ಭಾರತೀಯ ಫುಟ್ಬಾಲ್ ದಂತಕಥೆ ಸುನಿಲ್ ಛೆಟ್ರಿ ಅಂತಾರಾಷ್ಟ್ರೀಯ ಫುಟ್ಬಾಲ್ನಿಂದ ನಿವೃತ್ತಿ ಘೋಷಿಸಿದ್ದಾರೆ. ಜೂನ್ 6 ರಂದು ಕೋಲ್ಕತ್ತಾದ ಸಾಲ್ಟ್ ಲೇಕ್ ಸ್ಟೇಡಿಯಂನಲ್ಲಿ ನಡೆಯಲಿರುವ ಕುವೈತ್ ವಿರುದ್ಧದ ಪಂದ್ಯದ ಮೂಲಕ ಇಂಟರ್ನ್ಯಾಷನಲ್ ಫುಟ್ಬಾಲ್ಗೆ ವಿದಾಯ ಹೇಳುವುದಾಗಿ ಛೆಟ್ರಿ ತಿಳಿಸಿದ್ದಾರೆ. 39 ವರ್ಷ ವಯಸ್ಸಿನ ಸುನಿಲ್, ಭಾರತದ ಪರ ಈವರೆಗೆ 150 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 94 ಗೋಲುಗಳನ್ನು ಗಳಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಇದೀಗ ಕುವೈತ್ ವಿರುದ್ಧದ ವಿಶ್ವಕಪ್ ಅರ್ಹತಾ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕೆರಿಯರ್ ಅಂತ್ಯಗೊಳಿಸಲು ಸುನಿಲ್ ಛೆಟ್ರಿ ನಿರ್ಧರಿಸಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿರುವ ಸುನಿಲ್ ಛೆಟ್ರಿ, ನಾನು ಎಂದಿಗೂ ಮರೆಯದ ಮತ್ತು ಆಗಾಗ್ಗೆ ನೆನಪಿಸಿಕೊಳ್ಳುವ ಒಂದು ದಿನವಿದೆ. ಅದು ನನ್ನ ದೇಶಕ್ಕಾಗಿ ಆಡಿದ ಮೊದಲ ಪಂದ್ಯದ ದಿನ. ಅದು ನಂಬಲಸಾಧ್ಯವಾಗಿತ್ತು. ಅಂದು ಬೆಳಿಗ್ಗೆ ರಾಷ್ಟ್ರೀಯ ತಂಡದ ಕೋಚ್ ಸುಖಿ ಸರ್, ನನ್ನ ಬಳಿಗೆ ಬಂದು ಆಡುತ್ತೀರಿ ಎಂದರು. ಆ ಅನುಭವವನ್ನು ಹೇಳಲಾಸಾಧ್ಯ. ನಾನು ನನ್ನ ಜರ್ಸಿಯನ್ನು ತೆಗೆದುಕೊಂಡೆ. ಅಲ್ಲದೆ ಅದ ಮೇಲೆ ಸ್ವಲ್ಪ ಸುಗಂಧ ದ್ರವ್ಯವನ್ನು ಸಿಂಪಡಿಸಿದೆ. ಏಕೆ ಎಂಬುದು ನಿಜಕ್ಕೂ ನನಗೆ ತಿಳಿದಿಲ್ಲ.
ಆ ದಿನ, ನನ್ನ ಚೊಚ್ಚಲ ಪಂದ್ಯದಲ್ಲಿ ನನ್ನ ಮೊದಲ ಗೋಲು… ಬಹುಶಃ ನಾನು ಎಂದಿಗೂ ಮರೆಯುವುದಿಲ್ಲ. ಅಲ್ಲದೆ ನನ್ನ ರಾಷ್ಟ್ರೀಯ ತಂಡದ ಪ್ರಯಾಣದ ಅತ್ಯುತ್ತಮ ದಿನಗಳನ್ನು ಸಹ ಮರೆಯಲಾರೆ ಎಂದು ಸುನಿಲ್ ಛೆಟ್ರಿ ಹೇಳಿದ್ದಾರೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…