Featured

ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಗೆದ್ದ ಟೀಂ ಇಂಡಿಯಾ ;ಭಾರತಕ್ಕೆ ಐತಿಹಾಸಿಕ ಸರಣಿ ಜಯ

ಸಿಡ್ನಿ: ಆತಿಥೇಯ ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಪಂದ್ಯದ ಅಂತಿಮ ದಿನ ಮಳೆಗೆ ಬಲಿಯಾಗುವುದರೊಂದಿಗೆ ಪಂದ್ಯಕ್ಕೆ ಡ್ರಾ ಮುದ್ರೆ ಬಿದ್ದಿದೆ. ಇದರೊಂದಿಗೆ ಸರಣಿಯಲ್ಲಿ 2-1  ಮುನ್ನಡೆ ಸಾಧಿಸಿದ ಭಾರತ ಐತಿಹಾಸಿಕ ಸರಣಿ ಗೆದ್ದು ಬೀಗಿದೆ. ಕೋಹ್ಲಿ ನಾಯಕತ್ವದಲ್ಲಿ ಟೀಂ ಇಂಡಿಯಾ  ಆಸ್ಟ್ರೇಲಿಯಾ ನೆಲದಲ್ಲಿ ಮೊದಲ ಬಾರಿಗೆ ಸರಣಿ ಗೆದ್ದ ಸಾಧನೆ ಮಾಡಿದ್ದಾರೆ.

ನಾಲ್ಕನೇ ದಿನದ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ  6  ರನ್ ಗಳಿಸಿದ್ದ  ಆಸ್ಟ್ರೇಲಿಯಾ ಅಂತಿಮ ದಿನ ಸೋಲು ತಪ್ಪಿಸಾಲು ಹೋರಾಡಬೇಕಿತ್ತು. ಆದರೆ ವರುಣನ ಕೃಪೆ ಪೈನ್ ಬಳಗದ ಮೇಲೆ ಇದ್ದರಿಂದ ಮತ್ತೊಂದು ಸೋಲು ಡ್ರಾಗೆ ಪರಿವರ್ತನೆಯಾಯಿತು.

ಭಾರತ ಮೊದಲ ಇನ್ನಿಂಗ್ಸ್ ನಲ್ಲಿ 7 ವಿಕೆಟ್ ನಷ್ಟಕ್ಕೆ622 ರನ್ ಗಳಿಸಿ ಡಿಕ್ಲರ್ ಮಾಡಿಕೊಂಡಿತ್ತು. ಭಾರತದ ಪರ ಚೇತೇಶ್ವರ ಪೂಜಾರ 193 ರನ್, ರರಿಷಭ್ ಪಂತ್ ಅಜೇಯ159 ರನ್ ಗಳಿಸಿದ್ದರು. ಆಸ್ಟ್ರೇಲಿಯಾ ತಂಡ ಕೇವಲ 300 ರನ್ ಗಳಿಗೆ ಅಲ್ ಔಟ್  ಆಗುವುದರೊಂದಿಗೆ ಫಾಲೋ ಆನ್ ಗೆ ಸಿಲುಕಿತ್ತು. ಆದರೆ ನಾಲ್ಕನೇ ಮತ್ತು ಐದನೇ ದಿನದ ಮಂದ ಬೆಳಕು ಮತ್ತು ಮಳೆ ಆಸ್ಟ್ರೇಲಿಯಾಗೆ ವರವಾಗಿ ಪರಿಣಮಿಸಿತು.

ಸರಣಿಯಲ್ಲಿ ಅದ್ಭುತ ಪ್ರದರ್ಶನ ಬ್ಯಾಟಿಂಗ್  ನೀಡಿದ  ಭಾರತದ ಚೇತೇಶ್ವರ ಪೂಜಾರ ಅರ್ಹವಾಗಿ ಪಂದ್ಯಶ್ರೇಷ್ಠ ಮತ್ತು ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.

 

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

1 hour ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

2 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

2 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

2 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

2 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

3 hours ago