ಮಂಗಳೂರು: ಆ.16ರಿಂದ ಪಿಲಿಕುಳ ಮೃಗಾಲಯ ಸಾರ್ವಜನಿಕ ವೀಕ್ಷಣೆಗೆ ಮುಕ್ತವಾಗಿದ್ದು, ಮುಂಜಾನೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಪಿಲಿಕುಳ ಜೈವಿಕ ಉದ್ಯಾನವನದ ನಿರ್ದೇಶಕ ತಿಳಿಸಿದ್ದಾರೆ.
ಪ್ರತೀ ಸೋಮವಾರ ಮೃಗಾಲಯದ ನಿರ್ವಹಣೆ ಕಾರ್ಯ ನಡೆಯಬೇಕಾಗಿರುವುದರಿಂದ ಸಾರ್ವಜನಿಕರಿಗೆ ವೀಕ್ಷಣೆಗೆ ಅವಕಾಶವಿಲ್ಲ. ಇನ್ನು ಮೃಗಾಲಯಕ್ಕೆ ಬರುವ ಸಂದರ್ಭ ಕೊರೊನಾ ಬಗ್ಗೆ ಜಿಲ್ಲಾಡಳಿತ ನೀಡುತ್ತಿರುವ ಆದೇಶಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದ್ದಾರೆ.
ಮೃಗಾಲಯಕ್ಕೆ ಬರುವ ವೇಳೆ ಸಂದರ್ಶಕರು ಮಾಸ್ಕ್ ಅನ್ನು ಕಡ್ಡಾಯವಾಗಿ ಸರಿಯಾಗಿ ಧರಿಸಬೇಕು. ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ಯಾನಿಂಗ್ ಪರೀಕ್ಷೆ ಮಾಡಲಾಗುವುದು. ಅಲ್ಲದೇ, ಕೈಗಳನ್ನು ಸ್ಯಾನಿಟೈಸ್ ಮಾಡಲಾಗುವುದು. ಮೃಗಾಲಯದ ಒಳಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಮೃಗಾಲಯದಲ್ಲಿ 76 ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗುತ್ತಿದೆ. ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಕೋರಿದ್ದಾರೆ.
ಪ್ರವೇಶ ದ್ವಾರದ ಬೋಕ್ಸ್ ಆಫೀಸ್ನಲ್ಲೇ ಟಿಕೇಟ್ ಅನ್ನು ನೀಡಲಾಗುವುದು. ಮೃಗಾಲಯದ ಎದುರುಗಡೆ ನಿಗದಿಪಡಿಸಿದ ಪ್ರದೇಶದಲ್ಲಿ ವಾಹನಗಳನ್ನು ನಿಲುಗಡೆ ಮಾಡಲು ಅನುಮತಿ ನೀಡಲಾಗಿದೆ ಎಂದು ಪಿಲಿಕುಳ ಜೈವಿಕ ಉದ್ಯಾನವನದ ನಿರ್ದೇಶಕ ಹೆಚ್.ಜೆ.ಭಂಡಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊರೊನಾ ಸೋಂಕು- ಮಳೆಗಾಲದ ಹಿನ್ನೆಲೆ ಪಿಲಿಕುಳ ನಿಸರ್ಗಧಾಮ ಬಂದ್ ಮಾಡಲಾಗಿತ್ತು. ಇದೀಗ ಜಿಲ್ಲಾಡಳಿತ ಕೊರೊನಾ ಬಗ್ಗೆ ನೀಡುತ್ತಿರುವ ಆದೇಶಗಳನ್ನು ಕಡ್ಡಾಯವಾಗಿ ಪಾಲಿಸುವುದರೊಂದಿಗೆ ಮೃಗಾಲಯ ಸಾರ್ವಜನಿಕ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.
ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್ಮಾಲ್ ಆಗಿಲ್ಲ: ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…
ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…
ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…
ಆರ್ ಎಸ್ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…
ಪಾಸ್ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ ನವದೆಹಲಿ: 14 ವರ್ಷಗಳಲ್ಲಿ ಇದೇ ಮೊದಲ…
ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು ಬೆಳ್ತಂಗಡಿ: ತಾಲೂಕಿನ ಸುಲ್ಕೇರಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ…