Featured

ಆ. 10 ರಿಂದ 16 ರವರೆಗೆ ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ – Vishwanews24

ಆ. 10 ರಿಂದ 16 ರವರೆಗೆ ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ

ರಾಯಚೂರು: ಪ್ರತಿವರ್ಷ ಶ್ರಾವಣಮಾಸದಲ್ಲಿ ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನೆ ಮಹೋತ್ಸವವು ಸಂಭ್ರಮ, ಸಡಗರದಿಂದ ನೆರವೇರುತ್ತಾ ಬಂದಿದೆ. ಈ ಸಲ ಇದೇ ಆಗಸ್ಟ್‌ 10 ರಿಂದ 16 ರವರೆಗೂ ರಾಯರ ಆರಾಧನಾ ಮಹೋತ್ಸವವನ್ನು ಸಂಭ್ರಮದಿಂದ ನೆರವೇರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಮಠದ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರು ಹೇಳಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡೀ ಮನುಕುಲವನ್ನು ಕಾಡಿದ ಕೊರೊನಾ ಮಹಾಮಾರಿಯಿಂದಾಗಿ ಕಳೆದ ಎರಡು ವರ್ಷ ಸರಳವಾಗಿ ರಾಯರ ಆರಾಧನೆ ನಡೆದಿತ್ತು. ಈ ಸಲ ಕೋವಿಡ್‌ ಪೂರ್ವದ ಸಂಭ್ರಮ ಮರುಕಳಿಸಲಿದ್ದು, ಬೇರೆ ಬೇರೆ ದೇಶ ಗಳಿಂದ ಮತ್ತು ರಾಜ್ಯದ ಮೂಲೆ ಮೂಲೆಗಳಿಂದಲೂ ಅಪಾರ ಪ್ರಮಾಣದ ಭಕ್ತರು ಭಾಗ ವಹಿಸುವ ನಿರೀಕ್ಷೆ ಇದೆ ಎಂದು ತಿಳಿ ಸಿದರು. ಭಕ್ತರು ಪುಣ್ಯಸ್ನಾನ ಮಾಡುವುದಕ್ಕೆ ತುಂಗಭದ್ರಾ ನದಿಯಲ್ಲಿ ನೀರಿದೆ. ಜಲಾಶಯದಿಂದ ನಿರಂತರ ನೀರು ಹರಿದುಬರುತ್ತಿದ್ದು, ಪ್ರವಾಹ ಭೀತಿಯಿಲ್ಲ. ಭಕ್ತರೆಲ್ಲರೂ ನಿರ್ಭಿತಿಯಿಂದ ಆರಾಧನೆಯಲ್ಲಿ ಪಾಲ್ಗೊಳ್ಳಬಹುದು. ನದಿ ಪಕ್ಕದಲ್ಲಿ ಭಕ್ತರು ಸ್ನಾನ ಮಾಡುವುದಕ್ಕಾಗಿ 100 ನೀರಿನ ಸಿಂಚನಗಳನ್ನು ಅಳವಡಿಸಲಾಗಿದೆ. ಭಕ್ತರು ನದಿಯಲ್ಲಿ ಇಳಿಯದಂತೆ ಮುನ್ನಚ್ಚರಿಕೆ ವಹಿಸಲಾಗುತ್ತಿದೆ ಎಂದು ಹೇಳಿದರು. ಪ್ರತಿದಿನ ಯೋಗೀಂದ್ರ ಸಭಾಮಂಟಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ರಾಯರ ಅನುಗ್ರಹ ಪ್ರಶಸ್ತಿಯನ್ನು ಆಗಸ್ಟ್‌ 12 ರಂದು ಪ್ರದಾನ ಮಾಡಲಾಗುವುದು. ಗ್ರಂಥಗಳ ಲೋಕಾರ್ಪಣೆ ಕೂಡಾ ನಡೆಯಲಿದೆ ಎಂದು ತಿಳಿಸಿದರು. ಪ್ರತಿವರ್ಷದಂತೆ ತಿರುಪತಿ ಶ್ರೀನಿವಾಸ ದೇವರ ಶೇಷವಸ್ತ್ರ ಸಮರ್ಪಣೆ ಮಾಡಲಾಗುವುದು. ಆಗಸ್ಟ್‌ 14 ಉತ್ತಾರಾರಾಧನೆ ದಿನದಂದು ವಸಂತೋತ್ಸವ, ಮಹಾರಥೋತ್ಸವ ನೆರವೇರಲಿದೆ. ರಥೋತ್ಸವದ ಉದ್ದಕ್ಕೂ ವಾದ್ಯಮೇಳ ಹಾಗೂ ಕಲಾ ತಂಡಗಳು ಬಾಗವಹಿಸಲಿವೆ. ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಟಿಯನ್ನು ಭಕ್ತರು ಮಾಡುತ್ತಿದ್ದಾರೆ ಎಂದು ಹೇಳಿದರು.

ರಾಯರ ದರ್ಶನಕ್ಕೆ ಬರುವ ಭಕ್ತರಿಗೆ ವಸತಿ, ಪ್ರಸಾದ, ಶುದ್ಧ ಕುಡಿಯುವ ನೀರು ವ್ಯವಸ್ಥೆ ಮಾಡಲಾಗುತ್ತಿದೆ. ಮಂತ್ರಾಲಯದಲ್ಲಿ ವಿದ್ಯುತ್ ದೀಪಗಳಿಂದ ಬೀದಿಗಳ ಅಲಂಕಾರ ಹಾಗೂ ಸಂಚಾರ‌ ನಿಯಂತ್ರಣ ‌ವ್ಯವಸ್ಥೆ ಮಾಡಲಾಗುತ್ತಿದೆ. ಸರ್ಕಾರದ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಒಂದು ತಪಾಸಣೆ ಕೇಂದ್ರ ಮತ್ತು ಮಠದ ಆಸ್ಪತ್ರೆಯು 24/7 ಸೇವೆ ಸಲ್ಲಿಸುವ ‌ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು. ಆರಾಧನೆ ಸಂದರ್ಭದಲ್ಲಿ ಹೆಚ್ಚುವರಿ ಬಸ್ ಸೌಲಭ್ಯಕ್ಕಾಗಿ ಆಂಧ್ರಪ್ರದೇಶ ಮತ್ತು ಕರ್ನಾಟಕ ಸರ್ಕಾರಗಳೊಂದಿಗೆ ಮಾತನಾಡಲಾಗಿದೆ ಎಂದರು. ಮಠದ ಆಡಳಿತದ ವ್ಯವಸ್ಥಾಪಕರಾದ ಎಸ್‌.ಕೆ.ಶ್ರೀನಿವಾಸ್‌ ಆಚಾರ್‌, ವೆಂಕಟೇಶ ಜೋಷಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

Vishwa News 24

Recent Posts

ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು -vishwanews24

ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…

16 hours ago

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ -vishwanews24

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…

19 hours ago

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು -vishwanews24

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…

21 hours ago

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು -vishwanews24

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…

22 hours ago

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ -vishwanews24

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…

22 hours ago

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ -vishwanews24

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…

22 hours ago