ಕ್ಯಾನಬೆರ್ರಾ: ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಭಾರತ ತಂಡ 13 ರನ್ಗಳ ಗೆಲುವು ಸಾಧಿಸಿತು.
ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಭಾರತ ತಂಡಕ್ಕೆ ಹೇಳಿಕೊಳ್ಳುವಂತಹ ಆರಂಭಿಕ ಜತೆಯಾಟ ದೊರೆಯಲಿಲ್ಲ. ಆದರೆ, ಕೆಳ ಮಧ್ಯಮ ಕ್ರಮಾಂಕದಲ್ಲಿ ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜ ಜೋಡಿ ಬಿರುಸಿನ ಬ್ಯಾಟಿಂಗ್ ಮೂಲಕ ತಂಡಕ್ಕೆ ನೆರವಾಯಿತು. ಪಾಂಡ್ಯ 76 ಎಸೆತಗಳಲ್ಲಿ 92 ರನ್ ಹಾಗೂ ಜಡೇಜ 50 ಎಸೆತಗಳಲ್ಲಿ 66 ರನ್ ಗಳಿಸಿದರು. ಕೊನೆಯ ನಾಲ್ಕು ಓವರ್ಗಳಲ್ಲಿ ಈ ಜೋಡಿ 59 ರನ್ ಪೇರಿಸಿತು. ಇದರಿಂದ ಟೀಂ ಇಂಡಿಯಾ ಆಸ್ಟ್ರೇಲಿಯಾಗೆ 303 ರನ್ಗಳ ಸವಾಲಿನ ಗುರಿ ನೀಡಿತು.
ಪಂದ್ಯದ ಕೊನೆಯ ಓವರ್ನಲ್ಲಿ ಜಸ್ಪ್ರೀತ್ ಬೂಮ್ರಾ ಆ್ಯಡಮ್ ಜಂಪಾ ವಿಕೆಟ್ ಕಬಳಿಸುವ ಮೂಲಕ ತಂಡದ ಗೆಲುವಿಗೆ ನೆರವಾದರು. ಆಸ್ಟ್ರೇಲಿಯಾ 49.3 ಓವರ್ಗಳಲ್ಲಿ 289 ರನ್ ಗಳಿಸಿತು. ನಾಯಕ ಆ್ಯರನ್ ಫಿಂಚ್ 75 (82), ಗ್ಲೆನ್ ಮ್ಯಾಕ್ಸ್ವೆಲ್ 59 (38) ಭರ್ಜರಿ ಆಟ ಪ್ರದರ್ಶಿಸಿದರು.
ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾ 2 ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಸರಣಿ ತನ್ನದಾಗಿಸಿಕೊಂಡಿದೆ.
ಮಂಗಳೂರು : ಹೆಚ್ಚುತ್ತಿರುವ ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಂಗಳೂರು : ಆಫ್ರಿಕಾ…
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…
ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…
ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…
ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…
ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…