ಬೆಂಗಳೂರು: ಇಂಗ್ಲೆಂಡ್-ವೇಲ್ಸ್ನಲ್ಲಿ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಆಟಗಾರರು ನೀಲಿ ಜೆರ್ಸಿಯ ಬದಲಾಗಿ ಕೇಸರಿ ಬಣ್ಣದ ಉಡುಪು ಧರಿಸಿ ಕಣಕ್ಕಿಳಿಯಲಿದ್ದಾ ರೆ.
ಇಂಟರ್ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ICC) ನಿಯಮದ ಅನುಸಾರ ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸುವ ಪ್ರತಿಯೊಂದು ತಂಡಕ್ಕೆ ಎರಡು ಬಣ್ಣಗಳ ಜೆರ್ಸಿಯನ್ನು ಬಳಸಿಕೊಳ್ಳಬಹುದಾಗಿದೆ.
ಸಾಮಾನ್ಯವಾಗಿ ಫುಟ್ಬಾಲ್ ಪಂದ್ಯಗಳ ವೇಳೆ ಕಂಡು ಬರುವ ಹೋಂ ಅಂಡ್ ಅವೇ ಮಾದರಿಯಲ್ಲಿ ಈ ನಿಯಮವಿದ್ದು, ಇಲ್ಲಿ ಆತಿಥೇಯ ದೇಶವನ್ನು ಹೊರತುಪಡಿಸಿ ಇತರ ತಂಡಗಳಿಗೆ ಜೆರ್ಸಿಯ ಆಯ್ಕೆ ಇರಲಿದೆ.
ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತ ತನ್ನ ಜೆರ್ಸಿ ಬಣ್ಣವನ್ನು ಬದಲಾಯಿಸಿ ಆರೆಂಜ್ ಉಡುಪು ಧರಿಸಿ ಆಡಲಿದೆ. ಟೀಂ ಇಂಡಿಯಾ ಜೂನ್ 30 ರಂದು ಇಂಗ್ಲೆಂಡ್ ವಿರುದ್ಧ ಸೆಣೆಸಾಟ ನಡೆಸಲಿದೆ.
ಆದರೆ ಟೀಮ್ ಇಂಡಿಯಾದ ಜೆರ್ಸಿ ಬಣ್ಣ ಈಗ ರಾಜಕೀಯ ಬಣ್ಣ ಪಡೆದುಕೊಂಡಿದ್ದು, ನರೇಂದ್ರ ಮೋದಿಯವರ ಸರ್ಕಾರ ದೇಶಾದ್ಯಂತ ಕೇಸರಿಕರಣ ಮಾಡಲು ಮುಂದಾಗಿದೆ. ಇದರ ಒಂದು ಭಾಗವಾಗಿ ಟೀಮ್ ಇಂಡಿಯಾ ಆಟಗಾರರಿಗೆ ಕೇಸರಿ ಬಣ್ಣದ ಜೆರ್ಸಿ ಧರಿಸುವಂತೆ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷದ ಕೆಲ ಮುಖಂಡರು ಕಿಡಿ ಕಾರಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…