ಬೆಂಗಳೂರು: ಆರ್.ಎನ್.ಎಸ್. ಶಿಕ್ಷಣ ಮತ್ತು ಉದ್ಯಮ ಸಮೂಹ ಸಂಸ್ಥೆಗಳ ಸ್ಥಾಪಕ ಆರ್.ಎನ್. ಶೆಟ್ಟಿ (92) ಗುರುವಾರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
1928ರ ಆಗಸ್ಟ್ 15ರಂದು ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ಜನಿಸಿದ ಆರ್.ಎನ್. ಶೆಟ್ಟಿ ಅವರು ಧಾರ್ಮಿಕ, ಸಾಂಸ್ಕೃತಿಕ, ಆಧ್ಯಾತ್ಮಿಕ, ವೈದ್ಯಕೀಯ, ಆತಿಥ್ಯ, ವಸತಿ, ಔದ್ಯಮಿಕ, ಔದ್ಯೋಗಿಕ, ವಾಣಿಜ್ಯ, ಶೈಕ್ಷಣಿಕ, ಮೂಲಸೌಕರ್ಯ, ವಿದ್ಯುತ್ ಹಾಗೂ ನೀರಾವರಿ ಕ್ಷೇತ್ರ ಸೇರಿದಂತೆ ಅನೇಕ ರಂಗಗಳಲ್ಲಿ ತೊಡಗಿಸಿಕೊಂಡಿದ್ದರು.
ಇನ್ನು ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕಾಗಿ ಉತ್ತರ ಹಳ್ಳಿಯ ಆರ್.ಎನ್. ಎಸ್. ತಾಂತ್ರಿಕ ವಿದ್ಯಾಲಯ ಕಾಲೇಜು ಆವರಣದಲ್ಲಿ ಮಧ್ಯಾಹ್ನ 2 ಗಂಟೆಯ ನಂತರ ಇಡಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮುರಡೇಶ್ವರದಲ್ಲಿ ಕೃಷಿ ಕುಟುಂಬದಲ್ಲಿ ಜನಿಸಿದ ರಾಮ ನಾಗಪ್ಪ ಶೆಟ್ಟಿ, ಮರಡೇಶ್ವರದಲ್ಲಿ 123 ಅಡಿ ಎತ್ತರದ ಶಿವನ ಮೂರ್ತಿ ನಿರ್ಮಾಣ ಮಾಡುವ ಮೂಲಕ ಮುರಡೇಶ್ವರದ ಅಭಿವೃದ್ಧಿಗೆ ಕಾರಣರಾಗಿದ್ದರು.
ಮೃತರ ಆತ್ಮಕ್ಕೆ ಶಾಂತಿ ಕೋರಿ ಮುಖ್ಯಮಂತ್ರಿ ಯಡಿಯೂರಪ್ಪನವರು ಟ್ಟೀಟ್ ಮಾಡಿ ಶೋಕ ಸಂದೇಶ ತಿಳಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…