ಭಾರತೀಯ ಫುಟ್ಬಾಲ್ ದಂತಕಥೆ ಸುನಿಲ್ ಛೆಟ್ರಿ ಅಂತಾರಾಷ್ಟ್ರೀಯ ಫುಟ್ಬಾಲ್ನಿಂದ ನಿವೃತ್ತಿ ಘೋಷಿಸಿದ್ದಾರೆ. ಜೂನ್ 6 ರಂದು ಕೋಲ್ಕತ್ತಾದ ಸಾಲ್ಟ್ ಲೇಕ್ ಸ್ಟೇಡಿಯಂನಲ್ಲಿ ನಡೆಯಲಿರುವ ಕುವೈತ್ ವಿರುದ್ಧದ ಪಂದ್ಯದ ಮೂಲಕ ಇಂಟರ್ನ್ಯಾಷನಲ್ ಫುಟ್ಬಾಲ್ಗೆ ವಿದಾಯ ಹೇಳುವುದಾಗಿ ಛೆಟ್ರಿ ತಿಳಿಸಿದ್ದಾರೆ. 39 ವರ್ಷ ವಯಸ್ಸಿನ ಸುನಿಲ್, ಭಾರತದ ಪರ ಈವರೆಗೆ 150 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 94 ಗೋಲುಗಳನ್ನು ಗಳಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಇದೀಗ ಕುವೈತ್ ವಿರುದ್ಧದ ವಿಶ್ವಕಪ್ ಅರ್ಹತಾ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕೆರಿಯರ್ ಅಂತ್ಯಗೊಳಿಸಲು ಸುನಿಲ್ ಛೆಟ್ರಿ ನಿರ್ಧರಿಸಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿರುವ ಸುನಿಲ್ ಛೆಟ್ರಿ, ನಾನು ಎಂದಿಗೂ ಮರೆಯದ ಮತ್ತು ಆಗಾಗ್ಗೆ ನೆನಪಿಸಿಕೊಳ್ಳುವ ಒಂದು ದಿನವಿದೆ. ಅದು ನನ್ನ ದೇಶಕ್ಕಾಗಿ ಆಡಿದ ಮೊದಲ ಪಂದ್ಯದ ದಿನ. ಅದು ನಂಬಲಸಾಧ್ಯವಾಗಿತ್ತು. ಅಂದು ಬೆಳಿಗ್ಗೆ ರಾಷ್ಟ್ರೀಯ ತಂಡದ ಕೋಚ್ ಸುಖಿ ಸರ್, ನನ್ನ ಬಳಿಗೆ ಬಂದು ಆಡುತ್ತೀರಿ ಎಂದರು. ಆ ಅನುಭವವನ್ನು ಹೇಳಲಾಸಾಧ್ಯ. ನಾನು ನನ್ನ ಜರ್ಸಿಯನ್ನು ತೆಗೆದುಕೊಂಡೆ. ಅಲ್ಲದೆ ಅದ ಮೇಲೆ ಸ್ವಲ್ಪ ಸುಗಂಧ ದ್ರವ್ಯವನ್ನು ಸಿಂಪಡಿಸಿದೆ. ಏಕೆ ಎಂಬುದು ನಿಜಕ್ಕೂ ನನಗೆ ತಿಳಿದಿಲ್ಲ.
ಆ ದಿನ, ನನ್ನ ಚೊಚ್ಚಲ ಪಂದ್ಯದಲ್ಲಿ ನನ್ನ ಮೊದಲ ಗೋಲು… ಬಹುಶಃ ನಾನು ಎಂದಿಗೂ ಮರೆಯುವುದಿಲ್ಲ. ಅಲ್ಲದೆ ನನ್ನ ರಾಷ್ಟ್ರೀಯ ತಂಡದ ಪ್ರಯಾಣದ ಅತ್ಯುತ್ತಮ ದಿನಗಳನ್ನು ಸಹ ಮರೆಯಲಾರೆ ಎಂದು ಸುನಿಲ್ ಛೆಟ್ರಿ ಹೇಳಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…