Featured

ಆ. 3 ರಂದು ಸಿದ್ದರಾಮೋತ್ಸವ ಕಾರ್ಯಕ್ರಮ : ಹುಬ್ಬಳ್ಳಿಗೆ ಆಗಮಿಸಲಿದ್ದಾರೆ ರಾಹುಲ್ ಗಾಂಧಿ – Vishwanews24

ಆ. 3 ರಂದು ಸಿದ್ದರಾಮೋತ್ಸವ ಕಾರ್ಯಕ್ರಮ:  ಹುಬ್ಬಳ್ಳಿಗೆ ಆಗಮಿಸಲಿದ್ದಾರೆ ರಾಹುಲ್ ಗಾಂಧಿ

ಬೆಂಗಳೂರು: ಆಗಸ್ಟ್‌ 3 ಕ್ಕೆ ದಾವಣಗೆರೆಯಲ್ಲಿ ನಡೆಯಲಿರುವ ಸಿದ್ದರಾಮಯ್ಯ 75 ಅಮೃತ ಮಹೋತ್ಸವಕ್ಕೆ ಅಂತಿಮ ಕ್ಷಣದ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಹರಿಹರ ಮತ್ತು ದಾವಣಗೆರೆ ಬೈಪಾಸ್‌ ನಡುವೆ ಇರುವ ಶ್ಯಾಮನೂರು ಪ್ಯಾಲೇಸ್‌ ಮೈದಾನದಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.

ಸಿದ್ದರಾಮಯ್ಯ ಅವರು ಮಂಗಳವಾರ ಮಧ್ಯಾಹ್ಮ 2.30 ಕ್ಕೆ ಹುಬ್ಬಳ್ಳಿಗೆ ತೆರಳಲಿದ್ದಾರೆ. ಮಧ್ಯಾಹ್ಮ 3.30 ಕ್ಕೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಅವರನ್ನು ಸಿದ್ದರಾಮಯ್ಯ ಸ್ವಾಗತಿಸಲಿದ್ದಾರೆ. ಬಳಿಕ ಹುಬ್ಬಳ್ಳಿಯಲ್ಲಿ ಕೆಪಿಸಿಸಿ ರಾಜಕೀಯ ಸಲಹಾ ಸಮಿತಿ ಸಭೆ ನಡೆಯಲಿದ್ದು, ಅದರಲ್ಲಿ ರಾಜ್ಯ ಕಾಂಗ್ರೆಸ್ ಪ್ರಮುಖ ನಾಯಕರು ಭಾಗಿಯಾಗಲಿದ್ದಾರೆ.

ಸಿದ್ದರಾಮಯ್ಯ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ನಡೆಯುತ್ತಿರುವ ಸಿದ್ದರಾಮೋತ್ಸವ ಕಾರ್ಯಕ್ರಮ ಬುಧವಾರ ಬೆಳಗ್ಗೆ 11 ಗಂಟೆಗೆ ಆರಂಭವಾಗಲಿದೆ. ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಮುಖ್ಯ ಅಥಿತಿಯಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸುಮಾರು ಐದು ಲಕ್ಷ ಜನರು ಭಾಗಿಯಾಗುವ ನಿರೀಕ್ಷೆ ಇದೆ.

ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಸರ್ಕಾರದ ಅವಧಿಯ ಕಾರ್ಯಕ್ರಮಗಳು ಹಾಗೂ ಜನಪರ ಯೋಜನೆಗಳ ಕುರಿತಾಗಿ ಅನಾವರಣ ಮಾಡಲಿದ್ದಾರೆ.

ಸಿದ್ದರಾಮೋತ್ವವ ಕಾರ್ಯಕ್ರಮದಲ್ಲಿ ಸುಮಾರು ಐದು ಲಕ್ಷ ಜನರು ಸೇರುವ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಒಟ್ಟು ಒಂಬತ್ತು ವಿಭಾಗಗಳಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಪಾರ್ಕಿಂಗ್, ಸಂಚಾರ ನಿಯಂತ್ರಣ, ರಸ್ತೆ ಬಂದೋಬಸ್ತ್, ವಾಹನಗಳ ಡೈವರ್ಷನ್‌ ಸಂಚಾರ ನಿಯಂತ್ರಣ, ರಸ್ತೆ ಬಂದೋಬಸ್ತ್ ಕಾರ್ಯಕ್ರಮದ ವೇದಿಕೆ ಬಂದೋಬಸ್ತ್ , ಸಾರ್ವಜನಿಕರು ಕುಳಿತುಕೊಳ್ಳುವ ಸ್ಥಳ, ಕಾರ್ಯಕ್ರಮದ ಸ್ಥಳದ ಬಂದೋಬಸ್ತ್, ಊಟದ ಸ್ಥಳದ ಬಂದೋಬಸ್ತ್ ಹಾಗೂ ದಾವಣಗೆರೆ ನಗರದ ಒಳಭಾಗದಲ್ಲಿ ಸುಗಮ ಸಂಚಾರ ಬಂದೋಬಸ್ತ್ ಮತ್ತು ಇತರೆ ಬಂದೋಬಸ್ತ್ ಎಂದು ವಿಭಾಗಿಸಲಾಗಿದೆ.

ಭದ್ರತೆಯಾಗಿ 16 ಡಿವೈಎಸ್‌ಪಿ, ಸಿಪಿಐ 118, ಪಿಎಸ್‌ಐ 360 , ಎಎಸ್‌ಐ 354, ಪೊಲೀಸ್ ಪೇದೆ 2796 ಸೇರಿದಂತೆ ಕೆಎಸ್‌ಆರ್‌ಪಿ, ಡಿಎಆರ್‌ ಪೊಲೀಸ್ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ. ಡ್ರೋಣ್ ಕ್ಯಾಮರಾಗಳ ಮೂಲಕವೂ ಹದ್ದಿನ ಕಣ್ಣಿಡಲಾಗುತ್ತದೆ.

 

Vishwa News 24

Recent Posts

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ -vishwanews24

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…

6 hours ago

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

16 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

16 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

16 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

1 day ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

1 day ago