ಮಂಗಳೂರು: ಆ.16ರಿಂದ ಪಿಲಿಕುಳ ಮೃಗಾಲಯ ಸಾರ್ವಜನಿಕ ವೀಕ್ಷಣೆಗೆ ಮುಕ್ತವಾಗಿದ್ದು, ಮುಂಜಾನೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಪಿಲಿಕುಳ ಜೈವಿಕ ಉದ್ಯಾನವನದ ನಿರ್ದೇಶಕ ತಿಳಿಸಿದ್ದಾರೆ.
ಪ್ರತೀ ಸೋಮವಾರ ಮೃಗಾಲಯದ ನಿರ್ವಹಣೆ ಕಾರ್ಯ ನಡೆಯಬೇಕಾಗಿರುವುದರಿಂದ ಸಾರ್ವಜನಿಕರಿಗೆ ವೀಕ್ಷಣೆಗೆ ಅವಕಾಶವಿಲ್ಲ. ಇನ್ನು ಮೃಗಾಲಯಕ್ಕೆ ಬರುವ ಸಂದರ್ಭ ಕೊರೊನಾ ಬಗ್ಗೆ ಜಿಲ್ಲಾಡಳಿತ ನೀಡುತ್ತಿರುವ ಆದೇಶಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದ್ದಾರೆ.
ಮೃಗಾಲಯಕ್ಕೆ ಬರುವ ವೇಳೆ ಸಂದರ್ಶಕರು ಮಾಸ್ಕ್ ಅನ್ನು ಕಡ್ಡಾಯವಾಗಿ ಸರಿಯಾಗಿ ಧರಿಸಬೇಕು. ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ಯಾನಿಂಗ್ ಪರೀಕ್ಷೆ ಮಾಡಲಾಗುವುದು. ಅಲ್ಲದೇ, ಕೈಗಳನ್ನು ಸ್ಯಾನಿಟೈಸ್ ಮಾಡಲಾಗುವುದು. ಮೃಗಾಲಯದ ಒಳಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಮೃಗಾಲಯದಲ್ಲಿ 76 ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗುತ್ತಿದೆ. ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಕೋರಿದ್ದಾರೆ.
ಪ್ರವೇಶ ದ್ವಾರದ ಬೋಕ್ಸ್ ಆಫೀಸ್ನಲ್ಲೇ ಟಿಕೇಟ್ ಅನ್ನು ನೀಡಲಾಗುವುದು. ಮೃಗಾಲಯದ ಎದುರುಗಡೆ ನಿಗದಿಪಡಿಸಿದ ಪ್ರದೇಶದಲ್ಲಿ ವಾಹನಗಳನ್ನು ನಿಲುಗಡೆ ಮಾಡಲು ಅನುಮತಿ ನೀಡಲಾಗಿದೆ ಎಂದು ಪಿಲಿಕುಳ ಜೈವಿಕ ಉದ್ಯಾನವನದ ನಿರ್ದೇಶಕ ಹೆಚ್.ಜೆ.ಭಂಡಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊರೊನಾ ಸೋಂಕು- ಮಳೆಗಾಲದ ಹಿನ್ನೆಲೆ ಪಿಲಿಕುಳ ನಿಸರ್ಗಧಾಮ ಬಂದ್ ಮಾಡಲಾಗಿತ್ತು. ಇದೀಗ ಜಿಲ್ಲಾಡಳಿತ ಕೊರೊನಾ ಬಗ್ಗೆ ನೀಡುತ್ತಿರುವ ಆದೇಶಗಳನ್ನು ಕಡ್ಡಾಯವಾಗಿ ಪಾಲಿಸುವುದರೊಂದಿಗೆ ಮೃಗಾಲಯ ಸಾರ್ವಜನಿಕ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…