Featured

ಆ. 25 ರಂದು ಪಡುಬಿದ್ರಿ ಬಂಟರ ಸಂಘದಲ್ಲಿ ವೃತ್ತಿ ಅಭಿವೃದ್ಧಿ ಮತ್ತು ಉದ್ಯಮಶೀಲತಾ ನಾವೀನ್ಯತೆ ತರಬೇತಿ – vishwanews24

ಆ. 25 ರಂದು ಪಡುಬಿದ್ರಿ ಬಂಟರ ಸಂಘದಲ್ಲಿ ವೃತ್ತಿ ಅಭಿವೃದ್ಧಿ ಮತ್ತು ಉದ್ಯಮಶೀಲತಾ ನಾವೀನ್ಯತೆ ತರಬೇತಿ

ಪಡುಬಿದ್ರಿ ಬಂಟರ ಸಂಘ, ಉಡುಪಿ ಗ್ರಾಮೀಣ ಬಂಟರ ಸಂಘ ಚಾರಿಟೇಬಲ್ ಟ್ರಸ್ಟ್, ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ಜಂಟಿ ಸಹಯೋಗದ ಕಾರ್ಯಕ್ರಮ

ಪಡುಬಿದ್ರಿ : ಪಡುಬಿದ್ರಿ ಬಂಟರ ಸಂಘ ಮತ್ತು ಸ್ಕಿಲ್ ಡೆವಲಪ್ ಮೆಂಟ್ ಸೆಂಟರ್, ಉಡುಪಿ ಗ್ರಾಮೀಣ ಬಂಟರ ಸಂಘ ದ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ಆ, 25 ರಂದು ಪಡುಬಿದ್ರಿ ಬಂಟರ ಸಂಘದ ಆಶಾ ಪ್ರಕಾಶ್ ಶೆಟ್ಟಿ ಸಭಾಭವನದಲ್ಲಿ ಯುವಕರಿಗೆ ಮತ್ತು ಮಹಿಳೆಯರಿಗೆ ಒಂದು ದಿನದ ” ವೃತ್ತಿ ಅಭಿವೃದ್ಧಿ ಮತ್ತು ಉದ್ಯಮಶೀಲತಾ ನಾವೀನ್ಯತೆ ತರಬೇತಿ ಕಾರ್ಯಕ್ರಮ” ನಡೆಯಲಿದೆ ಎಂದು ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ತಿಳಿಸಿದರು.

ಪಡುಬಿದ್ರಿ ಬಂಟರ ಸಂಘದಲ್ಲಿ ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಯುವಕರಿಗೆ ಮತ್ತು ಮಹಿಳೆಯರ ಸಬಲೀಕರಣಕ್ಕೆ ಪೂರಕವಾಗಿ ಮುಕ್ತವಾಗಿ ನಡೆಯಲಿರುವ ಕಾರ್ಯಕ್ರಮವನ್ನು ಎಂ. ಆರ್. ಜಿ. ಗ್ರೂಪ್ ನ ಛೇರ್ಮನ್ ಡಾ| ಕೆ. ಪ್ರಕಾಶ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದರು.

ಉಡುಪಿ ಗ್ರಾಮೀಣ ಬಂಟರ ಸಂಘ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಅಶೋಕ ಕುಮಾರ ಶೆಟ್ಟಿ, ಪಡುಬಿದ್ರಿ ಬಂಟರ ಸಂಘ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಶಶಿಧರ್ ಶೆಟ್ಟಿ, ಪಡುಬಿದ್ರಿ ಬಂಟರ ಸಂಘದ ಮಾಜಿ ಅಧ್ಯಕ್ಷರಾದ ರವೀಂದ್ರನಾಥ್ ಜಿ‌ ಹೆಗ್ಡೆ, ಸುರೇಶ ಶೆಟ್ಟಿ, ಸಾಂತೂರ್ ಭಾಸ್ಕರ್ ಶೆಟ್ಟಿ, ನವೀನ್ ಚಂದ್ರ ಜೆ. ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

