ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಇಂದು ಆಶಾ ಕಾರ್ಯಕರ್ತೆಯರ ಸಂಧಾನ ಯಶಸ್ವಿಯಾಗಿದ್ದು, ಆಶಾ ಕಾರ್ಯಕರ್ತೆಯರಿಗೆ ತಿಂಗಳಿಗೆ 10 ಸಾವಿರ ರೂ. ಗೌರವಧನವನ್ನು ಏ.1ರಿಂದ ಅನ್ವಯವಾಗುವಂತೆ ನೀಡಲು ಸರ್ಕಾರ ಒಪ್ಪಿದೆ.
ರಾಜ್ಯ ಸರ್ಕಾರದಿಂದ ಪ್ರತಿ ಮಾಹೆ 5000 ರೂ. ಹಾಗೂ ಕೇಂದ್ರ ಸರ್ಕಾರದ 34 ಸೇವೆಗಳಿಗೆ ನೀಡುವ ಗೌರವಧನ ಸೇರಿ ಒಟ್ಟು 10 ಸಾವಿರ ರೂ.ಗಳನ್ನು ತಿಂಗಳಿಗೆ ನೀಡಲಾಗುವುದು.
ಪೋರ್ಟಲ್ ಸುಧಾರಣೆಗೆ ಸೂಚನೆ: ಮಾಹಿತಿಯನ್ನು ಪೋರ್ಟಲ್ನಲ್ಲಿ ನಮೂದು ಮಾಡುವುದು ಕಷ್ಟ ಸಾಧ್ಯವಾಗಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಗಮನ ಸೆಳೆದಾಗ ಪೋರ್ಟಲ್ ಸುಧಾರಣೆ ಮಾಡಿ ಸಮಸ್ಯೆ ಬಗೆಹರಿಸುವಂತೆ ಸಿಎಂ ಅಧಿಕಾರಿಗಳಿಗೆ ಸೂಚಿಸಿದರು.
ಗೌರವಧನ ನಿಲ್ಲಿಸದೆ ರಜೆ: ಆಶಾ ಕಾರ್ಯಕರ್ತೆಯರ ಆರೋಗ್ಯ ಕೆಟ್ಟರೆ, ಪ್ರತಿ ತಿಂಗಳು ಸಿಗುವ ರಜೆ ಕ್ರೋಢೀಕರಿಸಿ, ಗರಿಷ್ಠ ಮೂರು ತಿಂಗಳವರೆಗೆ ಗೌರವ ಧನ ನಿಲ್ಲಿಸದೆ ರಜೆ ಮಂಜೂರು ಮಾಡಲು ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ತಿಳಿಸಿದರು.
ಆಯವ್ಯಯ ಪೂರ್ವಭಾವಿ ಸಭೆ ನಡೆಸುವಾಗ ಆಶಾ ಕಾರ್ಯಕರ್ತೆಯರೊಂದಿಗೂ ಸಭೆ ನಡೆಸಲಾಗುವುದು. ಸರ್ಕಾರ ನಿಮ್ಮೊಂದಿಗಿದೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು. ಪ್ರಜಾಸತ್ತಾತ್ಮಕ ಹೋರಾಟಗಳನ್ನು ಸರ್ಕಾರ ಹತ್ತಿಕ್ಕುವುದಿಲ್ಲ. ಹೋರಾಟ ಮಾಡುವುದು ಸಂವಿಧಾನ ಬದ್ಧ ಹಕ್ಕು. ಪ್ರಜಾಸತ್ತಾತ್ಮಕ ಹೋರಾಟಗಳನ್ನು ಸರ್ಕಾರ ಹತ್ತಿಕ್ಕುವುದಿಲ್ಲ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ತಿಳಿಸಿದರು.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…