ಬಾಗಲಕೋಟೆ: ಅಪ್ಪನ ಕೊಲೆ ಮಾಡಲು ಮಗನೇ ಮೂರು ಲಕ್ಷ ಸುಪಾರಿ ಕೊಟ್ಟ ಪ್ರಕರಣವೊಂದು ಬಾಗಲಕೋಟೆಯಲ್ಲಿ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.
ಚೆನ್ನಪ್ಪ (66) ಕೊಲೆಯಾದ ತಂದೆ. ವಿಕಲಚೇತನನಾಗಿರುವ ಮಗ ಚೆನ್ನಬಸಪ್ಪ ವಿಜಯಪುರ ಜಿಲ್ಲೆ ನಿಡಗುಂದಿ ಮೂಲದ ಮಾಂತೇಶ್ಗೆ ಸುಪಾರಿ ಕೊಟ್ಟು ಕೊಲೆ ಮಾಡಿಸಿದ್ದಾನೆ.
ಆಸ್ತಿಗಾಗಿ ಕೊಲೆ: 32 ಎಕರೆ ಆಸ್ತಿ ಅದರಲ್ಲಿ ವಿಭಾಗ ಮಾಡುವ ವಿಚಾರಕ್ಕೆ ಪದೇ ಪದೇ ಕಲಹ ನಡೆಯುತ್ತಿತ್ತು. ಇದೇ ವಿಚಾರಕ್ಕೆ ಅಪ್ಪನನ್ನು ಕೊಲೆ ಮಾಡಲು ಮಗ ಪ್ಲಾನ್ ಮಾಡಿದ್ದಾನೆ. ಅಂತೆಯೇ ಚೆನ್ನಬಸಪ್ಪ, ಸೊಸೆ ಶಿವಬಸವ್ವ ಹಾಗೂ ಮಗನ ಆಪ್ತ ರಮೇಶ್ ಮನಗೂಳಿ ಸೇರಿ ಕೊಲೆಗೆ ಪ್ಲಾನ್ ಮಾಡಿದ್ದಾರೆ. ಬಳಿಕ ಮಾಂತೇಶ್ ಮರಡಿಮಠ ಎಂಬಾತನಿಗೆ 3 ಲಕ್ಷ ಹಣ ನೀಡಿದ್ದಾರೆ. ಅಂತೆಯೇ ಚೆನ್ನಪ್ಪನನ್ನು ರಾಂಪುರ ಗ್ರಾಮದ ಬಳಿ ಮಚ್ಚಿನಿಂದ ಕೊಚ್ಚಿ ಕಲ್ಲಿನಿಂದ ತಲೆ ಜಜ್ಜಿ ಕೊಲೆ ಮಾಡಲಾಗಿದೆ.
ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗ ಚನ್ನಬಸಪ್ಪ, ಸೊಸೆ ಶಿವಬಸವ್ವ, ಸುಪಾರಿ ಪಡೆದು ಕೊಲೆ ಮಾಡಿದ ಮಾಂತೇಶ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…
ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…
ಉಡುಪಿ : ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…
ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ : ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…