Featured

ಆಸ್ಕರ್ ಪ್ರಶಸ್ತಿ ಸಮಾರಂಭಕ್ಕೆ ಹಾಜರಾಗದಂತೆ ವಿಲ್ ಸ್ಮಿತ್‌ಗೆ 10 ವರ್ಷಗಳ ನಿಷೇಧ – VIshwanews24

10 ವರ್ಷಗಳ ಕಾಲ ಆಸ್ಕರ್‌ ಪ್ರಶಸ್ತಿ ಸಮಾರಂಭಗಳಿಂದ ವಿಲ್ ಸ್ಮಿತ್ ಗೆ ನಿಷೇಧ

ಲಾಸ್ ಏಂಜಲೀಸ್: ಆಸ್ಕರ್ ಪ್ರಶಸ್ತಿ ವಿತರಣೆ ಸಮಾರಂಭದಲ್ಲಿ ಸಹ ನಟನ ಕೆನ್ನೆಗೆ ಬಾರಿಸಿ ಸುದ್ದಿಯಾಗಿದ್ದ ವಿಲ್ ಸ್ಮಿತ್ ಅವರನ್ನು ಹಾಲಿವುಡ್ ಫಿಲ್ಮ್ ಅಕಾಡೆಮಿಯು 10 ವರ್ಷಗಳ ಕಾಲ ಆಸ್ಕರ್‌ ಪ್ರಶಸ್ತಿ ಸಮಾರಂಭಗಳಿಂದ ನಿಷೇಧಿಸಿದೆ.

‘ವಿಲ್ ಸ್ಮಿತ್ ಅವರ ರಾಜೀನಾಮೆಯನ್ನು ಅಂಗೀಕರಿಸುವುದರ ಜೊತೆಗೆ ಏಪ್ರಿಲ್ 8, 2022 ರಿಂದ 10 ವರ್ಷಗಳ ಅವಧಿಗೆ ಆಸ್ಕರ್ ಪ್ರಶಸ್ತಿ ಸಮಾರಂಭಗಳಿಗೆ ಭೌತಿಕ ಮತ್ತು ವರ್ಚುವಲ್ ಆಗಿ ಹಾಜರಾಗಲು ಅನುಮತಿ ನೀಡದಿರಲು ಮಂಡಳಿಯ ಸಭೆ ನಿರ್ಧರಿಸಿದೆ’ ಎಂದು ಅಧ್ಯಕ್ಷ ಡೇವಿಡ್ ರೂಬಿನ್ ಮತ್ತು ಸಿಇಒ ಡಾನ್ ಹಡ್ಸನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘ಆಸ್ಕರ್ ಪ್ರಶಸ್ತಿ ಸಮಾರಂಭವು ಹಿಂದಿನ ವರ್ಷ ಸಿನಿಮಾ ರಂಗದಲ್ಲಿ ಅಸಾಧಾರಣ ಕೆಲಸ ಮಾಡಿದ ವ್ಯಕ್ತಿಗಳ ಸಂಭ್ರಮದ ಕ್ಷಣವಾಗಿತ್ತು. ಅಂತಹ ಕ್ಷಣಗಳನ್ನು ಹಾಳುಮಾಡಿದ ಸ್ಮಿತ್ ಅವರ ವರ್ತನೆಯು ಸ್ವೀಕಾರರ್ಹವಲ್ಲ’ ಎಂದು ಅಕಾಡೆಮಿ ಹೇಳಿಕೆಯಲ್ಲಿ ತಿಳಿಸಿದೆ.

ಈ ಕುರಿತಂತೆ ಪ್ರತಿಕ್ರಿಯಿಸಿರುವವ ಸ್ಮಿತ್, ‘ನಾನು ಅಕಾಡೆಮಿಯ ನಿರ್ಧಾರವನ್ನು ಸ್ವೀಕರಿಸುತ್ತೇನೆ ಮತ್ತು ಗೌರವಿಸುತ್ತೇನೆ‘ ಎಂದು ಹೇಳಿದ್ದಾರೆ. ಇದಕ್ಕೂ ಮುನ್ನ ನೀಡಿದ್ದ ಹೇಳಿಕೆಯಲ್ಲಿ ನಟ ರಾಕ್, ನಿರ್ಮಾಪಕರು, ನಾಮನಿರ್ದೇಶಿತರು ಮತ್ತು ವೀಕ್ಷಕರಿಗೆ ತಮ್ಮ ವರ್ತನೆ ಕುರಿತಂತೆ ಸ್ಮಿತ್ ಕ್ಷಮೆಯಾಚಿಸಿದ್ದರು.
ಚಲನಚಿತ್ರ ಜಗತ್ತಿನ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಯಾದ ಆಸ್ಕರ್‌ ಸೇರಿದಂತೆ ಇತರ ಎಲ್ಲಾ ಅಕಾಡೆಮಿ ಕಾರ್ಯಕ್ರಮಗಳಿಂದ ಸ್ಮಿತ್ ಅವರನ್ನು 10 ವರ್ಷಗಳವರೆಗೆ ನಿಷೇಧಿಸಲಾಗಿದೆ.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago