Featured

ಆಶಾ ಕಾರ್ಯಕರ್ತೆಯರಿಗೆ ತಿಂಗಳಿಗೆ 10 ಸಾವಿರ ರೂ. ಗೌರವಧನ ನೀಡಲು ಸರ್ಕಾರ ಒಪ್ಪಿಗೆ : ಏ.1ರಿಂದ ಅನ್ವಯ – vishwanews24

ಆಶಾ ಕಾರ್ಯಕರ್ತೆಯರಿಗೆ ತಿಂಗಳಿಗೆ 10 ಸಾವಿರ ರೂ. ಗೌರವಧನ ನೀಡಲು ಸರ್ಕಾರ ಒಪ್ಪಿಗೆ : ಏ.1ರಿಂದ ಅನ್ವಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಇಂದು ಆಶಾ ಕಾರ್ಯಕರ್ತೆಯರ ಸಂಧಾನ ಯಶಸ್ವಿಯಾಗಿದ್ದು, ಆಶಾ ಕಾರ್ಯಕರ್ತೆಯರಿಗೆ ತಿಂಗಳಿಗೆ 10 ಸಾವಿರ ರೂ. ಗೌರವಧನವನ್ನು ಏ.1ರಿಂದ ಅನ್ವಯವಾಗುವಂತೆ ನೀಡಲು ಸರ್ಕಾರ ಒಪ್ಪಿದೆ.

ರಾಜ್ಯ ಸರ್ಕಾರದಿಂದ ಪ್ರತಿ ಮಾಹೆ 5000 ರೂ. ಹಾಗೂ ಕೇಂದ್ರ ಸರ್ಕಾರದ 34 ಸೇವೆಗಳಿಗೆ ನೀಡುವ ಗೌರವಧನ ಸೇರಿ ಒಟ್ಟು 10 ಸಾವಿರ ರೂ.ಗಳನ್ನು ತಿಂಗಳಿಗೆ ನೀಡಲಾಗುವುದು.

ಪೋರ್ಟಲ್ ಸುಧಾರಣೆಗೆ ಸೂಚನೆ: ಮಾಹಿತಿಯನ್ನು ಪೋರ್ಟಲ್‌ನಲ್ಲಿ ನಮೂದು ಮಾಡುವುದು ಕಷ್ಟ ಸಾಧ್ಯವಾಗಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಗಮನ ಸೆಳೆದಾಗ ಪೋರ್ಟಲ್ ಸುಧಾರಣೆ ಮಾಡಿ ಸಮಸ್ಯೆ ಬಗೆಹರಿಸುವಂತೆ ಸಿಎಂ ಅಧಿಕಾರಿಗಳಿಗೆ ಸೂಚಿಸಿದರು.

ಗೌರವಧನ ನಿಲ್ಲಿಸದೆ ರಜೆ: ಆಶಾ ಕಾರ್ಯಕರ್ತೆಯರ ಆರೋಗ್ಯ ಕೆಟ್ಟರೆ, ಪ್ರತಿ ತಿಂಗಳು ಸಿಗುವ ರಜೆ ಕ್ರೋಢೀಕರಿಸಿ, ಗರಿಷ್ಠ ಮೂರು ತಿಂಗಳವರೆಗೆ ಗೌರವ ಧನ ನಿಲ್ಲಿಸದೆ ರಜೆ ಮಂಜೂರು ಮಾಡಲು ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ತಿಳಿಸಿದರು.

ಆಯವ್ಯಯ ಪೂರ್ವಭಾವಿ ಸಭೆ ನಡೆಸುವಾಗ ಆಶಾ ಕಾರ್ಯಕರ್ತೆಯರೊಂದಿಗೂ ಸಭೆ ನಡೆಸಲಾಗುವುದು. ಸರ್ಕಾರ ನಿಮ್ಮೊಂದಿಗಿದೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು. ಪ್ರಜಾಸತ್ತಾತ್ಮಕ ಹೋರಾಟಗಳನ್ನು ಸರ್ಕಾರ ಹತ್ತಿಕ್ಕುವುದಿಲ್ಲ. ಹೋರಾಟ ಮಾಡುವುದು ಸಂವಿಧಾನ ಬದ್ಧ ಹಕ್ಕು. ಪ್ರಜಾಸತ್ತಾತ್ಮಕ ಹೋರಾಟಗಳನ್ನು ಸರ್ಕಾರ ಹತ್ತಿಕ್ಕುವುದಿಲ್ಲ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ತಿಳಿಸಿದರು.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

52 minutes ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

1 hour ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

1 hour ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

2 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

24 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago