ನವದೆಹಲಿ: ನೇತಾಜಿ ಸುಭಾಷ್ ಚಂದ್ರಬೋಸ್ ಅವರ 125ನೇ ಜನ್ಮದಿನದ ಅಂಗವಾಗಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಸುಭಾಷ್ ಚಂದ್ರಬೋಸ್ ಅವರ ಪ್ರತಿಮೆಯನ್ನು ಅನಾವರಣಗೊಳಿಸುವುದಾಗಿ ತಿಳಿಸಿದ್ದಾರೆ.
ಸುಭಾಷ್ ಚಂದ್ರ ಬೋಸ್ ಅವರು 1897ರ ಜನವರಿ 23ರಂದು ಜನಿಸಿದ್ದು, ಭಾನುವಾರ ಸುಭಾಷ್ ಚಂದ್ರಬೋಸ್ ಅವರ ಪ್ರತಿಮೆಯನ್ನು ದೆಹಲಿಯ ಇಂಡಿಯಾ ಗೇಟ್ನಲ್ಲಿ ಸ್ಥಾಪಿಸುವುದಾಗಿ ಮೋದಿ ಅವರು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಭವ್ಯ ಪ್ರತಿಮೆ ಪೂರ್ಣಗೊಳ್ಳುವವರೆಗೂ, ಅವರ ಹೊಲೊಗ್ರಾಮ್ ಪ್ರತಿಮೆಯನ್ನು ಅದೇ ಸ್ಥಳದಲ್ಲಿ ಇರುತ್ತದೆ. ಜನವರಿ 23ರಂದು ನೇತಾಜಿ ಅವರ ಹುಟ್ಟುಹಬ್ಬದ ದಿನ ಹೊಲೊಗ್ರಾಮ್ ಪ್ರತಿಮೆಯನ್ನು ನಾನು ಅನಾವರಣಗೊಳಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಈ ಮುನ್ನ ಕಿಂಗ್ ಜಾರ್ಜ್ ವಿ ಅವರ ಪ್ರತಿಮೆ ಈ ಸ್ಥಳದಲ್ಲಿತ್ತು. ಆದರೆ ಅದನ್ನು 1968ರಲ್ಲಿ ತೆಗೆದುಹಾಕಲಾಗಿತ್ತು. ಇದೀಗ ನೇತಾಜಿ ಅವರ ಗ್ರಾನೈಟ್ ಪ್ರತಿಮೆಯನ್ನು ಸ್ಥಾಪಿಸಲಾಗುತ್ತಿದೆ.
ಇಡೀ ರಾಷ್ಟ್ರ ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ 125 ನೇ ಜನ್ಮದಿನವನ್ನು ಆಚರಿಸುತ್ತಿರುವ ಸಮಯದಲ್ಲಿ, ಗ್ರಾನೈಟ್ನಿಂದ ಮಾಡಿದ ಅವರ ಭವ್ಯವಾದ ಪ್ರತಿಮೆಯನ್ನು ಇಂಡಿಯಾ ಗೇಟ್ನಲ್ಲಿ ಸ್ಥಾಪಿಸಲಾಗುತ್ತಿದೆ ಎಂಬ ವಿಚಾರವನ್ನು ಹಂಚಿಕೊಳ್ಳಲು ನನಗೆ ಸಂತೋಷವಾಗುತ್ತಿದೆ. ಭಾರತ ಅವರಿಗೆ ಚಿರಋಣಿಯಾಗಿರುತ್ತದೆ ಎಂಬುವುದನ್ನು ಇದು ಸೂಚಿಸುತ್ತದೆ ಎಂದು ತಿಳಿಸಿದ್ದಾರೆ.
ಈ ಮುನ್ನ ಬಿಜೆಪಿ ನಾಯಕರಾಗಿರುವ ಚಂದ್ರಬೋಸ್ ಅವರು ದೆಹಲಿಯ ಇಂಡಿಯಾ ಗೇಟ್ ಎದುರು ನೇತಾಜಿ ಅವರ ಪ್ರತಿಮೆ ಸ್ಥಾಪಿಸುವಂತೆ ಕೋರಿ ಪ್ರಧಾನಿ ಮೋದಿ ಅವರಿಗೆ ಬಹಿರಂಗ ಪತ್ರ ಬರೆದಿದ್ದರು. ಕರೆನ್ಸಿ ನೋಟುಗಳ ಮೇಲೆ ನೇತಾಜಿ ಅವರ ಭಾವ ಚಿತ್ರವನ್ನು ಮುದ್ರಿಸಲು ಮತ್ತು ಜನವರಿ 23ರಂದು ರಾಷ್ಟ್ರೀಯ ರಜಾ ದಿನವೆಂದು ಘೋಷಿಸುವಂತೆ ಪ್ರಧಾನಿ ಬಳಿ ಮನವಿ ಮಾಡಿದ್ದರು.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…