ಬೆಂಗಳೂರು: ಇಂಗ್ಲೆಂಡ್-ವೇಲ್ಸ್ನಲ್ಲಿ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಆಟಗಾರರು ನೀಲಿ ಜೆರ್ಸಿಯ ಬದಲಾಗಿ ಕೇಸರಿ ಬಣ್ಣದ ಉಡುಪು ಧರಿಸಿ ಕಣಕ್ಕಿಳಿಯಲಿದ್ದಾ ರೆ.
ಇಂಟರ್ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ICC) ನಿಯಮದ ಅನುಸಾರ ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸುವ ಪ್ರತಿಯೊಂದು ತಂಡಕ್ಕೆ ಎರಡು ಬಣ್ಣಗಳ ಜೆರ್ಸಿಯನ್ನು ಬಳಸಿಕೊಳ್ಳಬಹುದಾಗಿದೆ.
ಸಾಮಾನ್ಯವಾಗಿ ಫುಟ್ಬಾಲ್ ಪಂದ್ಯಗಳ ವೇಳೆ ಕಂಡು ಬರುವ ಹೋಂ ಅಂಡ್ ಅವೇ ಮಾದರಿಯಲ್ಲಿ ಈ ನಿಯಮವಿದ್ದು, ಇಲ್ಲಿ ಆತಿಥೇಯ ದೇಶವನ್ನು ಹೊರತುಪಡಿಸಿ ಇತರ ತಂಡಗಳಿಗೆ ಜೆರ್ಸಿಯ ಆಯ್ಕೆ ಇರಲಿದೆ.
ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತ ತನ್ನ ಜೆರ್ಸಿ ಬಣ್ಣವನ್ನು ಬದಲಾಯಿಸಿ ಆರೆಂಜ್ ಉಡುಪು ಧರಿಸಿ ಆಡಲಿದೆ. ಟೀಂ ಇಂಡಿಯಾ ಜೂನ್ 30 ರಂದು ಇಂಗ್ಲೆಂಡ್ ವಿರುದ್ಧ ಸೆಣೆಸಾಟ ನಡೆಸಲಿದೆ.
ಆದರೆ ಟೀಮ್ ಇಂಡಿಯಾದ ಜೆರ್ಸಿ ಬಣ್ಣ ಈಗ ರಾಜಕೀಯ ಬಣ್ಣ ಪಡೆದುಕೊಂಡಿದ್ದು, ನರೇಂದ್ರ ಮೋದಿಯವರ ಸರ್ಕಾರ ದೇಶಾದ್ಯಂತ ಕೇಸರಿಕರಣ ಮಾಡಲು ಮುಂದಾಗಿದೆ. ಇದರ ಒಂದು ಭಾಗವಾಗಿ ಟೀಮ್ ಇಂಡಿಯಾ ಆಟಗಾರರಿಗೆ ಕೇಸರಿ ಬಣ್ಣದ ಜೆರ್ಸಿ ಧರಿಸುವಂತೆ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷದ ಕೆಲ ಮುಖಂಡರು ಕಿಡಿ ಕಾರಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…