ಕೊಪ್ಪಳ: ಆರ್ಎಸ್ಎಸ್ ಗೆ ಹಾಗೂ ಕುಮಾರಸ್ವಾಮಿಗೆ ನನ್ನ ಕಂಡರೆ ಭಯವಿದೆ. ಅದಕ್ಕೆ ಅವರು ನನ್ನ ಬಗ್ಗೆ ಪದೇ ಪದೇ ಮಾತಾಡುತ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು.
ಕೊಪ್ಪಳ ತಾಲ್ಲೂಕಿನ ಬಸಾಪೂರ ವಿಮಾನ ನಿಲ್ದಾಣದ ಬಳಿ ಸುದ್ದಿಗಾರರ ಜೊತೆ ಮಾತನಾಡಿ, ಅವರಿಬ್ಬರಿಗೂ ನನ್ನ ಕಂಡರೆ ಭಯ ಅದಕ್ಕೆ ನನ್ನ ಟಾರ್ಗೆಟ್ ಮಾಡಿ ಮಾತನಾಡುತ್ತಾರೆ ಎಂದರು.
ಕುಮಾರಸ್ವಾಮಿ ಸಿಎಂ ಆಗುತ್ತೇನೆ ಎಂಬ ಹೇಳಿಕೆ ವಿಚಾರ, ಜನ ಆಶೀರ್ವಾದ ಮಾಡಬೇಕು. ನಾವೇ ಹೋಗಿ ಕುಳಿಕೊಳ್ಳಲು ಆಗುತ್ತಾ? ಎಂದ ಅವರು ಶಿಕ್ಷಕರ ಚುನಾವಣೆಯಲ್ಲಿ ಜೆಡಿಎಸ್ ಯಾವ ಸ್ಥಾನದಲ್ಲಿದೆ? ಅಂತಹ ಪಾರ್ಟಿ ಅಧಿಕಾರಕ್ಕೆ ಬರುತ್ತದೆಯೇ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.
ಮಹಾರಾಷ್ಟ್ರದಲ್ಲಿ ನಾವು ಅಧಿಕಾರ ಕಳೆದುಕೊಂಡಿಲ್ಲ. ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳುವಂತೆ ಬಿಜೆಪಿಗರು ಮಾಡುತ್ತಿದ್ದಾರೆ. ಆಪರೇಷನ್ ಕಮಲ ಮಾಡಿ ಮಹಾರಾಷ್ಟ್ರ ಸರ್ಕಾರ ಬೀಳಿಸುತ್ತಿದ್ದಾರೆ. ಬಿಜೆಪಿಗರು ಆಪರೇಷನ್ ಕಮಲ ಮಾಡ್ತಿರೋದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಅವರು ಆತಂಕ ವ್ಯಕ್ತಪಡಿಸಿದರು.
ಇವರು ತುಂಬಾ ಪ್ರಜಾಪ್ರಭುತ್ವದ ಬಗ್ಗೆ ಮಾತಾಡ್ತಾರೆ. ಇಂದಿರಾಗಾಂಧಿ ತುರ್ತು ಪರಿಸ್ಥಿತಿ ತಂದರು, ಕಪ್ಪು ಚುಕ್ಕೆ ಎನ್ನುತ್ತಾರೆ. ಆದರೆ, ಇವರು ಮಾಡುತ್ತಿರುವುದು ಏನು ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
ಮಧ್ಯ ಪ್ರದೇಶದ ಸರ್ಕಾರ ಕಿತ್ತು ಹಾಕಿದ್ದು ಯಾರು? ಕರ್ನಾಟಕದ ಸಮ್ಮಿಶ್ರ ಸರ್ಕಾರ ಕಿತ್ತಾಕಿದ್ದು ಯಾರು? ಪಾಪದ ಹಣ ಅವರ ಬಳಿ ಇದೆ, ಲೂಟಿ ಹೊಡೆದ ಹಣ ಇದೆ. ಒಬ್ಬೊಬ್ಬ ಶಾಕರಿಗೆ 25- 30 ಕೋಟಿ ಕೊಟ್ಟು ಖರೀದಿ ಮಾಡುತ್ತಿದ್ದಾರೆ. ಶಾಸಕರೆಲ್ಲ ಸುಮ್ಮನೇ ಬರ್ತಾರಾ? ಅಧಿಕಾರ ಇದೆಯಲ್ಲ ಎಲ್ಲ ಕಡೆ ಕಾಂಗ್ರೆಸ್ ಸರ್ಕಾರ ಕಿತ್ತು ಹಾಕುತ್ತಿದ್ದಾರೆ. ಕೇಂದ್ರದಲ್ಲಿ ಅಧಿಕಾರ ಇದೆ, ದುಡ್ಡಿದೆ ಅದಕ್ಕಾಗಿ ಎಲ್ಲ ಸರ್ಕಾರ ಬೀಳಿಸುತ್ತಿದ್ದಾರೆ ಎಂದು ಆರೋಪಿಸಿದರು.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…