ಬೆಂಗಳೂರು: ಇಂಜಿನಿಯರ್ ಗಳಿಗೆ ಬಿಬಿಎಂಪಿ ಶಾಕ್ ನೀಡಿದ್ದು, ಅವೈಜ್ಞಾನಿಕವಾಗಿ ಗುಂಡಿ ಮುಚ್ಚಿದರೆ ಪ್ರತಿ ಗುಂಡಿಗೆ 1 ಸಾವಿರ ರೂ. ದಂಡ ವಿಧಿಸಲು ಬಿಬಿಎಂಪಿ ನಿರ್ಧರಿಸಿದೆ.
ದಕ್ಷಿಣ ವಲಯ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ, ಪಾದಚಾರಿ ಮಾರ್ಗ ದುರಸ್ತಿಗೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ಮೇಯರ್ ಗಂಗಾಂಬಿಕೆ ಮಂಗಳವಾರ ವಲಯ ಅಧಿಕಾರಿ ಗಳೊಂದಿಗೆ ಸಭೆ ನಡೆಸಿದರು.
ವಾರ್ಡ್ ಮಟ್ಟದಲ್ಲಿನ ಸಮಸ್ಯೆ ನಿವಾರಿಸಲು ಕ್ರಮ ಕೈಗೊಳ್ಳಬೇಕು. ಪ್ರಮುಖವಾಗಿ ರಸ್ತೆ ಗುಂಡಿ, ಬೀದಿ ದೀಪ, ಕಸದ ಸಮಸ್ಯೆಗಳಿಗೆ ಪರಿಹಾರ ನೀಡಬೇಕು. ವಾರ್ಡ್ ನಲ್ಲಿ ಪರಿಶೀಲನೆ ನಡೆಸಿ ಸಮಸ್ಯೆಗಳ ಪಟ್ಟಿ ಮಾಡಬೇಕು. ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಲು ಮುಂದಾಗಬೇಕು ಎಂದು ಇಂಜಿನಿಯರ್ಗಳಿಗೆ ಸೂಚಿಸಿದರು.
ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿ ಕೊಳ್ಳುವುದು ಪ್ರತಿ ಇಂಜಿನಿಯರ್ ಜವಾಬ್ದಾರಿ. ವೈಜ್ಞಾನಿಕವಾಗಿ ರಸ್ತೆ ಗುಂಡಿ ಮುಚ್ಚಲು ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಅವೈಜ್ಞಾನಿಕವಾಗಿ ಗುಂಡಿ ಮುಚ್ಚಿದರೆ ಗುಂಡಿಗೆ 1 ಸಾವಿರ ರೂ.ನಂತೆ ಇಂಜಿನಿಯರ್ಗಳಿಗೆ ದಂಡ ವಿಧಿಸಲಾಗುತ್ತದೆ ಎಂದು ಬಿಬಿಎಂಪಿ ಪ್ರಧಾನ ಇಂಜಿನಿಯರ್ ಎಂ.ಆರ್. ವೆಂಕಟೇಶ್ ತಿಳಿಸಿದರು.
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…
ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…