ಸಿಡ್ನಿ: ಆತಿಥೇಯ ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಪಂದ್ಯದ ಅಂತಿಮ ದಿನ ಮಳೆಗೆ ಬಲಿಯಾಗುವುದರೊಂದಿಗೆ ಪಂದ್ಯಕ್ಕೆ ಡ್ರಾ ಮುದ್ರೆ ಬಿದ್ದಿದೆ. ಇದರೊಂದಿಗೆ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದ ಭಾರತ ಐತಿಹಾಸಿಕ ಸರಣಿ ಗೆದ್ದು ಬೀಗಿದೆ. ಕೋಹ್ಲಿ ನಾಯಕತ್ವದಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ನೆಲದಲ್ಲಿ ಮೊದಲ ಬಾರಿಗೆ ಸರಣಿ ಗೆದ್ದ ಸಾಧನೆ ಮಾಡಿದ್ದಾರೆ.
ನಾಲ್ಕನೇ ದಿನದ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 6 ರನ್ ಗಳಿಸಿದ್ದ ಆಸ್ಟ್ರೇಲಿಯಾ ಅಂತಿಮ ದಿನ ಸೋಲು ತಪ್ಪಿಸಾಲು ಹೋರಾಡಬೇಕಿತ್ತು. ಆದರೆ ವರುಣನ ಕೃಪೆ ಪೈನ್ ಬಳಗದ ಮೇಲೆ ಇದ್ದರಿಂದ ಮತ್ತೊಂದು ಸೋಲು ಡ್ರಾಗೆ ಪರಿವರ್ತನೆಯಾಯಿತು.
ಭಾರತ ಮೊದಲ ಇನ್ನಿಂಗ್ಸ್ ನಲ್ಲಿ 7 ವಿಕೆಟ್ ನಷ್ಟಕ್ಕೆ622 ರನ್ ಗಳಿಸಿ ಡಿಕ್ಲರ್ ಮಾಡಿಕೊಂಡಿತ್ತು. ಭಾರತದ ಪರ ಚೇತೇಶ್ವರ ಪೂಜಾರ 193 ರನ್, ರರಿಷಭ್ ಪಂತ್ ಅಜೇಯ159 ರನ್ ಗಳಿಸಿದ್ದರು. ಆಸ್ಟ್ರೇಲಿಯಾ ತಂಡ ಕೇವಲ 300 ರನ್ ಗಳಿಗೆ ಅಲ್ ಔಟ್ ಆಗುವುದರೊಂದಿಗೆ ಫಾಲೋ ಆನ್ ಗೆ ಸಿಲುಕಿತ್ತು. ಆದರೆ ನಾಲ್ಕನೇ ಮತ್ತು ಐದನೇ ದಿನದ ಮಂದ ಬೆಳಕು ಮತ್ತು ಮಳೆ ಆಸ್ಟ್ರೇಲಿಯಾಗೆ ವರವಾಗಿ ಪರಿಣಮಿಸಿತು.
ಸರಣಿಯಲ್ಲಿ ಅದ್ಭುತ ಪ್ರದರ್ಶನ ಬ್ಯಾಟಿಂಗ್ ನೀಡಿದ ಭಾರತದ ಚೇತೇಶ್ವರ ಪೂಜಾರ ಅರ್ಹವಾಗಿ ಪಂದ್ಯಶ್ರೇಷ್ಠ ಮತ್ತು ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…
ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು ಬೆಳ್ತಂಗಡಿ: ಕಳೆದ ತಿಂಗಳು ಮದುವೆಯಾಗಿದ್ದ ನವವಿವಾಹಿತ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ,…
ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮಾ.31 ರಿಂದ ಎ.2 ರವರೆಗೆ ಮುಖ್ಯಪ್ರಾಣ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಟಪಾಡಿ: ಶ್ರೀ ಕ್ಷೇತ್ರ ಶಂಕರಪುರ…
Rain Alert: ಕರಾವಳಿಯಲ್ಲಿ ಎ. 2ರ ವರೆಗೆ ಯಲ್ಲೋ ಅಲರ್ಟ್ ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸಹಿತ ರಾಜ್ಯದ…
ಶೂಟಿಂಗ್ ವೇಳೆ ಸಮುದ್ರದಲ್ಲಿ ಮಗುಚಿದ ದೋಣಿ: ಬಂಗಾಳಿ ಸೀರಿಯಲ್ ನಟ ಸಾವು ಮುಂಬಯಿ: ಬಂಗಾಳಿ ಖ್ಯಾತ ನಟ ರಾಹುಲ್ ಅರುಣೋದಯ್ ಬ್ಯಾನರ್ಜಿ(43)…