ಹುಬ್ಬಳ್ಳಿ : ‘ಭಾರತೀಯ ಜನತಾ ಪಕ್ಷಕ್ಕೆ ಮರಳಿ ಸೇರ್ಪಡೆಗೆ ಆಹ್ವಾನ ನೀಡಿದರೆ ನಾನು ಸೇರ್ಪಡೆಗೆ ಸಿದ್ಧನಿದ್ದೇನೆ’ ಎಂದು ಮಾಜಿ ಶಾಸಕ ರಘುಪತಿ ಭಟ್ ಇಂದಿಲ್ಲಿ ಸ್ಪಷ್ಟನೆ ನೀಡಿದ್ದಾರೆ.
ಮಂಗಳವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪನರನ್ನ ಮರಳಿ ಬಿಜೆಪಿಗೆ ಸೇರ್ಪಡೆಗೆ ಚಿಂತನೆ ನಡೆದಿದ್ದು, ನನ್ನನ್ನು ಕರೆದರೂ ಹೋಗುವೆ. ನನಗೆ ಆ ಪಕ್ಷದೊಂದಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದರು.
ನಾನು ಬಿಜೆಪಿಯ ಸಾಮಾನ್ಯ ಕಾರ್ಯಕರ್ತ ಆಗಿದ್ದೇನೆ. ಚುನಾವಣೆಯಲ್ಲಿ ಸೋಲಿಲಿ, ಬಿಡಲಿ. ಬಿಜೆಪಿ ಕಾರ್ಯಕರ್ತನಾಗಿ ಇರುವೆ ಎಂದು ಆವಾಗಲೇ ಹೇಳಿದ್ದೆ. ಈಗಲೂ ಹಾಗೇ ಇದ್ದೇನೆ ಎಂದು ಅವರು ತಿಳಿಸಿದರು.
ನಾನು ರಾಷ್ಟ್ರೀಯ ವಿಚಾರ ಇರಿಸಿಕೊಂಡು ರಾಜಕಾರಣ ಮಾಡಿದವನು. ನನಗೆ ಪಕ್ಷದಿಂದ ಉಚ್ಚಾಟನೆ ಆಗಿದ್ದು, ಮರಳಿ ಕರೆದರೆ ಖಂಡಿತವಾಗಿಯೂ ಹೋಗುವೆ. ಇದೀಗ ನಾನು ರಾಜಕಾರಣಕ್ಕೆ ಸ್ವಲ್ಪ ವಿರಾಮ ಹೇಳಿ ಧಾರ್ಮಿಕ ಕಾರ್ಯಕ್ರಮ ಮಾಡಿಕೊಂಡು ಇದ್ದೇನೆ. ಹೆಚ್ಚು ನೆಮ್ಮದಿಯಲ್ಲಿ ಇದ್ದೇನೆ ಎಂದು ಹೇಳಿದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…