Featured

ಆ.30ರಂದು 1 ರಿಂದ 8ನೇ ತರಗತಿ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ  ತೀರ್ಮಾನ : ಬಿ.ಸಿ ನಾಗೇಶ್ -Vishwanews24

ಆ.30ರಂದು 1 ರಿಂದ 8ನೇ ತರಗತಿ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ  ತೀರ್ಮಾನ : ಬಿ.ಸಿ ನಾಗೇಶ್ -Vishwanews24

ಹುಬ್ಬಳ್ಳಿ : “1-8ನೇ ತರಗತಿ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ಆ. 30ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಟಾಸ್ಕ್‌ ಫೋಸ್ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು” ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಆಗಸ್ಟ್‌ 23ರಿಂದ 9ರಿಂದ 12ನೇ ತರಗತಿಗಳನ್ನು ಆರಂಭಿಸಲಾಗಿದ್ದು, ಅದರ ಸಾಧಕ-ಬಾಧಕಗಳನ್ನು ಗಮನಿಸಿ 1-8ನೇ ತರಗತಿಗಳನ್ನು ಆರಂಭಿಸುವ ಕುರಿತು ಚಿಂತನೆ ನಡೆಸಲಾಗುವುದು” ಎಂದಿದ್ದಾರೆ.

“6 ರಿಂದ 8ನೇ ತರಗತಿ ಪ್ರಾರಂಭ ಮಾಡಬಹುದು ಎಂದು ಉನ್ನತ ಮಟ್ಟದ ತಜ್ಞರ ಸಮಿತಿಯ ಡಾ.ದೇವಿಪ್ರಸಾದ ಶೆಟ್ಟಿ ಅವರು ಸಲಹೆ ನೀಡಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಆರಂಭವಾದ ಶಾಲೆಗಳ ಕುರಿತು ಶಿಕ್ಷಕರು, ವಿದ್ಯಾರ್ಥಿಗಳ ಪೋಷಕರಿಂದ ಉತ್ತಮ ಉತ್ಸಾಹ ಕಂಡುಬಂದಿದ್ದು, ಈ ಕಾರಣದಿಂದ ಶಾಲೆಗಳನ್ನು ಆರಂಭಿಸಬಹುದು ಎನ್ನುವ ಆಲೋಚನೆ ವ್ಯಕ್ತವಾಗುತ್ತಿದೆ. ಆದರೆ, ತಾಂತ್ರಿಕ ಸಮಿತಿಯ ವರದಿಯ ಮೇಲೆ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

“ಒಂದು ವರ್ಷದಿಂದ ಶಿಕ್ಷಣದಿಂದ ವಂಚಿತರಾದ ಮಕ್ಕಳಿಗೆ ಮತ್ತೆ ಶಿಕ್ಷಣ ನೀಡುವ ನಿಟ್ಟಿನಲ್ಲಿ 1-8ನೇ ತರಗತಿ ಪ್ರಾರಂಭಿಸಲು ಶಿಕ್ಷಣ ಇಲಾಖೆ ಉತ್ಸುಕವಾಗಿದೆ. ಮಕ್ಕಳ ಮೇಲೆ ಕೊರೊನಾ ಮೂರನೇ ಅಲೆಯು ಪರಿಣಾಮ ಬೀರುವುದಿಲ್ಲ ಎಂದು ಮಕ್ಕಳ ತಜ್ಞರು ಹಾಗೂ ಶಿಕ್ಷಣ ತಜ್ಞರು ಸೇರಿದಂತೆ ಎಲ್ಲರೂ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಆಧಾರದ ಮೇರೆಗೆ ಕೊರೊನಾ ನಿಯಮಾವಳಿಗಳನ್ನು ಅನುಸರಿಸಿ ಶಾಲೆಗಳನ್ನು ಆರಂಭಿಸಲಾಗುವುದು. ಒಂದುವೇಳೆ, ಕೊರೊನಾದ ಮೂರನೇ ಅಲೆ ವ್ಯಾಪಿಸಿದ್ದಲ್ಲಿ ಶಾಲೆಗಳನ್ನು ಬಂದ್‌ ಮಾಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು” ಎಂದು ಹೇಳಿದ್ದಾರೆ.

Vishwa News 24

Recent Posts

ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು -vishwanews24

ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…

16 hours ago

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ -vishwanews24

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…

19 hours ago

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು -vishwanews24

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…

21 hours ago

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು -vishwanews24

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…

22 hours ago

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ -vishwanews24

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…

22 hours ago

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ -vishwanews24

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…

22 hours ago