ಸಿಡ್ನಿ: ಆತಿಥೇಯ ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಪಂದ್ಯದ ಅಂತಿಮ ದಿನ ಮಳೆಗೆ ಬಲಿಯಾಗುವುದರೊಂದಿಗೆ ಪಂದ್ಯಕ್ಕೆ ಡ್ರಾ ಮುದ್ರೆ ಬಿದ್ದಿದೆ. ಇದರೊಂದಿಗೆ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದ ಭಾರತ ಐತಿಹಾಸಿಕ ಸರಣಿ ಗೆದ್ದು ಬೀಗಿದೆ. ಕೋಹ್ಲಿ ನಾಯಕತ್ವದಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ನೆಲದಲ್ಲಿ ಮೊದಲ ಬಾರಿಗೆ ಸರಣಿ ಗೆದ್ದ ಸಾಧನೆ ಮಾಡಿದ್ದಾರೆ.
ನಾಲ್ಕನೇ ದಿನದ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 6 ರನ್ ಗಳಿಸಿದ್ದ ಆಸ್ಟ್ರೇಲಿಯಾ ಅಂತಿಮ ದಿನ ಸೋಲು ತಪ್ಪಿಸಾಲು ಹೋರಾಡಬೇಕಿತ್ತು. ಆದರೆ ವರುಣನ ಕೃಪೆ ಪೈನ್ ಬಳಗದ ಮೇಲೆ ಇದ್ದರಿಂದ ಮತ್ತೊಂದು ಸೋಲು ಡ್ರಾಗೆ ಪರಿವರ್ತನೆಯಾಯಿತು.
ಭಾರತ ಮೊದಲ ಇನ್ನಿಂಗ್ಸ್ ನಲ್ಲಿ 7 ವಿಕೆಟ್ ನಷ್ಟಕ್ಕೆ622 ರನ್ ಗಳಿಸಿ ಡಿಕ್ಲರ್ ಮಾಡಿಕೊಂಡಿತ್ತು. ಭಾರತದ ಪರ ಚೇತೇಶ್ವರ ಪೂಜಾರ 193 ರನ್, ರರಿಷಭ್ ಪಂತ್ ಅಜೇಯ159 ರನ್ ಗಳಿಸಿದ್ದರು. ಆಸ್ಟ್ರೇಲಿಯಾ ತಂಡ ಕೇವಲ 300 ರನ್ ಗಳಿಗೆ ಅಲ್ ಔಟ್ ಆಗುವುದರೊಂದಿಗೆ ಫಾಲೋ ಆನ್ ಗೆ ಸಿಲುಕಿತ್ತು. ಆದರೆ ನಾಲ್ಕನೇ ಮತ್ತು ಐದನೇ ದಿನದ ಮಂದ ಬೆಳಕು ಮತ್ತು ಮಳೆ ಆಸ್ಟ್ರೇಲಿಯಾಗೆ ವರವಾಗಿ ಪರಿಣಮಿಸಿತು.
ಸರಣಿಯಲ್ಲಿ ಅದ್ಭುತ ಪ್ರದರ್ಶನ ಬ್ಯಾಟಿಂಗ್ ನೀಡಿದ ಭಾರತದ ಚೇತೇಶ್ವರ ಪೂಜಾರ ಅರ್ಹವಾಗಿ ಪಂದ್ಯಶ್ರೇಷ್ಠ ಮತ್ತು ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…