ಉಡುಪಿ ಗ್ರಾಮೀಣ ಬಂಟರ ಸಂಘ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಮಾತನಾಡಿ, ಉದ್ಘಾಟನಾ ಸಮಾರಂಭದ ಬಳಿಕ ಉದ್ಯಮಿ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ಭಾಗವಹಿಸುವ ಅಭ್ಯರ್ಥಿಗಳಿಗೆ ಪ್ರೇರಣಾತ್ಮಕ ಮಾತುಗಳೊಂದಿಗೆ ತನ್ನ ಕಷ್ಟದ ದಿನಗಳು, ತನ್ನ ಉದ್ದಿಮೆ ಮಾಡುವ ಸಂದರ್ಭದಲ್ಲಿ ಬಂದಿರುವ ವಿವಿಧ ಸವಾಲುಗಳು, ಅವುಗಳನ್ನು ಎದುರಿಸಿ ಮುಂದೆ ಯಶಸ್ವಿಯಾಗಿ ಸಾಗಿ ಈಗ ಯಶಸ್ವಿ ಉದ್ಯಮಿಯಾಗಿ ಸಾಗಿ ಬಂದ ರೀತಿಯ ಬಗ್ಗೆ ವಿವರಿಸಿ ಸ್ವ – ಉದ್ಯೋಗ ಮಾಡಲು ಪ್ರೇರಣೆ ಕೊಡಲಿದ್ದಾರೆ.

ಪ್ರೊ| ದಿವ್ಯಾರಾಣಿ ಪ್ರದೀಪ್, ಮಹಿಳಾ ಸಬಲೀಕರಣ ಮತ್ತು ಮಹಿಳೆರು ಯಾವ ತರಹದ ಉದ್ಯಮದ ಮೂಲಕ ಬೆಳೆಯ ಬಹುದು, ಮಹಿಳಾ ಯುವ ಉದ್ಯಮಿ ಮೈತ್ರಿ ಮಲ್ಲಿ ಮಂಗಳೂರು, ಯಶಸ್ವಿ ಉದ್ಯಮಿಯಾಗಲು ಪ್ರಯತ್ನ ಪಡುವ ಬಗ್ಗೆ ಮಾಹಿತಿ ನೀಡಲಿದ್ದಾರೆ. ಡಾ. ಸಿ. ಕೆ.ಮಂಜುನಾಥ್, ಡಾ. ಶುಭ ಮಾಹೆ, ಪ್ರವೀಣ್ ಶೆಟ್ಟಿ ಎಂ. ಐ. ಟಿ, ಡಾ. ಸುಧೀರಾಜ್, ಲೀಡ್ ಬ್ಯಾಂಕ್ ಡಿವಿಷನಲ್ ಮ್ಯಾನೇಜರ್ ಹರೀಶ್ ಕುಮಾರ್ ಅವರು ನಾಯಕತ್ವ, ಸಂವಹನ‌ ಕಲೆ, ಇಂಟರ್ ವ್ಯೂ ಸಂದರ್ಶನಕ್ಕೆ ತಯಾರಿ, ಬ್ಯಾಂಕ್ ಗಳಿಂದ ಉದ್ಯಮಕ್ಕೆ ಸಿಗುವ ಸಹಾಯ ಮುಂತಾದ ವಿಷಯಗಳ ಬಗ್ಗೆ ತರಬೇತಿ ನೀಡಲಾಗುವುದು. ಭಾಗವಹಿಸಿದ ಅಭ್ಯರ್ಥಿ ಗಳಿಗೆ ಸ್ಕಿಲ್ ಡೆವಲಪ್ಟೆಂಟ್ ಸೆಂಟರ್ ವತಿಯಿಂದ ಸರ್ಟಿಫಿಕೇಟ್ ನೀಡಲಾಗುವುದು ಎಂದರು.

ಪಡುಬಿದ್ರಿ ಬಂಟರ ಸಂಘದ ಸಿರಿಮುಡಿ ದತ್ತಿನಿಧಿ ಸ್ಥಾಪಕಾಧ್ಯಕ್ಷ ಭಾಸ್ಕರ್ ಶೆಟ್ಟಿ ಸಾಂತೂರು, ಬಂಟರ ಸಂಘದ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಡುಹಿತ್ಲು, ಕೋಶಾಧಿಕಾರಿ ರವಿ ಶೆಟ್ಟಿ ಗುಂಡ್ಲಾಡಿ, ಯುವ ಬಂಟರ ಸಂಘದ ಅಧ್ಯಕ್ಷ ನವೀನ್‌ ಶೆಟ್ಟಿ, ಮಹಿಳಾ ಬಂಟರ ಸಂಘದ ಅಧ್ಯಕ್ಷೆ ಜ್ಯೋತಿ ಶೆಟ್ಟಿ, ಕಾರ್ಯಕ್ರಮ ಸಂಯೋಜಕಿ ಸಂತೃಪ್ತಿ ಎಂ. ಶೆಟ್ಟಿ, ಉಡುಪಿ ಗ್ರಾಮೀಣ ಬಂಟರ ಸಂಘದ ಕಾರ್ಯದರ್ಶಿ ವಿಜೀತ್ ಶೆಟ್ಟಿ ಉಪಸ್ಥಿತರಿದ್ದರು.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago