ಚಿಕ್ಕಮಗಳೂರು: ಆಸ್ತಿಗಾಗಿ ಮಗಳೇ ಸಾಕು ತಾಯಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್ಆರ್. ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಬಂಡಿಮಠ ಗ್ರಾಮದಲ್ಲಿ ನಡೆದಿದೆ.
ಮೃತ ತಾಯಿಯನ್ನು 62 ವರ್ಷದ ಕುಸುಮ ಎಂದು ಗುರುತಿಸಲಾಗಿದೆ. 35 ವರ್ಷದ ಸುಧಾ ತನ್ನ ಸಾಕು ತಾಯಿಯನ್ನ ಉಸಿರುಗಟ್ಟಿಸಿ ಕೊಲೆಗೈದ ಪಾಪಿ ಮಗಳು. ತಾಯಿಯನ್ನ ಕೊಲೆಗೈದಿದ್ದ ಮಗಳು ಆರಂಭದಲ್ಲಿ, ರಾತ್ರಿ ಮಲಗಿದ್ದವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರಿಗೆ ಕಥೆ ಕಟ್ಟಿದ್ದಳು. ಆದರೆ, ಪೊಲೀಸರ ತನಿಖೆಯ ಬಳಿಕ ತಾನೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ.
ಮೂಲತಃ ಹಾವೇರಿ ಜಿಲ್ಲೆಯವರಾದ ಕುಸುಮ ಬಹಳ ವರ್ಷಗಳ ಹಿಂದೆಯೇ ಬಾಳೆಹೊನ್ನೂರಿನ ಕಾಫಿ ತೋಟದಲ್ಲಿ ಕೆಲಸ ಮಾಡಿಕೊಂಡು ಇಲ್ಲೇ ವಾಸವಿದ್ದರು. ಮೃತ ಕುಸುಮಾಗೆ ಮಕ್ಕಳಿಲ್ಲದ ಕಾರಣ ತಂಗಿಯ ಮಗುವನ್ನು ತಾನೇ ಸಾಕುತ್ತಿದ್ದಳು. ಹಾವೇರಿಯಲ್ಲಿರುವ ಒಂದೂವರೆ ಎಕರೆ ಜಮೀನು ಹಾಗೂ ಒಂದು ಮನೆ ನನ್ನ ಕೈತಪ್ಪುತ್ತೆ ಎಂದು ಸುಧಾ, ರಾತ್ರಿ ಮಲಗಿದ್ದ ತಾಯಿಗೆ ತಲೆ ದಿಂಬಿನಿಂದ ಮುಖಕ್ಕೆ ಒತ್ತಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ.
ಆರೋಪಿಯನ್ನು ಬಂಧಿಸಿರುವ ಬಾಳೆಹೊನ್ನೂರು ಪೊಲೀಸರು ಆಕೆಯನ್ನ ಜೈಲಗಟ್ಟಿದ್ದಾರೆ. ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…