Featured

ಆಸ್ಟಿಯೋಕ್ಲ್ಯಾಟೋಮಾ ಕಾಯಿಲೆಯಿಂದ ಬಳಲುತ್ತಿರುವ ಮಂಡ್ಯ ಮಾಜಿ ಸಂಸದೆ ರಮ್ಯಾ ..

ಬೆಂಗಳೂರು: ನಟ ಅಂಬರೀಶ್ ಅಂತಿಮ ದರ್ಶನಕ್ಕೆ ಬಾರದ ಮಾಜಿ ಸಂಸದೆ ರಮ್ಯಾ ವೀರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಆದ್ರೆ ರಮ್ಯಾ ಅನಾರೋಗ್ಯದ ಕಾರಣದಿಂದ ರಮ್ಯಾ ಅವರು ಆಗಮಿಸಿಲ್ಲ ಎಂದು ಅಂದಾಜಿಸಲಾಗಿದೆ.

ರಮ್ಯಾ ಅವರು ಅಕ್ಟೋಬರ್‌ 19 ರಂದು ಇನ್‌ಸ್ಟಾಗ್ರಾಂ ನಲ್ಲಿ  ಕಾಲಿನ ಪಾದಕ್ಕೆ  ಚಿಕಿತ್ಸೆ ಪಡೆದ ಚಿತ್ರವೊಂದನ್ನು  ಪೋಸ್ಟ್‌ ಮಾಡಿ ಅನಾರೋಗ್ಯಕ್ಕೀಡಾದ ಬಗ್ಗೆ ಹೇಳಿಕೊಂಡಿದ್ದರು. ಮೂಳೆಗಳಿಗೆ ಸಂಬಂಧಿಸಿದ ಆಸ್ಟಿಯೋಕ್ಲ್ಯಾಟೋಮಾ ಎಂಬ ಕಾಯಿಲೆಯಿಂದ ನಾನು ಬಳಲುತ್ತಿದ್ದು, ಕೊಂಚ ತಡ ಮಾಡಿದರೆ ಕ್ಯಾನ್ಸರ್‌ಗೆ ಗುರಿಯಾಗಬೇಕಿತ್ತು ಎಂದು ಹೇಳಿಕೊಂಡಿದ್ದರು. 

ಈ ಕಾಯಿಲೆ 10 ಲಕ್ಷ ಮಹಿಳೆಯರಲ್ಲಿ ಒಬ್ಬರಿಗೆ ಕಾಣಿಸಿಕೊಳ್ಳುತ್ತದೆ. ನಿರ್ಲಕ್ಷ್ಯ ವಹಿಸಬೇಡಿ. ಆರೋಗ್ಯದಲ್ಲಿ  ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಿರಿ ಎಂದು ಸಲಹೆ ನೀಡಿದ್ದರು.

ಅಂಬರೀಶ್‌ ಅವರ ನಿಧನದ ಬಳಿಕ ಟ್ವೀಟ್‌ ಮಾಡಿದ್ದ ರಮ್ಯಾ, ‘ಅಂಬರೀಷ್‌ ಅಂಕಲ್‌ ಅವರು ಹೊರಟು ಹೋದ  ಬಗ್ಗೆ ಕೇಳಿ ತುಂಬಾ ದುಃಖಿತಳಾಗಿದ್ದೇನೆ. ಅವರ ಆತ್ಮಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ನನ್ನ ತೀವ್ರ ಸಂತಾಪ. ಅವರನ್ನು ಯಾವಾಗಲೂ ಪ್ರೀತಿಯಿಂದ ನೆನಪಿಟ್ಟುಕೊಳ್ಳುತ್ತೇನೆ’. ಎಂದು ಬರೆದಿದ್ದರು.

ಮಂಡ್ಯದಲ್ಲಿ 2013ರಲ್ಲಿ ನಡೆದ ಲೋಕಸಭಾ ಉಪ ಚುನಾವಣೆಗೆ ರಮ್ಯಾ ಕಾಂಗ್ರೆಸ್‌ ಅಭ್ಯರ್ಥಿ ಯಾಗಲು ಅಂಬರೀಷ್‌ ಅವರೇ ಕಾರಣ. ಅಲ್ಲದೆ, ರಮ್ಯಾ ಗೆಲುವಿನಲ್ಲೂ ಪ್ರಮುಖ ಪಾತ್ರ ವಹಿಸಿದ್ದರು.

 

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

16 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

16 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

17 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

20 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

20 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

20 hours ago