“ರಾಷ್ಟ್ರೀಯ ಸ್ವಯಂ ಸೇವಕ ಸಂಘ ಒಂದು ಮುಸ್ಲಿಂ ಬ್ರದರ್ ಹುಡ್ ಸಂಘಟನೆಯಿದ್ದಂತೆ. ಆ ಸಂಘಟನೆ ಹುಟ್ಟಿದ್ದು 1920ಕ್ಕೆ ಹಾಗೂ ಸಂಘ ಹುಟ್ಟಿದ್ದೂ 1920ಕ್ಕೆ. ಆ ಸಂಘಟನೆಯೂ ಜಾತ್ಯಾತೀತ ರಾಷ್ಟ್ರವನ್ನು ಒಪ್ಪುತ್ತಿಲ್ಲ, ಸಂಘವೂ ಜಾತ್ಯಾತೀತ ರಾಷ್ಟ್ರವನ್ನು ಒಪ್ಪುತ್ತಿಲ್ಲ, ಆ ಸಂಘಟನೆಯ ಹುರಿ ಇಸ್ಲಾಮೀಕರಣ ಸಂಘದ ಗುರಿ ಹಿಂದೂರಾಷ್ಟ್ರ” ಹೀಗೆ ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ನಾಯಕಿ ರಮ್ಯಾ ಒಂದು ಟ್ವೀಟ್ ಮಾಡಿದ್ದರು.
ಸಂಘದ ತಂಟೆಗೆ ಈ ರಮ್ಯಾ ಬಂದಿದ್ದೇ ತಡ ಭಾರತೀಯ ಜನತಾ ಪಕ್ಷದ ನಾಯಕ ಹಾಗೂ ನವರಸ ನಾಯಕ ಜಗ್ಗೇಶ್ ಕಿಡಿ ಕಾರಿದ್ದಾರೆ. ರಮ್ಯಾಗೆ ಕೌಂಟರ್ ಕೊಡುವ ಮೂಲಕ ಆಕೆಯ ಸುಳ್ಳನ್ನು ಬಹಿರಂಗಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಜಗ್ಗೇಶ್ ಮೊದಲು ಇತಿಹಾಸ ತಿಳಿದುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ. “ಯಾರಿಗೆ ವಸ್ತುಸ್ಥಿತಿ ಅನುಭವದ ಕೊರತೆ ಇರುತ್ತೋ ಅಂಥವರು ಬೇಜವಬ್ಧಾರಿ ಹೇಳಿಕೆಗಳನ್ನು ನೀಡುತ್ತಾರೆ..ಕೇರಳ, ಕೊಡಗಿನ ಮಳೆ ಅವಾಂತರಕ್ಕೆ ಭುಜಕೊಟ್ಟಿದ್ದು ಸಂಘವೇ ವಿನಹ ಇಂಥಹಾ ಬಾಲಿಷ ಹೇಳಿಕೆ ಕೊಡುವವರಲ್ಲಾ. ಅಂದೇ ನೆಹರೂ ಸಂಘದ ಕಾರ್ಯವೈಖರಿಯನ್ನು ಮೆಚ್ಚಿ ಹೊಗಳಿದ್ದರು.. ಓದಲು ಬಂದರೆ ಇತಿಹಾಸ ಪುಟ ತಿರುಗಿಸಿ ಓದಲು ಹೇಳಿ,, ಆಗಲೂ ತಿಳಿಯದಿದ್ದರೆ ಕ್ಯಾಚ್ ಆಫೀಸರ್ ಕಂಟಿನ್ಯೂ” ಎಂದು ಜಗ್ಗೇಶ್ ಟ್ವೀಟ್ ಮೂಲಕ ವ್ಯಂಗ್ಯವಾಡಿದ್ದಾರೆ.
ಈ ಹಿಂದೆ ಸಂಘದ ವಿರುದ್ಧ ಮಾತನಾಡಿ ಕೋರ್ಟ್ ಕಟಕಟೆಯೇರಿದ್ದ ರಾಹುಲ್ ಗಾಂಧಿ ಇದೀಗ ಮತ್ತೊಮ್ಮೆ ತಾನೂ ಸಾಲದು ಎಂಬಂತೆ ರಮ್ಯಾರನ್ನೂ ಕೋರ್ಟ್ ಮೆಟ್ಟಿಲೇರಿಸುವ ವ್ಯವಸ್ಥೆಯನ್ನು ಕಲ್ಪಿಸುತ್ತಿದ್ದಾರೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…