾಲಯ ಕಾಲೇಜು ಆವರಣದಲ್ಲಿ ಮಧ್ಯಾಹ್ನ 2 ಗಂಟೆಯ ನಂತರ ಇಡಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮುರಡೇಶ್ವರದಲ್ಲಿ ಕೃಷಿ ಕುಟುಂಬದಲ್ಲಿ ಜನಿಸಿದ ರಾಮ ನಾಗಪ್ಪ ಶೆಟ್ಟಿ, ಮರಡೇಶ್ವರದಲ್ಲಿ 123 ಅಡಿ ಎತ್ತರದ ಶಿವನ ಮೂರ್ತಿ ನಿರ್ಮಾಣ ಮಾಡುವ ಮೂಲಕ ಮುರಡೇಶ್ವರದ ಅಭಿವೃದ್ಧಿಗೆ ಕಾರಣರಾಗಿದ್ದರು.
ಮೃತರ ಆತ್ಮಕ್ಕೆ ಶಾಂತಿ ಕೋರಿ ಮುಖ್ಯಮಂತ್ರಿ ಯಡಿಯೂರಪ್ಪನವರು ಟ್ಟೀಟ್ ಮಾಡಿ ಶೋಕ ಸಂದೇಶ ತಿಳಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…