Featured

ಆಸ್ಕರ್​ ಪ್ರಶಸ್ತಿ ಸಮಾರಂಭದಲ್ಲಿ ಪತ್ನಿ ಬಗ್ಗೆ ಜೋಕ್​ : ನಿರೂಪಕನ ಕೆನ್ನೆಗೆ ಬಾರಿಸಿದ ನಟ ವಿಲ್​ ಸ್ಮಿತ್​; ವಿಡಿಯೋ ವೈರಲ್ – Vishwanews24​

ಆಸ್ಕರ್​ ಪ್ರಶಸ್ತಿ ಸಮಾರಂಭದಲ್ಲಿ ಪತ್ನಿ ಬಗ್ಗೆ ಜೋಕ್​ ನಿರೂಪಕನ ಕೆನ್ನೆಗೆ ಬಾರಿಸಿದ ನಟ ವಿಲ್​ ಸ್ಮಿತ್​; ವಿಡಿಯೋ ವೈರಲ್​

ಪ್ರತಿಷ್ಠಿತ ಆಸ್ಕರ್​ ಪ್ರಶಸ್ತಿ ಸಮಾರಂಭದಲ್ಲಿ ನಟ ವಿಲ್​ ಸ್ಮಿತ್​ ಅವರು ಎರಡು ಕಾರಣಕ್ಕಾಗಿ ಸುದ್ದಿ ಆಗಿದ್ದಾರೆ. ‘ಕಿಂಗ್​ ರಿಚರ್ಡ್’ ಸಿನಿಮಾದಲ್ಲಿನ ಅಭಿನಯಕ್ಕಾಗಿ ಅವರು ‘ಅತ್ಯುತ್ತಮ ನಟ’ ಪ್ರಶಸ್ತಿ ಪಡೆದರು. ಹಾಗೆಯೇ, ಹಾಸ್ಯ ನಟನ ಕೆನ್ನೆಗೆ ಬಾರಿಸುವ ಮೂಲಕ ಅವರು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ಎಂದಿನಂತೆ ಆಸ್ಕರ್​ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಖುಷಿಖುಷಿಯಾಗಿ ನಡೆಯುತ್ತಿತ್ತು. ವೇದಿಕೆ ಮೇಲೆ ಹಾಸ್ಯ ನಟ ಕ್ರಿಸ್​ ರಾಕ್​ ಮಾತನಾಡುತ್ತಿದ್ದರು. ಅವರ ಮಾತು ವಿಲ್​ ಸ್ಮಿತ್​ ಪತ್ನಿ ಜೇಡಾ ಪಿಂಕೆಟ್​ ಸ್ಮಿತ್​  ಕಡೆಗೆ ತಿರುಗಿತು. ಜೇಡಾ ಪಿಂಕೆಟ್​​ ಸ್ಮಿತ್​ ಬಗ್ಗೆ ಅವರು ಜೋಕ್​ ಮಾಡಿದರು. ಅದನ್ನು ಕೇಳಿ ಇಡೀ ಸಭಾಂಗಣ ಜೋರಾಗಿ ನಕ್ಕಿತು. ಒಂದು ಕ್ಷಣ ವಿಲ್​ ಸ್ಮಿತ್​ ಕೂಡ ನಕ್ಕರು. ಆದರೆ ಅಲ್ಲಿ ಮರುಕ್ಷಣ ನಡೆದಿದ್ದು ನಿಜಕ್ಕೂ ಶಾಕಿಂಗ್​. ಕೂಡಲೇ ವೇದಿಕೆ ಏರಿದ ವಿಲ್​ ಸ್ಮಿತ್​ ಅವರು ಕ್ರಿಸ್​ ರಾಕ್​ ಮುಖಕ್ಕೆ ಬಾರಿಸಿದರು. ಇಡೀ ಸಭಾಂಗಣದಲ್ಲಿ ಮೌನ ಆವರಿಸಿತು. ಸದ್ಯ ಈ ವಿಡಿಯೋ ಸಖತ್​ ವೈರಲ್​ ಆಗುತ್ತಿದೆ.

ಅತ್ಯುತ್ತಮ ಡಾಕ್ಯುಮೆಂಟರಿ ಪ್ರಶಸ್ತಿಯನ್ನು ವಿತರಿಸಲು ಕ್ರಿಸ್​ ರಾಕ್​ ಅವರನ್ನು ವೇದಿಕೆಗೆ ಕರೆಯಲಾಗಿತ್ತು. ಈ ವೇಳೆ ಅವರು ಸುಮ್ಮನಿರಲಾರದೇ ಜೇಡಾ ಪಿಂಕೆಟ್​​ ಸ್ಮಿತ್​ ಬಗ್ಗೆ ಕಾಮಿಡಿ ಮಾಡಿದರು. ಅದು ವಿಲ್​ ಸ್ಮಿತ್​ ಅವರಿಗೆ ಸರಿ ಎನಿಸಲಿಲ್ಲ. ಪತ್ನಿಯ ಬಗ್ಗೆ ಜೋಕ್​ ಮಾಡಿದ್ದಕ್ಕಾಗಿ ಕ್ರಿಸ್​ ರಾಕ್​ ಕೆನ್ನೆಗೆ ವಿಲ್​ ​ಸ್ಮಿತ್​ ಬಾರಿಸಿದರು. ಇದನ್ನು ಕಂಡು ಎಲ್ಲರಿಗೂ ಅಚ್ಚರಿ ಆಗಿದೆ.

ಇಡೀ ಸನ್ನಿವೇಶ ಸ್ಕ್ರಿಪ್ಟೆಡ್​ ಇರಬಹುದಾ? ವೇದಿಕೆಯಲ್ಲಿ ಬೇಕಂತಲೇ ಈ ರೀತಿ ನಾಟಕ ಮಾಡಿರಬಹುದಾ ಎಂಬ ಪ್ರಶ್ನೆ ಕೂಡ ಜನರ ಮನದಲ್ಲಿ ಮೂಡಿದೆ. ಒಟ್ಟಿನಲ್ಲಿ ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ರೀತಿ ಆಗಿದ್ದರ ಬಗ್ಗೆ ಸ್ವತಃ ವಿಲ್​ ಸ್ಮಿತ್​ ಅವರಿಗೂ ಬೇಸರ ಇದೆ. ಈಗ ಅವರು ಕ್ಷಮೆ ಕೇಳಿದ್ದಾರೆ. ‘ನಾನು ಅಕಾಡೆಮಿಯ ಕ್ಷಮೆ ಕೇಳುತ್ತೇನೆ. ನಾಮನಿರ್ದೇಶಕಗೊಂಡ ಎಲ್ಲರಲ್ಲೂ ಕ್ಷಮೆ ಕೇಳುತ್ತೇನೆ’ ಎಂದು ಅವರು ವೇದಿಕೆ ಮೇಲೆ ಕಣ್ಣೀರು ಹಾಕಿದ್ದಾರೆ. ಆ ವಿಡಿಯೋ ಕೂಡ ವೈರಲ್​ ಆಗುತ್ತಿದೆ.

‘ದಿ ಐಸ್​ ಆಫ್​ ಟ್ಯಾಮಿ ಫೇ’ ಸಿನಿಮಾದಲ್ಲಿನ ನಟನೆಗಾಗಿ ಜೆಸ್ಸಿಕಾ ಚಾಸ್ಟೇನ್​ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ನೀಡಲಾಗಿದೆ. ಇದೇ ಮೊದಲ ಬಾರಿಗೆ ಮೂವರು ಮಹಿಳೆಯರು (ರೆಜಿನಾ ಹಾಲ್​, ಎಮಿ ಶೂಮಾರ್, ವೊಂಡಾ ಸ್ಕೈಸ್​) ಆಸ್ಕರ್​ ಸಮಾರಂಭವನ್ನು ಹೋಸ್ಟ್​ ಮಾಡಿದ್ದಾರೆ. ಶಾನ್​ ಹೆಡರ್ ನಿರ್ದೇಶನದ ‘ಕೋಡಾ’ ಚಿತ್ರವು ಅತ್ಯುತ್ತಮ ಸಿನಿಮಾ ಪ್ರಶಸ್ತಿಯನ್ನು ಪಡೆದುಕೊಂಡಿದೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago