Featured

ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ : ಇದು ಆತ್ಮಹತ್ಯೆಯಲ್ಲ ಅತ್ಯಾಚಾರ ಮತ್ತು ಕೊಲೆ – Vishwanews24

ರಾಯಚೂರು: ಇತ್ತೀಚೆಗೆ ರಾಯಚೂರಿನಲ್ಲಿ ನಡೆದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ದೊರೆತಿದ್ದು, ಇದು ಆತ್ಮಹತ್ಯೆಯಲ್ಲ ಬದಲಿಗೆ ಅತ್ಯಾಚಾರ ಮತ್ತು ಕೊಲೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ನಗರದ ಮಾಣಿಕಪ್ರಭು ದೇವಸ್ಥಾನದ ಹಿಂಭಾಗದ ಬೆಟ್ಟದ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ್ ಸಾವಿನ ಪ್ರಕರಣ ಈಗ ಹೊಸ ಟ್ವಿಸ್ಟ್ ಪಡೆದಿದೆ. ನೇತಾಜಿ ನಗರ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಎಂದು ದಾಖಲಾಗಿದ್ದ ಪ್ರಕರಣ ಈಗ ಅತ್ಯಾಚಾರವೆಸಗಿ, ಕೊಲೆ ಎಂದು ದಾಖಲಾಗಿದೆ. ಮೃತ ವಿದ್ಯಾರ್ಥಿನಿ ಮಧು ತಾಯಿ ರೇಣುಕಾದೇವಿ ನೀಡಿದ ದೂರಿನ ಮೇರೆಗೆ ಪೊಲೀಸರು ಅತ್ಯಾಚಾರ ಕೊಲೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಮಧು ತಾಯಿ ರೇಣುಕಾದೇವಿ ನೀಡಿರುವ ದೂರಿನ ಮೇರೆಗೆ ಅತ್ಯಾಚಾರ, ಕೊಲೆ ಪ್ರಕರಣ ದಾಖಲಿಸಿಕೊಂಡು ಆರೋಪಿ ಸುದರ್ಶನ್ ಎಂಬಾತನನ್ನು ಬಂಧಿಸಲಾಗಿದೆ. ಇನ್ನೂ ಎರಡು ಮೂರು ದಿನದಲ್ಲಿ ಮರಣೋತ್ತರ ಪರೀಕ್ಷೆಯ ವರದಿ ಬರಲಿದ್ದು ಸತ್ಯಾಂಶ ಹೊರಬರಲಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಹೋರಾಟವನ್ನು ಇನ್ನೂ ಜೀವಂತವಿಟ್ಟಿರುವ ವಿದ್ಯಾರ್ಥಿಗಳು ಮಧುಸಾವಿಗೆ ನ್ಯಾಯ ಸಿಗುವವರೆಗೆ ಸುಮ್ಮನಿರುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಆಕೆಯ ಸಾವಿಗೆ ನ್ಯಾಯ ಸಿಗದಿದ್ದರೆ ರಾಯಚೂರು ಬಂದ್ ಮಾಡಿ ಹೋರಾಟ ನಡೆಸಲು ಮಂದಾಗುವುದಾಗಿ ತಿಳಿಸಿದ್ದಾರೆ.
ಇನ್ನು ಈಗಾಗಲೇ ಈ ಸಂಬಂಧ ತಮ್ಮ ಹೋರಾಟ ತೀವ್ರಗೊಳಿಸಿರುವ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಲ್ಲಿ ಜಸ್ಟಿಸ್ ಫಾರ್ ಮಧು (#JusticeForMadhu) ಎಂಬ ಹ್ಯಾಶ್ ಟ್ಯಾಗ್ ನಡಿಯಲ್ಲಿ ಅಭಿಯಾನ ಆರಂಭಿಸಿದ್ದು, ಇದಕ್ಕೆ ವ್ಯಾಪಕ ಬೆಂಬಲ ಕೂಡ ವ್ಯಕ್ತವಾಗುತ್ತಿದೆ.
Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

6 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

6 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

6 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

7 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

7 hours ago