Featured

ಇಂಡೋನೇಷ್ಯಾ ವಿಮಾನ ಪತನ : 189 ಪ್ರಯಾಣಿಕರಿದ್ದ ಜಕಾರ್ತ ಲಯನ್ ಏರ್’ಲೈನ್ಸ್ ವಿಮಾನ

ಜಕಾರ್ತ: 189 ಮಂದಿ ಪ್ರಯಾಣಿಕರಿದ್ದ ಇಂಡೋನೇಷ್ಯಾ ಲಯನ್ ಏರ್’ಲೈನ್ಸ್ ಪ್ರಯಾಣಿಕ ವಿಮಾನ ಸಮುದ್ರದಲ್ಲಿ ಪತನಗೊಂಡಿರುವ ಘಟನೆ ಸೋಮವಾರ ನಡೆದಿದೆ.

ಇಂದು ಬೆಳಗ್ಗೆ ರಾಜಧಾನಿ ಜಕಾರ್ತದಿಂದ ಪಾಂಗ್‍ಕಲ್ ಪಿನಾಗ್ ದ್ವೀಪಕ್ಕೆ ಲಯನ್ಸ್ ಏರ್‌‌ಲೈನ್ಸ್‌ ಸಂಸ್ಥೆಗೆ ಸೇರಿದ್ದ ಜಿಟಿ610 ವಿಮಾನ ಎಂದಿನಂತೆ 6.20ರ ಸುಮಾರಿಗೆ ಟೇಕ್ ಆಫ್ ಆಗಿ ಹೊರಟಿತ್ತು. ಸುಮಾರು 7.30ರ ಹೊತ್ತಿಗೆ ಪಾಂಗ್‍ಕಲ್ ಪಿನಾಂಗ್ ತಲುಪಬೇಕಿತ್ತು. ಆದರೆ ಟೇಕಾಫ್ ಆದ 13 ನಿಮಿಷಗಳ ಬಳಿಕ ಏಕಾಏಕಿ ರೇಡಾರ್ ಸಂಪರ್ಕದಿಂದ ವಿಮಾನ ನಾಪತ್ತೆಯಾಗಿತ್ತು. ಅಲ್ಲದೇ ಕೊನೆಯ ಬಾರಿಗೆ ಜಿಟಿ610 ವಿಮಾನವು ಬೋಯಿಂಗ್ 737 ಮ್ಯಾಕ್ಸ್ 8 ಲಯನ್ ವಿಮಾನದ ಸಂಪರ್ಕಕ್ಕೆ 6.33ರಲ್ಲಿ ಯತ್ನಿಸಿತ್ತು. ಇದಾದ ಬಳಿಕ ಪಾಂಗ್‍ಕಲ್ ದ್ವೀಪದ ಬಳಿ ಸಮುದ್ರದಲ್ಲಿ ವಿಮಾನ ಪತನಗೊಂಡಿದೆ.

ವಿಮಾನ ಬೀಳುತ್ತಿರುವ ದೃಶ್ಯವನ್ನು ಜಕಾರ್ತ ಬಂದರಿನಿಂದ ಹೊರಟಿದ್ದ ಬೋಟ್ ಸಿಬ್ಬಂದಿ ನೋಡಿದ್ದು, ಕೂಡಲೇ ರಕ್ಷಣಾ ತಂಡಗಳಿಗೆ ವಿಷಯವನ್ನು ಮುಟ್ಟಿಸಿದ್ದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತೆರಳಿದ ರಕ್ಷಣಾ ತಂಡಗಳು ಪ್ರಯಾಣಿಕರಿಗಾಗಿ ತೀವ್ರ ಶೋಧ ಕಾರ್ಯ ನಡೆಸುತ್ತಿವೆ. ಅಲ್ಲದೇ ವಿಮಾನ ಪತನವಾದ ಸ್ಥಳದಲ್ಲಿ ವಿಮಾನದ ಅವಶೇಷಗಳು ಸಹ ಪತ್ತೆಯಾಗಿವೆ.

ಸುಮಾರು 210 ಪ್ರಯಾಣಿಕರನ್ನು ಹೊತ್ತೊಯ್ಯಬಲ್ಲ ಸಾಮರ್ಥ್ಯವನ್ನು ಈ ವಿಮಾನ ಹೊಂದಿತ್ತು. ದುರಂತದ ವೇಳೆ ವಿಮಾನದಲ್ಲಿ 189 ಮಂದಿ ಪ್ರಯಾಣಿಕರಿದ್ದರು ಎಂದು ಹೇಳಲಾಗುತ್ತಿದೆ. ದುರಂತದಲ್ಲಿ ಬದುಕುಳಿದಿರಬಹುದಾದ ಪ್ರಯಾಣಿಕರಿಗಾಗಿ ಶೋಧ ಹಾಗೂ ರಕ್ಷಣಾ ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದೆ.

 

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

15 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

16 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

16 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

19 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

19 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

19 hours ago