ಆರ್. ಧ್ರುವನಾರಾಯಣ ನಿಧನದಿಂದ ಕಾಂಗ್ರೆಸ್‌ ಪಕ್ಷಕ್ಕೆ ತುಂಬಲಾರದ ನಷ್ಟ : ರಾಹುಲ್‌ ಗಾಂಧಿ ಸಂತಾಪ – Vishwanews24

Featured, ರಾಜ್ಯ ನ್ಯೂಸ್

ಆರ್. ಧ್ರುವನಾರಾಯಣ ನಿಧನದಿಂದ ಕಾಂಗ್ರೆಸ್‌ ಪಕ್ಷಕ್ಕೆ ತುಂಬಲಾರದ ನಷ್ಟ : ರಾಹುಲ್‌ ಗಾಂಧಿ ಸಂತಾಪ

ಮೈಸೂರು: ಆರ್. ಧ್ರುವನಾರಾಯಣ ಅಗಲಿಕೆಗೆ ರಾಹುಲ್‌ ಗಾಂಧಿ ಸಂತಾಪ ಸೂಚಿಸಿದ್ದಾರೆ.ಅವರ ನಿಧನದಿಂದ ಕಾಂಗ್ರೆಸ್‌ ಪಕ್ಷಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಆರ್‌ ಧ್ರುವನಾರಾಯಣ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥನೆ ಮಾಡಿಕೊಳ್ಳುತ್ತೇನೆ. ಅವರ ಕುಟುಂಬಕ್ಕೆ ದು:ಖ ಭರಿಸುವ ಶಕ್ತಿ ದೇವರು ನೀಡಲಿ ಎಂದು ಟ್ವೀಟ್‌ ಮೂಲಕ ರಾಹುಲ್‌ ಗಾಂಧಿ ಕಂಬನಿ ಮಿಡಿದಿದ್ದಾರೆ.

ಇನ್ನು ಆರ್. ಧ್ರುವನಾರಾಯಣ ನಿಧನಕ್ಕೆ ವಿವಿಧ ಕ್ಷೇತ್ರದ ಗಣ್ಯರು ಸಂತಾಪ ಸೂಚಿಸಿದ್ದಾರೆ. ಎಂಎಲ್‌ ಸಿ ಗೋವಿಂದರಾಜು, ಹೆಚ್.ಸಿ ಮಹದೇವಪ್ಪ, ಸಂಸದ ಸದಾನಂದ ಗೌಡ ಸೇರಿದಂತೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.

ಧ್ರುವನಾರಾಯಣ್ ಹಠಾತ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ : ಸಿದ್ದರಾಮಯ್ಯ ತೀವ್ರ ಸಂತಾಪ – VIshwanews24

Leave a Reply