ಹುಬ್ಬಳ್ಳಿ : ‘ಭಾರತೀಯ ಜನತಾ ಪಕ್ಷಕ್ಕೆ ಮರಳಿ ಸೇರ್ಪಡೆಗೆ ಆಹ್ವಾನ ನೀಡಿದರೆ ನಾನು ಸೇರ್ಪಡೆಗೆ ಸಿದ್ಧನಿದ್ದೇನೆ’ ಎಂದು ಮಾಜಿ ಶಾಸಕ ರಘುಪತಿ ಭಟ್ ಇಂದಿಲ್ಲಿ ಸ್ಪಷ್ಟನೆ ನೀಡಿದ್ದಾರೆ.
ಮಂಗಳವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪನರನ್ನ ಮರಳಿ ಬಿಜೆಪಿಗೆ ಸೇರ್ಪಡೆಗೆ ಚಿಂತನೆ ನಡೆದಿದ್ದು, ನನ್ನನ್ನು ಕರೆದರೂ ಹೋಗುವೆ. ನನಗೆ ಆ ಪಕ್ಷದೊಂದಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದರು.
ನಾನು ಬಿಜೆಪಿಯ ಸಾಮಾನ್ಯ ಕಾರ್ಯಕರ್ತ ಆಗಿದ್ದೇನೆ. ಚುನಾವಣೆಯಲ್ಲಿ ಸೋಲಿಲಿ, ಬಿಡಲಿ. ಬಿಜೆಪಿ ಕಾರ್ಯಕರ್ತನಾಗಿ ಇರುವೆ ಎಂದು ಆವಾಗಲೇ ಹೇಳಿದ್ದೆ. ಈಗಲೂ ಹಾಗೇ ಇದ್ದೇನೆ ಎಂದು ಅವರು ತಿಳಿಸಿದರು.
ನಾನು ರಾಷ್ಟ್ರೀಯ ವಿಚಾರ ಇರಿಸಿಕೊಂಡು ರಾಜಕಾರಣ ಮಾಡಿದವನು. ನನಗೆ ಪಕ್ಷದಿಂದ ಉಚ್ಚಾಟನೆ ಆಗಿದ್ದು, ಮರಳಿ ಕರೆದರೆ ಖಂಡಿತವಾಗಿಯೂ ಹೋಗುವೆ. ಇದೀಗ ನಾನು ರಾಜಕಾರಣಕ್ಕೆ ಸ್ವಲ್ಪ ವಿರಾಮ ಹೇಳಿ ಧಾರ್ಮಿಕ ಕಾರ್ಯಕ್ರಮ ಮಾಡಿಕೊಂಡು ಇದ್ದೇನೆ. ಹೆಚ್ಚು ನೆಮ್ಮದಿಯಲ್ಲಿ ಇದ್ದೇನೆ ಎಂದು ಹೇಳಿದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…