Featured

ಆಸ್ಕರ್ ಪ್ರಶಸ್ತಿ ಸಮಾರಂಭಕ್ಕೆ ಹಾಜರಾಗದಂತೆ ವಿಲ್ ಸ್ಮಿತ್‌ಗೆ 10 ವರ್ಷಗಳ ನಿಷೇಧ – VIshwanews24

10 ವರ್ಷಗಳ ಕಾಲ ಆಸ್ಕರ್‌ ಪ್ರಶಸ್ತಿ ಸಮಾರಂಭಗಳಿಂದ ವಿಲ್ ಸ್ಮಿತ್ ಗೆ ನಿಷೇಧ

ಲಾಸ್ ಏಂಜಲೀಸ್: ಆಸ್ಕರ್ ಪ್ರಶಸ್ತಿ ವಿತರಣೆ ಸಮಾರಂಭದಲ್ಲಿ ಸಹ ನಟನ ಕೆನ್ನೆಗೆ ಬಾರಿಸಿ ಸುದ್ದಿಯಾಗಿದ್ದ ವಿಲ್ ಸ್ಮಿತ್ ಅವರನ್ನು ಹಾಲಿವುಡ್ ಫಿಲ್ಮ್ ಅಕಾಡೆಮಿಯು 10 ವರ್ಷಗಳ ಕಾಲ ಆಸ್ಕರ್‌ ಪ್ರಶಸ್ತಿ ಸಮಾರಂಭಗಳಿಂದ ನಿಷೇಧಿಸಿದೆ.

‘ವಿಲ್ ಸ್ಮಿತ್ ಅವರ ರಾಜೀನಾಮೆಯನ್ನು ಅಂಗೀಕರಿಸುವುದರ ಜೊತೆಗೆ ಏಪ್ರಿಲ್ 8, 2022 ರಿಂದ 10 ವರ್ಷಗಳ ಅವಧಿಗೆ ಆಸ್ಕರ್ ಪ್ರಶಸ್ತಿ ಸಮಾರಂಭಗಳಿಗೆ ಭೌತಿಕ ಮತ್ತು ವರ್ಚುವಲ್ ಆಗಿ ಹಾಜರಾಗಲು ಅನುಮತಿ ನೀಡದಿರಲು ಮಂಡಳಿಯ ಸಭೆ ನಿರ್ಧರಿಸಿದೆ’ ಎಂದು ಅಧ್ಯಕ್ಷ ಡೇವಿಡ್ ರೂಬಿನ್ ಮತ್ತು ಸಿಇಒ ಡಾನ್ ಹಡ್ಸನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘ಆಸ್ಕರ್ ಪ್ರಶಸ್ತಿ ಸಮಾರಂಭವು ಹಿಂದಿನ ವರ್ಷ ಸಿನಿಮಾ ರಂಗದಲ್ಲಿ ಅಸಾಧಾರಣ ಕೆಲಸ ಮಾಡಿದ ವ್ಯಕ್ತಿಗಳ ಸಂಭ್ರಮದ ಕ್ಷಣವಾಗಿತ್ತು. ಅಂತಹ ಕ್ಷಣಗಳನ್ನು ಹಾಳುಮಾಡಿದ ಸ್ಮಿತ್ ಅವರ ವರ್ತನೆಯು ಸ್ವೀಕಾರರ್ಹವಲ್ಲ’ ಎಂದು ಅಕಾಡೆಮಿ ಹೇಳಿಕೆಯಲ್ಲಿ ತಿಳಿಸಿದೆ.

ಈ ಕುರಿತಂತೆ ಪ್ರತಿಕ್ರಿಯಿಸಿರುವವ ಸ್ಮಿತ್, ‘ನಾನು ಅಕಾಡೆಮಿಯ ನಿರ್ಧಾರವನ್ನು ಸ್ವೀಕರಿಸುತ್ತೇನೆ ಮತ್ತು ಗೌರವಿಸುತ್ತೇನೆ‘ ಎಂದು ಹೇಳಿದ್ದಾರೆ. ಇದಕ್ಕೂ ಮುನ್ನ ನೀಡಿದ್ದ ಹೇಳಿಕೆಯಲ್ಲಿ ನಟ ರಾಕ್, ನಿರ್ಮಾಪಕರು, ನಾಮನಿರ್ದೇಶಿತರು ಮತ್ತು ವೀಕ್ಷಕರಿಗೆ ತಮ್ಮ ವರ್ತನೆ ಕುರಿತಂತೆ ಸ್ಮಿತ್ ಕ್ಷಮೆಯಾಚಿಸಿದ್ದರು.
ಚಲನಚಿತ್ರ ಜಗತ್ತಿನ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಯಾದ ಆಸ್ಕರ್‌ ಸೇರಿದಂತೆ ಇತರ ಎಲ್ಲಾ ಅಕಾಡೆಮಿ ಕಾರ್ಯಕ್ರಮಗಳಿಂದ ಸ್ಮಿತ್ ಅವರನ್ನು 10 ವರ್ಷಗಳವರೆಗೆ ನಿಷೇಧಿಸಲಾಗಿದೆ.

 

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago