Featured

ಆಸ್ಕರ್​ ಪ್ರಶಸ್ತಿ ಸಮಾರಂಭದಲ್ಲಿ ಪತ್ನಿ ಬಗ್ಗೆ ಜೋಕ್​ : ನಿರೂಪಕನ ಕೆನ್ನೆಗೆ ಬಾರಿಸಿದ ನಟ ವಿಲ್​ ಸ್ಮಿತ್​; ವಿಡಿಯೋ ವೈರಲ್ – Vishwanews24​

ಆಸ್ಕರ್​ ಪ್ರಶಸ್ತಿ ಸಮಾರಂಭದಲ್ಲಿ ಪತ್ನಿ ಬಗ್ಗೆ ಜೋಕ್​ ನಿರೂಪಕನ ಕೆನ್ನೆಗೆ ಬಾರಿಸಿದ ನಟ ವಿಲ್​ ಸ್ಮಿತ್​; ವಿಡಿಯೋ ವೈರಲ್​

ಪ್ರತಿಷ್ಠಿತ ಆಸ್ಕರ್​ ಪ್ರಶಸ್ತಿ ಸಮಾರಂಭದಲ್ಲಿ ನಟ ವಿಲ್​ ಸ್ಮಿತ್​ ಅವರು ಎರಡು ಕಾರಣಕ್ಕಾಗಿ ಸುದ್ದಿ ಆಗಿದ್ದಾರೆ. ‘ಕಿಂಗ್​ ರಿಚರ್ಡ್’ ಸಿನಿಮಾದಲ್ಲಿನ ಅಭಿನಯಕ್ಕಾಗಿ ಅವರು ‘ಅತ್ಯುತ್ತಮ ನಟ’ ಪ್ರಶಸ್ತಿ ಪಡೆದರು. ಹಾಗೆಯೇ, ಹಾಸ್ಯ ನಟನ ಕೆನ್ನೆಗೆ ಬಾರಿಸುವ ಮೂಲಕ ಅವರು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ಎಂದಿನಂತೆ ಆಸ್ಕರ್​ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಖುಷಿಖುಷಿಯಾಗಿ ನಡೆಯುತ್ತಿತ್ತು. ವೇದಿಕೆ ಮೇಲೆ ಹಾಸ್ಯ ನಟ ಕ್ರಿಸ್​ ರಾಕ್​ ಮಾತನಾಡುತ್ತಿದ್ದರು. ಅವರ ಮಾತು ವಿಲ್​ ಸ್ಮಿತ್​ ಪತ್ನಿ ಜೇಡಾ ಪಿಂಕೆಟ್​ ಸ್ಮಿತ್​  ಕಡೆಗೆ ತಿರುಗಿತು. ಜೇಡಾ ಪಿಂಕೆಟ್​​ ಸ್ಮಿತ್​ ಬಗ್ಗೆ ಅವರು ಜೋಕ್​ ಮಾಡಿದರು. ಅದನ್ನು ಕೇಳಿ ಇಡೀ ಸಭಾಂಗಣ ಜೋರಾಗಿ ನಕ್ಕಿತು. ಒಂದು ಕ್ಷಣ ವಿಲ್​ ಸ್ಮಿತ್​ ಕೂಡ ನಕ್ಕರು. ಆದರೆ ಅಲ್ಲಿ ಮರುಕ್ಷಣ ನಡೆದಿದ್ದು ನಿಜಕ್ಕೂ ಶಾಕಿಂಗ್​. ಕೂಡಲೇ ವೇದಿಕೆ ಏರಿದ ವಿಲ್​ ಸ್ಮಿತ್​ ಅವರು ಕ್ರಿಸ್​ ರಾಕ್​ ಮುಖಕ್ಕೆ ಬಾರಿಸಿದರು. ಇಡೀ ಸಭಾಂಗಣದಲ್ಲಿ ಮೌನ ಆವರಿಸಿತು. ಸದ್ಯ ಈ ವಿಡಿಯೋ ಸಖತ್​ ವೈರಲ್​ ಆಗುತ್ತಿದೆ.

ಅತ್ಯುತ್ತಮ ಡಾಕ್ಯುಮೆಂಟರಿ ಪ್ರಶಸ್ತಿಯನ್ನು ವಿತರಿಸಲು ಕ್ರಿಸ್​ ರಾಕ್​ ಅವರನ್ನು ವೇದಿಕೆಗೆ ಕರೆಯಲಾಗಿತ್ತು. ಈ ವೇಳೆ ಅವರು ಸುಮ್ಮನಿರಲಾರದೇ ಜೇಡಾ ಪಿಂಕೆಟ್​​ ಸ್ಮಿತ್​ ಬಗ್ಗೆ ಕಾಮಿಡಿ ಮಾಡಿದರು. ಅದು ವಿಲ್​ ಸ್ಮಿತ್​ ಅವರಿಗೆ ಸರಿ ಎನಿಸಲಿಲ್ಲ. ಪತ್ನಿಯ ಬಗ್ಗೆ ಜೋಕ್​ ಮಾಡಿದ್ದಕ್ಕಾಗಿ ಕ್ರಿಸ್​ ರಾಕ್​ ಕೆನ್ನೆಗೆ ವಿಲ್​ ​ಸ್ಮಿತ್​ ಬಾರಿಸಿದರು. ಇದನ್ನು ಕಂಡು ಎಲ್ಲರಿಗೂ ಅಚ್ಚರಿ ಆಗಿದೆ.

ಇಡೀ ಸನ್ನಿವೇಶ ಸ್ಕ್ರಿಪ್ಟೆಡ್​ ಇರಬಹುದಾ? ವೇದಿಕೆಯಲ್ಲಿ ಬೇಕಂತಲೇ ಈ ರೀತಿ ನಾಟಕ ಮಾಡಿರಬಹುದಾ ಎಂಬ ಪ್ರಶ್ನೆ ಕೂಡ ಜನರ ಮನದಲ್ಲಿ ಮೂಡಿದೆ. ಒಟ್ಟಿನಲ್ಲಿ ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ರೀತಿ ಆಗಿದ್ದರ ಬಗ್ಗೆ ಸ್ವತಃ ವಿಲ್​ ಸ್ಮಿತ್​ ಅವರಿಗೂ ಬೇಸರ ಇದೆ. ಈಗ ಅವರು ಕ್ಷಮೆ ಕೇಳಿದ್ದಾರೆ. ‘ನಾನು ಅಕಾಡೆಮಿಯ ಕ್ಷಮೆ ಕೇಳುತ್ತೇನೆ. ನಾಮನಿರ್ದೇಶಕಗೊಂಡ ಎಲ್ಲರಲ್ಲೂ ಕ್ಷಮೆ ಕೇಳುತ್ತೇನೆ’ ಎಂದು ಅವರು ವೇದಿಕೆ ಮೇಲೆ ಕಣ್ಣೀರು ಹಾಕಿದ್ದಾರೆ. ಆ ವಿಡಿಯೋ ಕೂಡ ವೈರಲ್​ ಆಗುತ್ತಿದೆ.

‘ದಿ ಐಸ್​ ಆಫ್​ ಟ್ಯಾಮಿ ಫೇ’ ಸಿನಿಮಾದಲ್ಲಿನ ನಟನೆಗಾಗಿ ಜೆಸ್ಸಿಕಾ ಚಾಸ್ಟೇನ್​ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ನೀಡಲಾಗಿದೆ. ಇದೇ ಮೊದಲ ಬಾರಿಗೆ ಮೂವರು ಮಹಿಳೆಯರು (ರೆಜಿನಾ ಹಾಲ್​, ಎಮಿ ಶೂಮಾರ್, ವೊಂಡಾ ಸ್ಕೈಸ್​) ಆಸ್ಕರ್​ ಸಮಾರಂಭವನ್ನು ಹೋಸ್ಟ್​ ಮಾಡಿದ್ದಾರೆ. ಶಾನ್​ ಹೆಡರ್ ನಿರ್ದೇಶನದ ‘ಕೋಡಾ’ ಚಿತ್ರವು ಅತ್ಯುತ್ತಮ ಸಿನಿಮಾ ಪ್ರಶಸ್ತಿಯನ್ನು ಪಡೆದುಕೊಂಡಿದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago