ಮಂಗಳೂರು: ಆ್ಯಸಿಡ್ ದಾಳಿಗೊಳಗಾದ ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರು ಇಲ್ಲಿನ ಎ.ಜೆ.ಆಸ್ಪತ್ರೆಯಲ್ಲಿ ಮಂಗಳವಾರ ಭೇಟಿ ಮಾಡಿ ಸಾಂತ್ವನ ಹೇಳಿದರು.
ಆಸ್ಪತ್ರೆಗೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಆ್ಯಸಿಡ್ ದಾಳಿ ಸಂತ್ರಸ್ತ ವಿದ್ಯಾರ್ಥಿನಿಯರಿಗೆ ತಕ್ಷಣ ತಲಾ 4 ಲಕ್ಷ ರೂಪಾಯಿ ಚಿಕಿತ್ಸಾ ಪರಿಹಾರವಾಗಿ ಬಿಡುಗಡೆ ಮಾಡಲಾಗುತ್ತದೆ. ವಿದ್ಯಾರ್ಥಿನಿಯರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರಿಗೆ ತೀವ್ರ ಗಾಯವಾಗಿದೆ. ಅವರಿಗೆ ವಾರದ ಬಳಿಕ ಪ್ಲಾಸ್ಟಿಕ್ ಸರ್ಜರಿ ಮಾಡುವುದಾಗಿ ವೈದ್ಯರು ತಿಳಿಸಿದ್ದಾರೆ. ಪ್ಲಾಸ್ಟಿಕ್ ಸರ್ಜರಿ ಗೆ 20 ಲಕ್ಷದ ವರೆಗೆ ಚಿಕಿತ್ಸಾ ಪರಿಹಾರವನ್ನು ಸರ್ಕಾರ ಭರಿಸಲಿದೆ” ಎಂದು ಭರವಸೆ ನೀಡಿದ್ದಾರೆ.
“ವೈದ್ಯರನ್ನು ಹಾಗೂ ಸಂತ್ರಸ್ತ ವಿದ್ಯಾರ್ಥಿನಿಯರ ಪೋಷಕರನ್ನು ನಾನು ಭೇಟಿ ಮಾಡಿದ್ದೇನೆ. ಆ ಮೂವರು ವಿದ್ಯಾರ್ಥಿನಿಯರು ಪರೀಕ್ಷೆಯ ಬಗ್ಗೆ ಆತಂಕಗೊಂಡು ವಿಚಾರಿಸುತ್ತಿದ್ದಾರೆ. ವಿದ್ಯಾರ್ಥಿನಿಯರ ವಿದ್ಯಾಭ್ಯಾಸಕ್ಕೆ ತೊಂದರೆ ಆಗದಂತೆ ವ್ಯವಸ್ಥೆ ಮಾಡುತ್ತೇವೆ. ಈ ಕುರಿತು ನಾನು ಶಿಕ್ಷಣ ಇಲಾಖೆಯ ಸಚಿವರೊಂದಿಗೆ ಚರ್ಚಿಸುತ್ತೇನೆ. ಸದ್ಯದ ಪರಿಸ್ಥಿತಿಯಲ್ಲಿ ವಿದ್ಯಾರ್ಥಿನಿಯರು ಸಂಪೂರ್ಣವಾಗಿ ಗುಣಮುಖರಾಗುವುದು ಬಹಳ ಮುಖ್ಯವಾಗಿದೆ. ಆರೋಪಿ ಆ್ಯಸಿಡ್ ನ್ನು ಪ್ಲಾಸ್ಟಿಕ್ ಬಾಟಲ್ ನಲ್ಲಿ ತಂದಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆ್ಯಸಿಡ್ ತೀವ್ರ ಪ್ರಮಾಣದ್ದು ಆಗಿದ್ದರೆ ದೊಡ್ಡ ಮಟ್ಟದ ಗಾಯವಾಗುತ್ತಿತ್ತು. ಎಲ್ಲಾ ವಿದ್ಯಾರ್ಥಿನಿಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…