ಜಕಾರ್ತ: 189 ಮಂದಿ ಪ್ರಯಾಣಿಕರಿದ್ದ ಇಂಡೋನೇಷ್ಯಾ ಲಯನ್ ಏರ್’ಲೈನ್ಸ್ ಪ್ರಯಾಣಿಕ ವಿಮಾನ ಸಮುದ್ರದಲ್ಲಿ ಪತನಗೊಂಡಿರುವ ಘಟನೆ ಸೋಮವಾರ ನಡೆದಿದೆ.
ಇಂದು ಬೆಳಗ್ಗೆ ರಾಜಧಾನಿ ಜಕಾರ್ತದಿಂದ ಪಾಂಗ್ಕಲ್ ಪಿನಾಗ್ ದ್ವೀಪಕ್ಕೆ ಲಯನ್ಸ್ ಏರ್ಲೈನ್ಸ್ ಸಂಸ್ಥೆಗೆ ಸೇರಿದ್ದ ಜಿಟಿ610 ವಿಮಾನ ಎಂದಿನಂತೆ 6.20ರ ಸುಮಾರಿಗೆ ಟೇಕ್ ಆಫ್ ಆಗಿ ಹೊರಟಿತ್ತು. ಸುಮಾರು 7.30ರ ಹೊತ್ತಿಗೆ ಪಾಂಗ್ಕಲ್ ಪಿನಾಂಗ್ ತಲುಪಬೇಕಿತ್ತು. ಆದರೆ ಟೇಕಾಫ್ ಆದ 13 ನಿಮಿಷಗಳ ಬಳಿಕ ಏಕಾಏಕಿ ರೇಡಾರ್ ಸಂಪರ್ಕದಿಂದ ವಿಮಾನ ನಾಪತ್ತೆಯಾಗಿತ್ತು. ಅಲ್ಲದೇ ಕೊನೆಯ ಬಾರಿಗೆ ಜಿಟಿ610 ವಿಮಾನವು ಬೋಯಿಂಗ್ 737 ಮ್ಯಾಕ್ಸ್ 8 ಲಯನ್ ವಿಮಾನದ ಸಂಪರ್ಕಕ್ಕೆ 6.33ರಲ್ಲಿ ಯತ್ನಿಸಿತ್ತು. ಇದಾದ ಬಳಿಕ ಪಾಂಗ್ಕಲ್ ದ್ವೀಪದ ಬಳಿ ಸಮುದ್ರದಲ್ಲಿ ವಿಮಾನ ಪತನಗೊಂಡಿದೆ.
ವಿಮಾನ ಬೀಳುತ್ತಿರುವ ದೃಶ್ಯವನ್ನು ಜಕಾರ್ತ ಬಂದರಿನಿಂದ ಹೊರಟಿದ್ದ ಬೋಟ್ ಸಿಬ್ಬಂದಿ ನೋಡಿದ್ದು, ಕೂಡಲೇ ರಕ್ಷಣಾ ತಂಡಗಳಿಗೆ ವಿಷಯವನ್ನು ಮುಟ್ಟಿಸಿದ್ದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತೆರಳಿದ ರಕ್ಷಣಾ ತಂಡಗಳು ಪ್ರಯಾಣಿಕರಿಗಾಗಿ ತೀವ್ರ ಶೋಧ ಕಾರ್ಯ ನಡೆಸುತ್ತಿವೆ. ಅಲ್ಲದೇ ವಿಮಾನ ಪತನವಾದ ಸ್ಥಳದಲ್ಲಿ ವಿಮಾನದ ಅವಶೇಷಗಳು ಸಹ ಪತ್ತೆಯಾಗಿವೆ.
ಸುಮಾರು 210 ಪ್ರಯಾಣಿಕರನ್ನು ಹೊತ್ತೊಯ್ಯಬಲ್ಲ ಸಾಮರ್ಥ್ಯವನ್ನು ಈ ವಿಮಾನ ಹೊಂದಿತ್ತು. ದುರಂತದ ವೇಳೆ ವಿಮಾನದಲ್ಲಿ 189 ಮಂದಿ ಪ್ರಯಾಣಿಕರಿದ್ದರು ಎಂದು ಹೇಳಲಾಗುತ್ತಿದೆ. ದುರಂತದಲ್ಲಿ ಬದುಕುಳಿದಿರಬಹುದಾದ ಪ್ರಯಾಣಿಕರಿಗಾಗಿ ಶೋಧ ಹಾಗೂ ರಕ್ಷಣಾ ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…