ನವದೆಹಲಿ: ಅಕ್ರಮ ಆಸ್ತಿ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ರಕ್ತದೊತ್ತಡ, ಹೃದಯ ಸಂಬಂಧ ತೊಂದರೆಯಿಂದ ಬಳಲುತ್ತಿದ್ದ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರನ್ನು ದೆಹಲಿಯ ಆರ್ಎಂಎಲ್ ಆಸ್ಪತ್ರೆಯಿಂದ ತಿಹಾರ್ ಜೈಲಿಗೆ ಕರೆದೊಯ್ಯಲಾಗಿದೆ.
ಡಿ.ಕೆ. ಶಿವಕುಮಾರ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಧೀಶ ಅಜಯ್ ಕುಮಾರ್ ಕುಹಾರ್ ಆದೇಶ ನೀಡಿದ್ದರು. ಆದರೆ ತೀವ್ರ ರಕ್ತದೊತ್ತಡ ಹಾಗೂ ಹೃದಯ ಬೇನೆಯಿಂದ ಬಳಲುತ್ತಿದ್ದ ಡಿಕೆಶಿ ಅವರನ್ನು ದೆಹಲಿಯ ಡಾ. ರಾಮಮನೋಹರ ಲೋಹಿಯಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ ಡಿ.ಕೆ. ಶಿವಕುಮಾರ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ವರದಿ ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ತಿಹಾರ್ ಜೈಲಿಗೆ ಕರೆದೊಯ್ದಿದ್ದಾರೆ.
ಮಂಗಳವಾರದಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ಡಾ. ರಾಮಮನೋಹರ ಲೋಹಿಯಾ ಆಸ್ಪತ್ರೆ ವೈದ್ಯಾಧಿಕಾರಿಗಳು ಹಾಗೂ ತಿಹಾರ್ ಜೈಲು ಉಸ್ತುವಾರಿಯನ್ನೂ ಹೊಂದಿರುವ ದೆಹಲಿ ಪೊಲೀಸರ ಥರ್ಡ್ ಬಟಾಲಿಯನ್ ಅಧಿಕಾರಿಗಳಿಗೆ ಡಿ.ಕೆ. ಶಿವಕುಮಾರ್ ಅವರ ಆರೋಗ್ಯದ ಕಡೆ ಗಮನ ಹರಿಸಬೇಕೆಂದು ನ್ಯಾಯಾಧೀಶ ಅಜಯ್ ಕುಮಾರ್ ಕುಹರ್ ಸೂಚನೆ ನೀಡಿದ್ದರು. ಡಿ.ಕೆ. ಶಿವಕುಮಾರ್ ಅವರಿಗೆ ರಕ್ತದ ಒತ್ತಡ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಡಾ. ರಾಮಮನೋಹರ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ಮುಂದುವರೆಸಲಾಗಿತ್ತು. ಆದರೆ ಇಂದು ಬೆಳಿಗ್ಗೆ ಆರೋಗ್ಯ ತಪಾಸಣೆ ಬಳಿಕ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ವರದಿ ನೀಡಿರುವ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಯಿಂದ ಜೈಲಿಗೆ ಶಿಫ್ಟ್ ಮಾಡಲಾಗಿದೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…