Featured

ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಗೆದ್ದ ಟೀಂ ಇಂಡಿಯಾ ;ಭಾರತಕ್ಕೆ ಐತಿಹಾಸಿಕ ಸರಣಿ ಜಯ

ಸಿಡ್ನಿ: ಆತಿಥೇಯ ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಪಂದ್ಯದ ಅಂತಿಮ ದಿನ ಮಳೆಗೆ ಬಲಿಯಾಗುವುದರೊಂದಿಗೆ ಪಂದ್ಯಕ್ಕೆ ಡ್ರಾ ಮುದ್ರೆ ಬಿದ್ದಿದೆ. ಇದರೊಂದಿಗೆ ಸರಣಿಯಲ್ಲಿ 2-1  ಮುನ್ನಡೆ ಸಾಧಿಸಿದ ಭಾರತ ಐತಿಹಾಸಿಕ ಸರಣಿ ಗೆದ್ದು ಬೀಗಿದೆ. ಕೋಹ್ಲಿ ನಾಯಕತ್ವದಲ್ಲಿ ಟೀಂ ಇಂಡಿಯಾ  ಆಸ್ಟ್ರೇಲಿಯಾ ನೆಲದಲ್ಲಿ ಮೊದಲ ಬಾರಿಗೆ ಸರಣಿ ಗೆದ್ದ ಸಾಧನೆ ಮಾಡಿದ್ದಾರೆ.

ನಾಲ್ಕನೇ ದಿನದ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ  6  ರನ್ ಗಳಿಸಿದ್ದ  ಆಸ್ಟ್ರೇಲಿಯಾ ಅಂತಿಮ ದಿನ ಸೋಲು ತಪ್ಪಿಸಾಲು ಹೋರಾಡಬೇಕಿತ್ತು. ಆದರೆ ವರುಣನ ಕೃಪೆ ಪೈನ್ ಬಳಗದ ಮೇಲೆ ಇದ್ದರಿಂದ ಮತ್ತೊಂದು ಸೋಲು ಡ್ರಾಗೆ ಪರಿವರ್ತನೆಯಾಯಿತು.

ಭಾರತ ಮೊದಲ ಇನ್ನಿಂಗ್ಸ್ ನಲ್ಲಿ 7 ವಿಕೆಟ್ ನಷ್ಟಕ್ಕೆ622 ರನ್ ಗಳಿಸಿ ಡಿಕ್ಲರ್ ಮಾಡಿಕೊಂಡಿತ್ತು. ಭಾರತದ ಪರ ಚೇತೇಶ್ವರ ಪೂಜಾರ 193 ರನ್, ರರಿಷಭ್ ಪಂತ್ ಅಜೇಯ159 ರನ್ ಗಳಿಸಿದ್ದರು. ಆಸ್ಟ್ರೇಲಿಯಾ ತಂಡ ಕೇವಲ 300 ರನ್ ಗಳಿಗೆ ಅಲ್ ಔಟ್  ಆಗುವುದರೊಂದಿಗೆ ಫಾಲೋ ಆನ್ ಗೆ ಸಿಲುಕಿತ್ತು. ಆದರೆ ನಾಲ್ಕನೇ ಮತ್ತು ಐದನೇ ದಿನದ ಮಂದ ಬೆಳಕು ಮತ್ತು ಮಳೆ ಆಸ್ಟ್ರೇಲಿಯಾಗೆ ವರವಾಗಿ ಪರಿಣಮಿಸಿತು.

ಸರಣಿಯಲ್ಲಿ ಅದ್ಭುತ ಪ್ರದರ್ಶನ ಬ್ಯಾಟಿಂಗ್  ನೀಡಿದ  ಭಾರತದ ಚೇತೇಶ್ವರ ಪೂಜಾರ ಅರ್ಹವಾಗಿ ಪಂದ್ಯಶ್ರೇಷ್ಠ ಮತ್ತು ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.

 

Vishwa News 24

Recent Posts

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿ ಆಗ್ರಹ – vishwanews24

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…

11 minutes ago

ಕಾಂಗ್ರೆಸ್ ವಿದ್ಯಾರ್ಥಿಗಳ ಹಿತಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ – vishwanews24

 ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…

18 minutes ago

ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ- vishwanews24

ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ ಉಡುಪಿ: ಪ್ರಶ್ನೆಪತ್ರಿಕೆ…

2 hours ago

ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ – vishwanews24

ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…

3 hours ago

ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ  – vishwanews24

ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ  ಉಡುಪಿ: ಮಂಗಳೂರಿನಿಂದ…

3 hours ago

ಆಳ್ವಾಸ್ ಪ್ರಗತಿ – 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ – vishwanews24

ಆಳ್ವಾಸ್ ಪ್ರಗತಿ - 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ ಉಡುಪಿ: ದೇಶದ ಯುವಜನರ ಉದ್ಯೋಗ…

4 hours ago