ಬೆಂಗಳೂರು: ನಟ ಅಂಬರೀಶ್ ಅಂತಿಮ ದರ್ಶನಕ್ಕೆ ಬಾರದ ಮಾಜಿ ಸಂಸದೆ ರಮ್ಯಾ ವೀರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಆದ್ರೆ ರಮ್ಯಾ ಅನಾರೋಗ್ಯದ ಕಾರಣದಿಂದ ರಮ್ಯಾ ಅವರು ಆಗಮಿಸಿಲ್ಲ ಎಂದು ಅಂದಾಜಿಸಲಾಗಿದೆ.
ರಮ್ಯಾ ಅವರು ಅಕ್ಟೋಬರ್ 19 ರಂದು ಇನ್ಸ್ಟಾಗ್ರಾಂ ನಲ್ಲಿ ಕಾಲಿನ ಪಾದಕ್ಕೆ ಚಿಕಿತ್ಸೆ ಪಡೆದ ಚಿತ್ರವೊಂದನ್ನು ಪೋಸ್ಟ್ ಮಾಡಿ ಅನಾರೋಗ್ಯಕ್ಕೀಡಾದ ಬಗ್ಗೆ ಹೇಳಿಕೊಂಡಿದ್ದರು. ಮೂಳೆಗಳಿಗೆ ಸಂಬಂಧಿಸಿದ ಆಸ್ಟಿಯೋಕ್ಲ್ಯಾಟೋಮಾ ಎಂಬ ಕಾಯಿಲೆಯಿಂದ ನಾನು ಬಳಲುತ್ತಿದ್ದು, ಕೊಂಚ ತಡ ಮಾಡಿದರೆ ಕ್ಯಾನ್ಸರ್ಗೆ ಗುರಿಯಾಗಬೇಕಿತ್ತು ಎಂದು ಹೇಳಿಕೊಂಡಿದ್ದರು.
ಈ ಕಾಯಿಲೆ 10 ಲಕ್ಷ ಮಹಿಳೆಯರಲ್ಲಿ ಒಬ್ಬರಿಗೆ ಕಾಣಿಸಿಕೊಳ್ಳುತ್ತದೆ. ನಿರ್ಲಕ್ಷ್ಯ ವಹಿಸಬೇಡಿ. ಆರೋಗ್ಯದಲ್ಲಿ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಿರಿ ಎಂದು ಸಲಹೆ ನೀಡಿದ್ದರು.
ಅಂಬರೀಶ್ ಅವರ ನಿಧನದ ಬಳಿಕ ಟ್ವೀಟ್ ಮಾಡಿದ್ದ ರಮ್ಯಾ, ‘ಅಂಬರೀಷ್ ಅಂಕಲ್ ಅವರು ಹೊರಟು ಹೋದ ಬಗ್ಗೆ ಕೇಳಿ ತುಂಬಾ ದುಃಖಿತಳಾಗಿದ್ದೇನೆ. ಅವರ ಆತ್ಮಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ನನ್ನ ತೀವ್ರ ಸಂತಾಪ. ಅವರನ್ನು ಯಾವಾಗಲೂ ಪ್ರೀತಿಯಿಂದ ನೆನಪಿಟ್ಟುಕೊಳ್ಳುತ್ತೇನೆ’. ಎಂದು ಬರೆದಿದ್ದರು.
ಮಂಡ್ಯದಲ್ಲಿ 2013ರಲ್ಲಿ ನಡೆದ ಲೋಕಸಭಾ ಉಪ ಚುನಾವಣೆಗೆ ರಮ್ಯಾ ಕಾಂಗ್ರೆಸ್ ಅಭ್ಯರ್ಥಿ ಯಾಗಲು ಅಂಬರೀಷ್ ಅವರೇ ಕಾರಣ. ಅಲ್ಲದೆ, ರಮ್ಯಾ ಗೆಲುವಿನಲ್ಲೂ ಪ್ರಮುಖ ಪಾತ್ರ ವಹಿಸಿದ್ದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…