ಇಂತಹವರು ವಂದೇ ಮಾತರಂ ಕೇಳಲೂ ಕೂಡ ಯೋಗ್ಯರಲ್ಲ : ಅಮೂಲ್ಯಗೆ ಮಹೇಶ್ ವಿಕ್ರಮ್ ಹೆಗ್ಡೆ -Vishwanews24

ಬೆಂಗಳೂರು: ವಿಮಾನ ನಿಲ್ದಾಣದಲ್ಲಿ ವಂದೇ ಮಾತರಂ ಹಾಡಿ ಎಂದು ಪೀಡಿಸಿದ್ದ ಅಮೂಲ್ಯಗೆ ತಿರುಗೇಟು ನೀಡಿರುವ ಪೋಸ್ಟ್ ಕಾರ್ಡ್ ನ್ಯೂಸ್ ಸಂಪಾದಕ ಮಹೇಶ್ ವಿಕ್ರಮ್ ಹೆಗ್ಡೆ ವಂದೇ ಮಾತರಂ ಕೇಳಲೂ ಕೂಡ ಇವರು ಯೋಗ್ಯರಲ್ಲ ಎಂದು ಹೇಳಿದ್ದಾರೆ.

ನಿನ್ನೆ ಫ್ರೀಡಂ ಪಾರ್ಕ್ ನಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನಾ ಕಾರ್ಯಕ್ರಮದಲ್ಲಿ ಪಾಕ್ ಪರ ಘೋಷಣೆ ಕೂಗಿ ದೇಶದ್ರೋಹ ಪ್ರಕರಣ ಎದುರಿಸುತ್ತಿರುವ ಅಮೂಲ್ಯ ವಿರುದ್ಧ ಪೋಸ್ಟ್ ಕಾರ್ಡ್ ನ್ಯೂಸ್ ಸಂಪಾದಕ ಮಹೇಶ್ ವಿಕ್ರಮ್ ಹೆಗ್ಡೆ ಕಿಡಿಕಾರಿದ್ದು, ಇಂತಹವರು ವಂದೇ ಮಾತರಂ ಕೇಳಲೂ ಕೂಡ ಯೋಗ್ಯರಲ್ಲ ಎಂದು ಹೇಳಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ವಿಕ್ರಮ್ ಮಹೇಶ್ ಹೆಗ್ಡೆ, ‘ಇದೇ ಕಾರಣಕ್ಕೆ ನಾನು ಅಂದು ವಿಮಾನ ನಿಲ್ದಾಣದಲ್ಲಿ ಮೌನವಹಿಸಿದ್ದೆ. ಇಂತಹವರು ವಂದೇ ಮಾತರಂ ಗೀತೆ ಕೇಳಲೂ ಕೂಡ ಯೋಗ್ಯರಲ್ಲ. ಕೇವಲ ಪ್ರಚಾರಕ್ಕಾಗಿ ಇಂತಹ ಗಿಮಿಕ್ ಗಳನ್ನು ಮಾಡುತ್ತಾರೆ. ಪಾಕಿಸ್ತಾನ ಪರ ಘೋಷಣೆ ಕೂಗುವವರನ್ನು ಪೊಲೀಸರು ಕ್ರೂರವಾಗಿ ಶಿಕ್ಷಿಸಬೇಕು. ಪಾಕಿಸ್ತಾನ ಪದದಲ್ಲಿದ ಪಾ ಅಕ್ಷರವನ್ನೂ ಕೂಡ ಉಚ್ಥರಿಸಲು ಅವರು ಭಯಪಡಬೇಕು. ಇಂತಹ ಟ್ರೆಂಡ್ ಅಪಾಯಕಾರಿಯಾಗಿದ್ದು, ಕೂಡಲೇ ನಿಲ್ಲಿಸಬೇಕು ಎಂದು ಹೇಳಿದ್ದಾರೆ.

ಪ್ರತಿಭಟನೆಯಲ್ಲಿ ಪಾಕ್ ಪರ ಘೋಷಣೆ ಕೂಗಿದ ಯುವತಿ ಅಮೂಲ್ಯ ಈ ಹಿಂದೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಪೋಸ್ಟ್ ಕಾರ್ಡ್ ನ್ಯೂಸ್ ಸಂಸ್ಥಾಪಕ ಮಹೇಶ್‌ ವಿಕ್ರಂ ಹೆಗ್ಡೆ ಅವರಿಗೆ ವಂದೇ ಮಾತರಂ ಹಾಡುವಂತೆ ಪೀಡಿಸಿದ್ದರು. ಅಲ್ಲದೆ ವಂದೇ ಮಾತರಂ ಗೀತೆ ಹಾಡುವ ಮೂಲಕ ನಿಮ್ಮ ದೇಶಭಕ್ತಿ ತೋರಿಸಿ ಎಂದು ಕಾಡಿದ್ದಳು.

Vishwa News 24

Recent Posts

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

1 hour ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

1 hour ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

1 hour ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

2 hours ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

3 hours ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

3 hours ago