ಮಂಗಳೂರು: ರಾಜ್ಯದ ಎಲ್ಲ ಆಸ್ಪತ್ರೆ ಹಾಗೂ ಶಾಲೆಗಳ ಆವರಣದಲ್ಲಿರುವ ಕ್ಯಾಂಟೀನ್ಗಳಲ್ಲಿ ಆರೋಗ್ಯಕರ ಆಹಾರಗಳನ್ನು ಮಾತ್ರ ಕನಿಷ್ಠ ದರದಲ್ಲಿ ಮಾರಾಟ ಮಾಡಬೇಕು. ಇದನ್ನು ಹೊರತುಪಡಿಸಿ ಯಾವುದೇ ರೀತಿಯ ಜಂಕ್ ಫುಡ್ಗಳನ್ನು ಮಾರಾಟ ಮಾಡುವಂತಿಲ್ಲ. ರಾಜ್ಯಾದ್ಯಂತ ಈ ನಿಯಮ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಹೇಳಿದರು.
ಮಂಗಳೂರಿನ ವೆನ್ಲಾಕ್ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಕುಂದುಕೊರತೆ ಹಾಗೂ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಲ್ಲ ಆಸ್ಪತ್ರೆಗಳ ಹಾಗೂ ಶಾಲೆಗಳ ಕ್ಯಾಂಟೀನ್ಗಳಲ್ಲಿ ಜಂಕ್ ಆಹಾರ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದೆ. ಇದಕ್ಕೆ ವಿಪರೀತವಾಗಿ ಅವಲಂಬನೆಯಾಗಿರುವುದು ಕೂಡ ಸಾಕಷ್ಟು ರೋಗಗಳಿಗೆ ಆಹ್ವಾನ ನೀಡಿದಂತಾಗುತ್ತದೆ. ಕ್ಯಾನ್ಸರ್, ಮೂತ್ರಪಿಂಡ ಮೊದಲಾದ ಸಾಂಕ್ರಾಮಿಕವಲ್ಲದ ಕಾಯಿಲೆಗಳು ಹೆಚ್ಚುತ್ತಿವೆ. ಇದನ್ನು ಶಾಲಾ ಅಥವಾ ಆಸ್ಪತ್ರೆ ಹಂತದಲ್ಲೇ ನಿಯಂತ್ರಿಸಿದರೆ, ಕನಿಷ್ಠ ದೇಹದ ಆರೋಗ್ಯವನ್ನೂದರೂ ಕಾಪಾಡಲು ಸಾಧ್ಯವಿದೆ. ಅದಕ್ಕಾಗಿ ಆಸ್ಪತ್ರೆ ಮಾತ್ರವಲ್ಲ ಒಂದರಿಂದ 10ನೇ ತರಗತಿವರೆಗೆ ಇರುವ ಶಾಲೆಗಳ ಸುತ್ತಮುತ್ತ ಕೂಡ ಜಂಕ್ ಫುಡ್ ಮಾರಾಟಕ್ಕೆ ಅವಕಾಶ ನೀಡದಂತೆ ನಿಯಮ ಜಾರಿಗೊಳಿಸಲು ಉದ್ದೇಶಿಸಲಾಗಿದೆ ಎಂದರು.
ಉಡುಪಿ : ಪರ್ಕಳದಲ್ಲಿ ಮತ್ತೆ ಬೀಡಾಡಿ ಗೋವುಗಳಿಗೆ ಚರ್ಮ ಗಂಟು ರೋಗದ ಭೀತಿ; ಮುನ್ನೆಚ್ಚರಿಕೆ ಕ್ರಮಕ್ಕೆ ಒತ್ತಾಯ ಉಡುಪಿ: ಪರ್ಕಳದಲ್ಲಿ…
ಜಲಪಾತಗಳಲ್ಲಿ ಪ್ರವಾಸಿಗರ ಹುಚ್ಚಾಟ ; ಅಪಾಯಕಾರಿ ಸಾಹಸ , ಸೆಲ್ಫಿ, ಈಜಾಟ : ಸ್ಥಳೀಯರ ಆಕ್ರೋಶ ಮಡಿಕೇರಿ: ಮಳೆಗಾಲದಲ್ಲಿ ಮೈದುಂಬಿ…
ಗೃಹಲಕ್ಷ್ಮಿ ಪರಿಷ್ಕರಣೆ : ಬಯೋಮೆಟ್ರಿಕ್, ಮುಖಚಹರೆ ಗುರುತು ಕಡ್ಡಾಯ 20 ಕೋಟಿ ರೂ. ವೆಚ್ಚದಲ್ಲಿ ಫಲಾನುಭವಿಗಳ ಮರು ಪರಿಶೀಲನೆ :…
ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು…
ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…
ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…