ಬೆಂಗಳೂರು: ನಟ ಅಂಬರೀಶ್ ಅಂತಿಮ ದರ್ಶನಕ್ಕೆ ಬಾರದ ಮಾಜಿ ಸಂಸದೆ ರಮ್ಯಾ ವೀರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಆದ್ರೆ ರಮ್ಯಾ ಅನಾರೋಗ್ಯದ ಕಾರಣದಿಂದ ರಮ್ಯಾ ಅವರು ಆಗಮಿಸಿಲ್ಲ ಎಂದು ಅಂದಾಜಿಸಲಾಗಿದೆ.
ರಮ್ಯಾ ಅವರು ಅಕ್ಟೋಬರ್ 19 ರಂದು ಇನ್ಸ್ಟಾಗ್ರಾಂ ನಲ್ಲಿ ಕಾಲಿನ ಪಾದಕ್ಕೆ ಚಿಕಿತ್ಸೆ ಪಡೆದ ಚಿತ್ರವೊಂದನ್ನು ಪೋಸ್ಟ್ ಮಾಡಿ ಅನಾರೋಗ್ಯಕ್ಕೀಡಾದ ಬಗ್ಗೆ ಹೇಳಿಕೊಂಡಿದ್ದರು. ಮೂಳೆಗಳಿಗೆ ಸಂಬಂಧಿಸಿದ ಆಸ್ಟಿಯೋಕ್ಲ್ಯಾಟೋಮಾ ಎಂಬ ಕಾಯಿಲೆಯಿಂದ ನಾನು ಬಳಲುತ್ತಿದ್ದು, ಕೊಂಚ ತಡ ಮಾಡಿದರೆ ಕ್ಯಾನ್ಸರ್ಗೆ ಗುರಿಯಾಗಬೇಕಿತ್ತು ಎಂದು ಹೇಳಿಕೊಂಡಿದ್ದರು.
ಈ ಕಾಯಿಲೆ 10 ಲಕ್ಷ ಮಹಿಳೆಯರಲ್ಲಿ ಒಬ್ಬರಿಗೆ ಕಾಣಿಸಿಕೊಳ್ಳುತ್ತದೆ. ನಿರ್ಲಕ್ಷ್ಯ ವಹಿಸಬೇಡಿ. ಆರೋಗ್ಯದಲ್ಲಿ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಿರಿ ಎಂದು ಸಲಹೆ ನೀಡಿದ್ದರು.
ಅಂಬರೀಶ್ ಅವರ ನಿಧನದ ಬಳಿಕ ಟ್ವೀಟ್ ಮಾಡಿದ್ದ ರಮ್ಯಾ, ‘ಅಂಬರೀಷ್ ಅಂಕಲ್ ಅವರು ಹೊರಟು ಹೋದ ಬಗ್ಗೆ ಕೇಳಿ ತುಂಬಾ ದುಃಖಿತಳಾಗಿದ್ದೇನೆ. ಅವರ ಆತ್ಮಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ನನ್ನ ತೀವ್ರ ಸಂತಾಪ. ಅವರನ್ನು ಯಾವಾಗಲೂ ಪ್ರೀತಿಯಿಂದ ನೆನಪಿಟ್ಟುಕೊಳ್ಳುತ್ತೇನೆ’. ಎಂದು ಬರೆದಿದ್ದರು.
ಮಂಡ್ಯದಲ್ಲಿ 2013ರಲ್ಲಿ ನಡೆದ ಲೋಕಸಭಾ ಉಪ ಚುನಾವಣೆಗೆ ರಮ್ಯಾ ಕಾಂಗ್ರೆಸ್ ಅಭ್ಯರ್ಥಿ ಯಾಗಲು ಅಂಬರೀಷ್ ಅವರೇ ಕಾರಣ. ಅಲ್ಲದೆ, ರಮ್ಯಾ ಗೆಲುವಿನಲ್ಲೂ ಪ್ರಮುಖ ಪಾತ್ರ ವಹಿಸಿದ್ದರು.
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…